ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಕ್ಕಲಿಗರು ಮೈಸೂರಲ್ಲಿ ಸ್ಥಾನಮಾನ ಕೇಳದೇ, ಸಮುದಾಯವೇ ಇಲ್ಲದಿರುವ ಜಾಗದಲ್ಲಿ ಕೇಳಲು ಸಾಧ್ಯವೇ? ಸುಧಾಮೂರ್ತಿ ಅವರಿಗೆ ರಾಜ್ಯಸಭಾ ಸ್ಥಾನ ನೀಡುವ ಬಿಜೆಪಿ ಯದುವೀರ್ ಅವರಿಗೂ ನೀಡಬೇಕಿತ್ತು. ಪ್ರತಾಪಸಿಂಹಗೆ ಟಿಕೆಟ್ ಕೈತಪ್ಪಲಿದೆ ಎಂಬ ಸುದ್ದಿ ಬಂದಾಗ ನನಗೆ ಅವಕಾಶ ನೀಡುವಂತೆ ಕೇಳಿದ್ದೆ, ಆದರೆ ಕೊಡಲಿಲ್ಲ. ಕಾರಣ, ಬಿಜೆಪಿ ಒಕ್ಕಲಿಗರನ್ನು ಮುಗಿಸಲು ಹೊರಟಿದೆ’ ಎಂದು ಆರೋಪಿಸಿದರು.