ಮೈಸೂರು: ಸಮರ್ಪಕ ಪರಿಹಾರಕ್ಕೆ ಒತ್ತಾಯ
ಮೈಸೂರು: ‘ಕಾಡು ಪ್ರಾಣಿಗಳಿಂದ ಜನರನ್ನ ರಕ್ಷಿಸಬೇಕು ಹಾಗೂ ಮೃತರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು‘ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಜಿಲ್ಲಾ ಸಮಿತಿಯ ಕಾರ್ಯದರ್ಶಿ ಜಗದೀಶ್ ಸೂರ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಜಿಲ್ಲೆಯ ತಿ.ನರಸೀಪುರ, ಎಚ್.ಡಿ.ಕೋಟೆ ತಾಲ್ಲೂಕು ಸೇರಿದಂತೆ ಹಲವೆಡೆ ಜನರ ಮೇಲೆ ಹುಲಿ, ಚಿರತೆ ದಾಳಿ ಹೆಚ್ಚಾಗುತ್ತಿದೆ. ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಪ್ರಾಣಿಗಳು ಈಗ ಮನುಷ್ಯನ ಮೇಲೂ ದಾಳಿ ನಡೆಸಿ ಪ್ರಾಣ ತೆಗೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಡು ಪ್ರಾಣಿಗಳಿಂದ ಸಾವಿಗೀಡಾದವರ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.