<p><strong>ಮೈಸೂರು:</strong> ಜಿಲ್ಲೆಯಲ್ಲಿ ಪ್ಲಾಸ್ಮಾ ಬ್ಯಾಂಕ್ ತೆರೆಯಬೇಕು. ಕನಿಷ್ಠ ಪಕ್ಷ ಪ್ಲಾಸ್ಮಾ ತೆಗೆದು ರೋಗಿಗಳಿಗೆ ನೀಡುವ ವ್ಯವಸ್ಥೆಯಾದರೂ ಜಾರಿಗೆ ಬರಬೇಕು. ಇಲ್ಲದೇ ಹೋದರೆ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಡಾಕ್ಟರ್ ಸೆಲ್ನ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಭರತ್ಕುಮಾರ್ ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸದ್ಯ ಮೈಸೂರಿನವರು ಪ್ಲಾಸ್ಮಾ ತೆಗೆದುಕೊಳ್ಳಲು ಮಂಡ್ಯ ಹಾಗೂ ಬೆಂಗಳೂರಿಗೆ ಹೋಗಬೇಕಾದ ಸ್ಥಿತಿ ಇದೆ. ಕನಿಷ್ಠ ಜಿಲ್ಲಾಡಳಿತ ಈ ವ್ಯವಸ್ಥೆಯನ್ನಾದರೂ ಇಲ್ಲಿ ಕಲ್ಪಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.</p>.<p>ಇದಕ್ಕಾಗಿಯೇ ಪ್ಲಾಸ್ಮಾ ದಾನ ಶಿಬಿರವನ್ನು ಕೆಪಿಸಿಸಿ ಡಾಕ್ಟರ್ ಸೆಲ್ ವತಿಯಿಂದ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಉದಯಗಿರಿಯ ಕೂಬ ಕೋವಿಡ್ ಕೇರ್ ಸೆಂಟರ್ನಲ್ಲಿ ಸೆ. 18ರಂದು ಮಧ್ಯಾಹ್ನ 3 ಗಂಟೆಗೆ ಆಯೋಜಿಸಿದೆ. ಇದನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉದ್ಘಾಟಿಸಿದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆ ವಹಿಸುವರು ಎಂದು ಡಾ.ಹರ್ಷವರ್ಧನ್ ತಿಳಿಸಿದರು.</p>.<p>ಲಕ್ಷಣ ಇರುವ ಕೋವಿಡ್ ರೋಗಿಗಳು ಗುಣಮುಖರಾದ ಬಳಿಕ ಪ್ಲಾಸ್ಮಾ ದಾನ ಮಾಡಬಹುದು. ಇದರಿಂದ ಒಬ್ಬ ಕೋವಿಡ್ ರೋಗಿಯ ಜೀವವನ್ನು ಉಳಿಸಬಹುದಾಗಿದೆ. ಈಗಾಗಲೇ 90 ಮಂದಿ ದಾನ ಮಾಡುವುದಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಮತ್ತಷ್ಟು ಜನರು <strong>ಮೊ:</strong> 7892799074, 9535177064, 9880973703 ಸಂಪರ್ಕಿಸುವ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಡಾ.ಶಾಜಿಯಾ ಸುಲ್ತಾನ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಿಲ್ಲೆಯಲ್ಲಿ ಪ್ಲಾಸ್ಮಾ ಬ್ಯಾಂಕ್ ತೆರೆಯಬೇಕು. ಕನಿಷ್ಠ ಪಕ್ಷ ಪ್ಲಾಸ್ಮಾ ತೆಗೆದು ರೋಗಿಗಳಿಗೆ ನೀಡುವ ವ್ಯವಸ್ಥೆಯಾದರೂ ಜಾರಿಗೆ ಬರಬೇಕು. ಇಲ್ಲದೇ ಹೋದರೆ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಡಾಕ್ಟರ್ ಸೆಲ್ನ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಭರತ್ಕುಮಾರ್ ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸದ್ಯ ಮೈಸೂರಿನವರು ಪ್ಲಾಸ್ಮಾ ತೆಗೆದುಕೊಳ್ಳಲು ಮಂಡ್ಯ ಹಾಗೂ ಬೆಂಗಳೂರಿಗೆ ಹೋಗಬೇಕಾದ ಸ್ಥಿತಿ ಇದೆ. ಕನಿಷ್ಠ ಜಿಲ್ಲಾಡಳಿತ ಈ ವ್ಯವಸ್ಥೆಯನ್ನಾದರೂ ಇಲ್ಲಿ ಕಲ್ಪಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.</p>.<p>ಇದಕ್ಕಾಗಿಯೇ ಪ್ಲಾಸ್ಮಾ ದಾನ ಶಿಬಿರವನ್ನು ಕೆಪಿಸಿಸಿ ಡಾಕ್ಟರ್ ಸೆಲ್ ವತಿಯಿಂದ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಉದಯಗಿರಿಯ ಕೂಬ ಕೋವಿಡ್ ಕೇರ್ ಸೆಂಟರ್ನಲ್ಲಿ ಸೆ. 18ರಂದು ಮಧ್ಯಾಹ್ನ 3 ಗಂಟೆಗೆ ಆಯೋಜಿಸಿದೆ. ಇದನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉದ್ಘಾಟಿಸಿದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆ ವಹಿಸುವರು ಎಂದು ಡಾ.ಹರ್ಷವರ್ಧನ್ ತಿಳಿಸಿದರು.</p>.<p>ಲಕ್ಷಣ ಇರುವ ಕೋವಿಡ್ ರೋಗಿಗಳು ಗುಣಮುಖರಾದ ಬಳಿಕ ಪ್ಲಾಸ್ಮಾ ದಾನ ಮಾಡಬಹುದು. ಇದರಿಂದ ಒಬ್ಬ ಕೋವಿಡ್ ರೋಗಿಯ ಜೀವವನ್ನು ಉಳಿಸಬಹುದಾಗಿದೆ. ಈಗಾಗಲೇ 90 ಮಂದಿ ದಾನ ಮಾಡುವುದಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಮತ್ತಷ್ಟು ಜನರು <strong>ಮೊ:</strong> 7892799074, 9535177064, 9880973703 ಸಂಪರ್ಕಿಸುವ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಡಾ.ಶಾಜಿಯಾ ಸುಲ್ತಾನ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>