‘ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಾದ್ಯಂತ ಪ್ರವಾಸ ನಡೆಸಿ, ಜಿಲ್ಲಾಸ್ಪತ್ರೆಗಳಿಗೆ ಭೇಟಿ ನೀಡಿದ್ದ ಬಿ.ಶ್ರೀರಾಮುಲು ಆರೋಗ್ಯ ಖಾತೆಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದರು. ಆಗಿದ್ದರೂ ಖಾತೆಯನ್ನು ಕಿತ್ತುಕೊಂಡ ಹುನ್ನಾರವೇನು ? ಬಿಜೆಪಿ ಸರ್ಕಾರ ಏನೇ ಕುತಂತ್ರ ಮಾಡಿದರೂ, ಸಮುದಾಯ ಶ್ರೀರಾಮುಲು ಜೊತೆಯಲ್ಲಿದೆ. ಸಮಾಜ ಕಲ್ಯಾಣ ಇಲಾಖೆ ಖಾತೆಯೊಂದಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ದ್ಯಾವಪ್ಪ ಎಚ್ಚರಿಕೆ ನೀಡಿದರು.