<p><strong>ಮೈಸೂರು</strong>: ‘ನಗರದಲ್ಲಿ ಮಾನಂದವಾಡಿ ರಸ್ತೆಯ (ಎನ್ಐಇ ಕಾಲೇಜು ಎದುರಿನಲ್ಲಿ) ಒಂದು ಕಿ.ಮೀ. ವ್ಯಾಪ್ತಿಯಲ್ಲಿ ‘ವೈಟ್ಟ್ಯಾಪಿಂಗ್’ ಕಾಮಗಾರಿ ಪ್ರಾರಂಭವಾಗಿದ್ದು, ಇದರಿಂದ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರ ವ್ಯವಸ್ಥೆಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸೂಚಿಸಿದರು.</p><p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಾನಗರ ಪಾಲಿಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p><p>‘ನಗರದ 8 ರಸ್ತೆಗಳಿಗೆ ವೈಟ್ಟ್ಯಾಪಿಂಗ್ ಕಾಮಗಾರಿ ಅನುಮೋದನೆಯಾಗಿದೆ. ಮಾನಂದವಾಡಿ ರಸ್ತೆಯಲ್ಲಿ ಆರಂಭಗೊಂಡಿದೆ. ಬೋಗಾದಿ ರಸ್ತೆ ಹಾಗೂ ವಿಶ್ವಮಾನವ ಜೋಡಿ ರಸ್ತೆಗಳಲ್ಲೂ ಮೊದಲ ಹಂತದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು’ ಎಂದರು.</p><p>‘ಮಹಾಗರ ಪಾಲಿಕೆ ಅಧಿಕಾರಿಗಳು ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಸೆಸ್ಕ್ನವರು ವಿದ್ಯುತ್ ಕೇಬಲ್ಗೆ ತೊಂದರೆ ಆಗದಂತೆ ನೋಡಿಕೊಂಡು ವರದಿ ಸಲ್ಲಿಸಬೇಕು. ರಸ್ತೆ ನಿರ್ಮಿಸಿದ ನಂತರ ಅಗೆಯುವುದು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p><p>‘ಬೋಗಾದಿ ರಸ್ತೆಯಲ್ಲಿ ವೈಟ್ಟ್ಯಾಪಿಂಗ್ ಕಾಮಗಾರಿ ಪ್ರಾರಂಭಕ್ಕೂ ಮುನ್ನ ಲೋಕೋಪಯೋಗಿ ಇಲಾಖೆ ಹಾಗೂ ಹಾನಗರ ಪಾಲಿಕೆ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ, ಎರಡು ದಿನದೊಳಗೆ ವರದಿ ಸಲ್ಲಿಸಬೇಕು. ಬಳಿಕ ಕಾಮಗಾರಿ ಪ್ರಾರಂಭಿಸಬೇಕು’ ಎಂದು ತಿಳಿಸಿದರು.</p><p>‘ಸೆಸ್ಕ್ ವತಿಯಿಂದ ನಗರದ 400 ಕಿ.ಮೀ. ವ್ಯಾಪ್ತಿಯಲ್ಲಿ ಯುಜಿ ಕೇಬಲ್ ಅಳವಡಿಕೆ ಕಾಮಗಾರಿ ಪ್ರಗತಿಯಲ್ಲಿದೆ. ಈ ಸಂದರ್ಭದಲ್ಲಿ ಒಳಚರಂಡಿ ಹಾಗೂ ಕುಡಿಯುವ ನೀರಿನ ಪೈಪ್ಲೈನ್ಗೆ ಹಾನಿಯಾದಲ್ಲಿ ಒಂದು ದಿನದೊಳಗಾಗಿ ಸರಿಪಡಿಸಿ ನಂತರ ಕಾಮಗಾರಿ ಮುಂದುವರಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಬೇಕು’ ಎಂದರು.</p><p>‘ಈಗಾಗಲೇ ಕಾಮಗಾರಿ ವೇಳೆ, ಒಳಚರಂಡಿ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಹಾನಿ ಆಗಿರುವುದಾಗಿ ವರದಿಯಾಗಿದೆ. 15 ದಿನ ಕಾಮಗಾರಿ ಸ್ಥಗಿತಗೊಳಿಸಿ, ಹಾನಿಗೊಂಡ ಪೈಪ್ಲೈನ್ಗಳನ್ನು ಮೊದಲು ಸರಿಪಡಿಸಬೇಕು. ಈ ಬಗ್ಗೆ ಸೆಸ್ಕ್ ಹಾಗೂ ಹಾಗೂ ಪಾಲಿಕೆ ಅಧಿಕಾರಿಗಳು ವರದಿ ಸಲ್ಲಿಸಬೇಕು’ ಎಂದು ನಿರ್ದೇಶನ ನೀಡಿದರು.</p><p>ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಕಾರ್ಯಪಾಲಕ ಎಂಜಿನಿಯರ್ ಮಂಜು, ಸೆಸ್ಕ್ ಎಸ್ಇ ಸುನೀಲ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ನಗರದಲ್ಲಿ ಮಾನಂದವಾಡಿ ರಸ್ತೆಯ (ಎನ್ಐಇ ಕಾಲೇಜು ಎದುರಿನಲ್ಲಿ) ಒಂದು ಕಿ.ಮೀ. ವ್ಯಾಪ್ತಿಯಲ್ಲಿ ‘ವೈಟ್ಟ್ಯಾಪಿಂಗ್’ ಕಾಮಗಾರಿ ಪ್ರಾರಂಭವಾಗಿದ್ದು, ಇದರಿಂದ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರ ವ್ಯವಸ್ಥೆಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸೂಚಿಸಿದರು.</p><p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಾನಗರ ಪಾಲಿಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p><p>‘ನಗರದ 8 ರಸ್ತೆಗಳಿಗೆ ವೈಟ್ಟ್ಯಾಪಿಂಗ್ ಕಾಮಗಾರಿ ಅನುಮೋದನೆಯಾಗಿದೆ. ಮಾನಂದವಾಡಿ ರಸ್ತೆಯಲ್ಲಿ ಆರಂಭಗೊಂಡಿದೆ. ಬೋಗಾದಿ ರಸ್ತೆ ಹಾಗೂ ವಿಶ್ವಮಾನವ ಜೋಡಿ ರಸ್ತೆಗಳಲ್ಲೂ ಮೊದಲ ಹಂತದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು’ ಎಂದರು.</p><p>‘ಮಹಾಗರ ಪಾಲಿಕೆ ಅಧಿಕಾರಿಗಳು ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಸೆಸ್ಕ್ನವರು ವಿದ್ಯುತ್ ಕೇಬಲ್ಗೆ ತೊಂದರೆ ಆಗದಂತೆ ನೋಡಿಕೊಂಡು ವರದಿ ಸಲ್ಲಿಸಬೇಕು. ರಸ್ತೆ ನಿರ್ಮಿಸಿದ ನಂತರ ಅಗೆಯುವುದು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p><p>‘ಬೋಗಾದಿ ರಸ್ತೆಯಲ್ಲಿ ವೈಟ್ಟ್ಯಾಪಿಂಗ್ ಕಾಮಗಾರಿ ಪ್ರಾರಂಭಕ್ಕೂ ಮುನ್ನ ಲೋಕೋಪಯೋಗಿ ಇಲಾಖೆ ಹಾಗೂ ಹಾನಗರ ಪಾಲಿಕೆ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ, ಎರಡು ದಿನದೊಳಗೆ ವರದಿ ಸಲ್ಲಿಸಬೇಕು. ಬಳಿಕ ಕಾಮಗಾರಿ ಪ್ರಾರಂಭಿಸಬೇಕು’ ಎಂದು ತಿಳಿಸಿದರು.</p><p>‘ಸೆಸ್ಕ್ ವತಿಯಿಂದ ನಗರದ 400 ಕಿ.ಮೀ. ವ್ಯಾಪ್ತಿಯಲ್ಲಿ ಯುಜಿ ಕೇಬಲ್ ಅಳವಡಿಕೆ ಕಾಮಗಾರಿ ಪ್ರಗತಿಯಲ್ಲಿದೆ. ಈ ಸಂದರ್ಭದಲ್ಲಿ ಒಳಚರಂಡಿ ಹಾಗೂ ಕುಡಿಯುವ ನೀರಿನ ಪೈಪ್ಲೈನ್ಗೆ ಹಾನಿಯಾದಲ್ಲಿ ಒಂದು ದಿನದೊಳಗಾಗಿ ಸರಿಪಡಿಸಿ ನಂತರ ಕಾಮಗಾರಿ ಮುಂದುವರಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಬೇಕು’ ಎಂದರು.</p><p>‘ಈಗಾಗಲೇ ಕಾಮಗಾರಿ ವೇಳೆ, ಒಳಚರಂಡಿ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಹಾನಿ ಆಗಿರುವುದಾಗಿ ವರದಿಯಾಗಿದೆ. 15 ದಿನ ಕಾಮಗಾರಿ ಸ್ಥಗಿತಗೊಳಿಸಿ, ಹಾನಿಗೊಂಡ ಪೈಪ್ಲೈನ್ಗಳನ್ನು ಮೊದಲು ಸರಿಪಡಿಸಬೇಕು. ಈ ಬಗ್ಗೆ ಸೆಸ್ಕ್ ಹಾಗೂ ಹಾಗೂ ಪಾಲಿಕೆ ಅಧಿಕಾರಿಗಳು ವರದಿ ಸಲ್ಲಿಸಬೇಕು’ ಎಂದು ನಿರ್ದೇಶನ ನೀಡಿದರು.</p><p>ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಕಾರ್ಯಪಾಲಕ ಎಂಜಿನಿಯರ್ ಮಂಜು, ಸೆಸ್ಕ್ ಎಸ್ಇ ಸುನೀಲ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>