<p><strong>ತಿ.ನರಸೀಪುರ:</strong> ಪಟ್ಟಣದ ಪ್ರಮುಖ ವಾಣಿಜ್ಯ ವಹಿವಾಟಿನ ಕೇಂದ್ರವಾದ ಚಿಕ್ಕ ಅಂಗಡಿ ಬೀದಿಯ ಅಲ್ಲಲ್ಲಿ ರಸ್ತೆ ಕಾಂಕ್ರೀಟ್ ಕಿತ್ತು ಹೋಗಿದ್ದು, ದುರಸ್ತಿಗೊಳಿಸಬೇಕು ಎಂದು ಸಾರ್ವಜನಿಕರು ಹಾಗೂ ವರ್ತಕರು ಆಗ್ರಹಿಸಿದ್ದಾರೆ.</p>.<p>ಪುರಸಭಾ ವ್ಯಾಪ್ತಿಯ ಈ ರಸ್ತೆ ಮಾರುಕಟ್ಟೆ ಹಾಗೂ ತೇರಿನ ಬೀದಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ವ್ಯಾಪಾರಿ ಕೇಂದ್ರದ ರಸ್ತೆಯಾಗಿದೆ. ಚಿನ್ನ, ಬೆಳ್ಳಿ, ದಿನಸಿ ಪದಾರ್ಥ, ಬಟ್ಟೆ, ತರಕಾರಿ ವ್ಯಾಪಾರ ಹೆಚ್ಚಾಗಿರುತ್ತದೆ. ಸದಾ ಜನಸಂದಣಿಯಿಂದ ತುಂಬಿರುವ ಈ ರಸ್ತೆಯಲ್ಲಿ ಪ್ರತಿದಿನವೂ ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತದೆ.</p>.<p>ರಸ್ತೆ ಬಹಳ ಕಿರಿದಾಗಿರುವುದರಿಂದ ಪಾರ್ಕಿಂಗ್ ಸಮಸ್ಯೆಯೂ ಇದೆ. ಈ ರಸ್ತೆಯ ಕಾಂಕ್ರೀಟ್ ಕಿತ್ತು ಹೋಗಿದೆ. ಮಳೆ ಬಂದರೆ ಅಲ್ಲಲ್ಲಿ ರಸ್ತೆಯಲ್ಲಿ ನೀರು ನಿಂತು ಸಂಚಾರವೇ ದುಸ್ತರವಾಗಿದೆ. ಚರಂಡಿ ವ್ಯವಸ್ಥೆ ಸುಗಮವಾಗಿಲ್ಲದ ಕಾರಣ ಜೋರು ಮಳೆ ಬಂದಾಗ ಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತದೆ.</p>.<p>ದುರಸ್ತಿ ಕೋರಿ ಅನೇಕ ಬಾರಿ ಪುರಸಭಾ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಸ್ಥಳೀಯ ನಾಗರಿಕರ ದೂರು.</p>.<p>‘ರಸ್ತೆಯಲ್ಲಿ ಗುಂಡಿ ಬಿದ್ದಿವೆ. ಪ್ರತಿನಿತ್ಯ ವ್ಯಾಪಾರಕ್ಕಾಗಿ ಜನರು ಈ ರಸ್ತೆಯಲ್ಲಿ ಸಂಚರಿಸುವುದರಿಂದ ಜನರಿಗೆ ತೊಂದರೆಯಾಗಿದೆ. ಕೆಲವು ಕಡೆ ರಸ್ತೆಗೆ ಹಾಕಿರುವ ಕಾಂಕ್ರಿಟ್ನೊಂದಿಗೆ ಕಬ್ಬಿಣವೂ ಕಿತ್ತು ಬಂದಿದೆ. ಮಳೆ ಬಂದರೆ ಸಂಚರಿಸುವುದೇ ಕಷ್ಟ. ಪುರಸಭಾ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ ರಸ್ತೆ ಅಭಿವೃದ್ಧಿಗೆ ಕ್ರಮ ವಹಿಸಬೇಕು’ ಎಂದು ಸ್ಥಳೀಯ ನಿವಾಸಿ ಶ್ರೀಧರ್ ಹೇಳುವರು.</p>.<p>‘ಚಿಕ್ಕಂಗಡಿ ಬೀದಿ ಪರಿಶೀಲಿಸಿದ್ದು, ರಸ್ತೆಯ ಅಭಿವೃದ್ಧಿಗೆ ಅಂದಾಜು ವೆಚ್ಚ ತಯಾರಿಸಿ ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದು ಶೀಘ್ರ ಕಾಮಗಾರಿ ಆರಂಭಿಸಲಾಗುವುದು’ ಪುರಸಭೆ ಮುಖ್ಯಾಧಿಕಾರಿ ಬಿ.ಕೆ.ವಸಂತಕುಮಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿ.ನರಸೀಪುರ:</strong> ಪಟ್ಟಣದ ಪ್ರಮುಖ ವಾಣಿಜ್ಯ ವಹಿವಾಟಿನ ಕೇಂದ್ರವಾದ ಚಿಕ್ಕ ಅಂಗಡಿ ಬೀದಿಯ ಅಲ್ಲಲ್ಲಿ ರಸ್ತೆ ಕಾಂಕ್ರೀಟ್ ಕಿತ್ತು ಹೋಗಿದ್ದು, ದುರಸ್ತಿಗೊಳಿಸಬೇಕು ಎಂದು ಸಾರ್ವಜನಿಕರು ಹಾಗೂ ವರ್ತಕರು ಆಗ್ರಹಿಸಿದ್ದಾರೆ.</p>.<p>ಪುರಸಭಾ ವ್ಯಾಪ್ತಿಯ ಈ ರಸ್ತೆ ಮಾರುಕಟ್ಟೆ ಹಾಗೂ ತೇರಿನ ಬೀದಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ವ್ಯಾಪಾರಿ ಕೇಂದ್ರದ ರಸ್ತೆಯಾಗಿದೆ. ಚಿನ್ನ, ಬೆಳ್ಳಿ, ದಿನಸಿ ಪದಾರ್ಥ, ಬಟ್ಟೆ, ತರಕಾರಿ ವ್ಯಾಪಾರ ಹೆಚ್ಚಾಗಿರುತ್ತದೆ. ಸದಾ ಜನಸಂದಣಿಯಿಂದ ತುಂಬಿರುವ ಈ ರಸ್ತೆಯಲ್ಲಿ ಪ್ರತಿದಿನವೂ ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತದೆ.</p>.<p>ರಸ್ತೆ ಬಹಳ ಕಿರಿದಾಗಿರುವುದರಿಂದ ಪಾರ್ಕಿಂಗ್ ಸಮಸ್ಯೆಯೂ ಇದೆ. ಈ ರಸ್ತೆಯ ಕಾಂಕ್ರೀಟ್ ಕಿತ್ತು ಹೋಗಿದೆ. ಮಳೆ ಬಂದರೆ ಅಲ್ಲಲ್ಲಿ ರಸ್ತೆಯಲ್ಲಿ ನೀರು ನಿಂತು ಸಂಚಾರವೇ ದುಸ್ತರವಾಗಿದೆ. ಚರಂಡಿ ವ್ಯವಸ್ಥೆ ಸುಗಮವಾಗಿಲ್ಲದ ಕಾರಣ ಜೋರು ಮಳೆ ಬಂದಾಗ ಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತದೆ.</p>.<p>ದುರಸ್ತಿ ಕೋರಿ ಅನೇಕ ಬಾರಿ ಪುರಸಭಾ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಸ್ಥಳೀಯ ನಾಗರಿಕರ ದೂರು.</p>.<p>‘ರಸ್ತೆಯಲ್ಲಿ ಗುಂಡಿ ಬಿದ್ದಿವೆ. ಪ್ರತಿನಿತ್ಯ ವ್ಯಾಪಾರಕ್ಕಾಗಿ ಜನರು ಈ ರಸ್ತೆಯಲ್ಲಿ ಸಂಚರಿಸುವುದರಿಂದ ಜನರಿಗೆ ತೊಂದರೆಯಾಗಿದೆ. ಕೆಲವು ಕಡೆ ರಸ್ತೆಗೆ ಹಾಕಿರುವ ಕಾಂಕ್ರಿಟ್ನೊಂದಿಗೆ ಕಬ್ಬಿಣವೂ ಕಿತ್ತು ಬಂದಿದೆ. ಮಳೆ ಬಂದರೆ ಸಂಚರಿಸುವುದೇ ಕಷ್ಟ. ಪುರಸಭಾ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ ರಸ್ತೆ ಅಭಿವೃದ್ಧಿಗೆ ಕ್ರಮ ವಹಿಸಬೇಕು’ ಎಂದು ಸ್ಥಳೀಯ ನಿವಾಸಿ ಶ್ರೀಧರ್ ಹೇಳುವರು.</p>.<p>‘ಚಿಕ್ಕಂಗಡಿ ಬೀದಿ ಪರಿಶೀಲಿಸಿದ್ದು, ರಸ್ತೆಯ ಅಭಿವೃದ್ಧಿಗೆ ಅಂದಾಜು ವೆಚ್ಚ ತಯಾರಿಸಿ ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದು ಶೀಘ್ರ ಕಾಮಗಾರಿ ಆರಂಭಿಸಲಾಗುವುದು’ ಪುರಸಭೆ ಮುಖ್ಯಾಧಿಕಾರಿ ಬಿ.ಕೆ.ವಸಂತಕುಮಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>