ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಜಿಲ್ಲೆಯ ತಿ.ನರಸೀಪುರ, ಎಚ್.ಡಿ.ಕೋಟೆ ತಾಲ್ಲೂಕು ಸೇರಿದಂತೆ ಹಲವೆಡೆ ಜನರ ಮೇಲೆ ಹುಲಿ, ಚಿರತೆ ದಾಳಿ ಹೆಚ್ಚಾಗುತ್ತಿದೆ. ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಪ್ರಾಣಿಗಳು ಈಗ ಮನುಷ್ಯನ ಮೇಲೂ ದಾಳಿ ನಡೆಸಿ ಪ್ರಾಣ ತೆಗೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಡು ಪ್ರಾಣಿಗಳಿಂದ ಸಾವಿಗೀಡಾದವರ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.