<p><strong>ಹುಣಸೂರು (ಮೈಸೂರು ಜಿಲ್ಲೆ):</strong> ಹುಣಸೂರು ಉಪವಿಭಾಗದಲ್ಲಿ ಆದಿವಾಸಿ ಸಮುದಾಯದ ಅಭಿವೃದ್ಧಿಗೆ 1980ರಲ್ಲಿ ‘ಡೀಡ್’ ಎಂಬ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆ ಪ್ರಾರಂಭಿಸಿದ್ದ ಜೆರ್ರಿ ಪೈಸ್ (87) ಬುಧವಾರ ನಿಧನರಾದರು.</p><p>ಅವರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ.</p><p>ಅಮೆರಿಕದಲ್ಲಿರುವ ಪುತ್ರಿ ಬರಬೇಕಿರುವುದರಿಂದಾಗಿ, ಅಂತ್ಯಕ್ರಿಯೆಯನ್ನು ಮಾರ್ಚ್ 7ರಂದು ನಡೆಸಲಾಗುವುದು, ಪಾರ್ಥಿವ ಶರೀರವನ್ನು ಮೈಸೂರಿನ ಸೇಂಟ್ ಜೋಸೆಫ್ ಆಸ್ಪತ್ರೆಯಲ್ಲಿ ಇಡಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.</p><p><strong>ಪರಿಚಯ:</strong> ‘ಡೀಡ್’ ಸಂಸ್ಥೆಯಲ್ಲಿ ಹಲವು ದಶಕ ಕಾರ್ಯನಿರ್ವಹಿಸಿದ್ದ ಜೆರ್ರಿ, ಆದಿವಾಸಿಗಳ ಆರೋಗ್ಯ, ಶಿಕ್ಷಣ, ವಸತಿ ಮತ್ತು ಅರಣ್ಯ ಹಕ್ಕುಗಳಿಗಾಗಿ ಶ್ರಮಿಸಿದ್ದರು. ಗಿರಿಜನರ ಸ್ವಾಭಿಮಾನದ ಬದುಕಿಗಾಗಿ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಜಾಗೃತಿಗೆ ಒತ್ತು ನೀಡಿದ್ದರು. </p><p>ಕರ್ನಾಟಕದಲ್ಲಿ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಮೊದಲ ಅಧ್ಯಕ್ಷರಾಗಿದ್ದರು. ಮೈಸೂರು ಜಿಲ್ಲೆಯಲ್ಲಿ ಸ್ವಯಂ ಸೇವಾ ಸಂಸ್ಥೆ ಮೈತ್ರಿಕೂಟ ಸ್ಥಾಪಿಸಿ ಅದರ ಅಧ್ಯಕ್ಷರಾಗಿ ಸಮಾಜ ಸೇವಾ ಕಾರ್ಯದಲ್ಲಿ ತೊಡಗಿದ್ದರು.</p><p>ಹುಣಸೂರು ನಗರದ ‘ಡೀಡ್’ ಸಂಸ್ಥೆಯಲ್ಲಿ ಮಾರ್ಚ್ 5ರಂದು ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ನಿರ್ದೇಶಕ ಶ್ರೀಕಾಂತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು (ಮೈಸೂರು ಜಿಲ್ಲೆ):</strong> ಹುಣಸೂರು ಉಪವಿಭಾಗದಲ್ಲಿ ಆದಿವಾಸಿ ಸಮುದಾಯದ ಅಭಿವೃದ್ಧಿಗೆ 1980ರಲ್ಲಿ ‘ಡೀಡ್’ ಎಂಬ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆ ಪ್ರಾರಂಭಿಸಿದ್ದ ಜೆರ್ರಿ ಪೈಸ್ (87) ಬುಧವಾರ ನಿಧನರಾದರು.</p><p>ಅವರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ.</p><p>ಅಮೆರಿಕದಲ್ಲಿರುವ ಪುತ್ರಿ ಬರಬೇಕಿರುವುದರಿಂದಾಗಿ, ಅಂತ್ಯಕ್ರಿಯೆಯನ್ನು ಮಾರ್ಚ್ 7ರಂದು ನಡೆಸಲಾಗುವುದು, ಪಾರ್ಥಿವ ಶರೀರವನ್ನು ಮೈಸೂರಿನ ಸೇಂಟ್ ಜೋಸೆಫ್ ಆಸ್ಪತ್ರೆಯಲ್ಲಿ ಇಡಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.</p><p><strong>ಪರಿಚಯ:</strong> ‘ಡೀಡ್’ ಸಂಸ್ಥೆಯಲ್ಲಿ ಹಲವು ದಶಕ ಕಾರ್ಯನಿರ್ವಹಿಸಿದ್ದ ಜೆರ್ರಿ, ಆದಿವಾಸಿಗಳ ಆರೋಗ್ಯ, ಶಿಕ್ಷಣ, ವಸತಿ ಮತ್ತು ಅರಣ್ಯ ಹಕ್ಕುಗಳಿಗಾಗಿ ಶ್ರಮಿಸಿದ್ದರು. ಗಿರಿಜನರ ಸ್ವಾಭಿಮಾನದ ಬದುಕಿಗಾಗಿ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಜಾಗೃತಿಗೆ ಒತ್ತು ನೀಡಿದ್ದರು. </p><p>ಕರ್ನಾಟಕದಲ್ಲಿ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಮೊದಲ ಅಧ್ಯಕ್ಷರಾಗಿದ್ದರು. ಮೈಸೂರು ಜಿಲ್ಲೆಯಲ್ಲಿ ಸ್ವಯಂ ಸೇವಾ ಸಂಸ್ಥೆ ಮೈತ್ರಿಕೂಟ ಸ್ಥಾಪಿಸಿ ಅದರ ಅಧ್ಯಕ್ಷರಾಗಿ ಸಮಾಜ ಸೇವಾ ಕಾರ್ಯದಲ್ಲಿ ತೊಡಗಿದ್ದರು.</p><p>ಹುಣಸೂರು ನಗರದ ‘ಡೀಡ್’ ಸಂಸ್ಥೆಯಲ್ಲಿ ಮಾರ್ಚ್ 5ರಂದು ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ನಿರ್ದೇಶಕ ಶ್ರೀಕಾಂತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>