ಇಲ್ಲಿನ ಸಾಹುಕಾರ್ ಚೆನ್ನಯ್ಯ ಕುಸ್ತಿ ಅಖಾಡದಲ್ಲಿ 4 ದಶಕಗಳ ಕಾಲ ನಡೆದ ಎಲ್ಲ ಕುಸ್ತಿ ಸ್ಪರ್ಧೆಗಳಲ್ಲಿ ತೀರ್ಪುಗಾರರಾಗಿ ಹಾಗೂ ಗಾಂಧಿನಗರದ ಹತ್ತು ಜನಗಳ ಗರಡಿಯ ಉಸ್ತಾದರಾಗಿ ಸೇವೆ ಸಲ್ಲಿಸಿದ್ದರು. ವೀರೇಂದ್ರಪಾಟೀಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ದಸರಾ ಕುಸ್ತಿ ಸಮಾರಂಭದಲ್ಲಿ ಸುವರ್ಣ ಪದಕ ನೀಡಿ ಇವರನ್ನು ಗೌರವಿಸಲಾಗಿತ್ತು.