<p><strong>ಮೈಸೂರು</strong>: ‘ದೆಹಲಿಯಲ್ಲಿ ಮೇ 24 ರಂದು ನಡೆಯುವ ಜನಜಾತಿ ಸಾಂಸ್ಕೃತಿಕ ಸಮಾಗಮದಲ್ಲಿ ದೇಶದ ಒಂದೂವರೆ ಲಕ್ಷ ಬುಡಕಟ್ಟು ಸಮುದಾಯದವರು ಪಾಲ್ಗೊಳ್ಳಲಿದ್ದಾರೆ. ಮೈಸೂರು ಜಿಲ್ಲೆಯಿಂದ ಸುಮಾರು 1,200 ಮಂದಿ ಭಾಗವಹಿಸಲಿದ್ದಾರೆ’ ಎಂದು ಗಿರಿಜನ ಸುರಕ್ಷಾ ವೇದಿಕೆ ಅಧ್ಯಕ್ಷ ಗಣೇಶ್ ಎಚ್.ಡಿ. ಕೋಟೆ ತಿಳಿಸಿದರು.</p>.<p>ಇಲ್ಲಿ ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಸಮುದಾಯದ ಜನ ಭಾಗವಹಿಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯ ಐದು ಭಾಗಗಳಿಂದ ಶೋಭಾಯಾತ್ರೆ ಹೊರಡಲಿದೆ. ಇದರಲ್ಲಿ ಗಿರಿಜನರು ತಮ್ಮದೇ ಆದ ಉಡುಗೆ, ತೊಡುಗೆ, ವಾದ್ಯಗಳೊಂದಿಗೆ ಪಾಲ್ಗೊಳ್ಳಲಿದ್ದಾರೆ’ ಎಂದರು.</p>.<p>ಸಂಘಟನೆಯ ರಾಜು, ಕಾಮರಾಜ್, ದೇವವಾಜ್ ಟಿ.ಕಾಟೂರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-39-1563850908</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ದೆಹಲಿಯಲ್ಲಿ ಮೇ 24 ರಂದು ನಡೆಯುವ ಜನಜಾತಿ ಸಾಂಸ್ಕೃತಿಕ ಸಮಾಗಮದಲ್ಲಿ ದೇಶದ ಒಂದೂವರೆ ಲಕ್ಷ ಬುಡಕಟ್ಟು ಸಮುದಾಯದವರು ಪಾಲ್ಗೊಳ್ಳಲಿದ್ದಾರೆ. ಮೈಸೂರು ಜಿಲ್ಲೆಯಿಂದ ಸುಮಾರು 1,200 ಮಂದಿ ಭಾಗವಹಿಸಲಿದ್ದಾರೆ’ ಎಂದು ಗಿರಿಜನ ಸುರಕ್ಷಾ ವೇದಿಕೆ ಅಧ್ಯಕ್ಷ ಗಣೇಶ್ ಎಚ್.ಡಿ. ಕೋಟೆ ತಿಳಿಸಿದರು.</p>.<p>ಇಲ್ಲಿ ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಸಮುದಾಯದ ಜನ ಭಾಗವಹಿಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯ ಐದು ಭಾಗಗಳಿಂದ ಶೋಭಾಯಾತ್ರೆ ಹೊರಡಲಿದೆ. ಇದರಲ್ಲಿ ಗಿರಿಜನರು ತಮ್ಮದೇ ಆದ ಉಡುಗೆ, ತೊಡುಗೆ, ವಾದ್ಯಗಳೊಂದಿಗೆ ಪಾಲ್ಗೊಳ್ಳಲಿದ್ದಾರೆ’ ಎಂದರು.</p>.<p>ಸಂಘಟನೆಯ ರಾಜು, ಕಾಮರಾಜ್, ದೇವವಾಜ್ ಟಿ.ಕಾಟೂರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-39-1563850908</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>