<p><strong>ತಿ.ನರಸೀಪುರ:</strong> ‘ಕೇಂದ್ರದ ರೈಲ್ವೆ ನೇಮಕಾತಿಯಲ್ಲಿ ಕನ್ನಡವನ್ನು ಕೈ ಬಿಟ್ಟು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಪರೀಕ್ಷೆ ನಡೆಸಿರುವುದು ಖಂಡನೀಯ’ ಎಂದು ಕನ್ನಡ ಸಾಂಸ್ಕೃತಿಕ ಪರಿಷತ್ ರಾಜ್ಯಾಧ್ಯಕ್ಷ ಎಸ್.ಕೆ.ರಾಜೂಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಈ ನಡೆ ಒಕ್ಕೂಟ ವ್ಯವಸ್ಥೆಗೆ ಮಾರಕ ಮತ್ತು ಕನ್ನಡಿಗರಿಗೆ ಮಾಡಿದ ಅನ್ಯಾಯ, ಅಪಮಾನವಾಗಿದೆ. ಇದನ್ನು ನಮ್ಮ ಸಂಘಟನೆಯು ಖಂಡಿಸುತ್ತದೆ’ ಎಂದು ಗುರುವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ</p>.<p>‘ಇದರ ಬಗ್ಗೆ ಸಂಸತ್ತಿನಲ್ಲಿ ನಮ್ಮ ನಾಡಿನ ಸಂಸದರು ಯಾವುದೇ ಪ್ರತಿರೋಧ ವ್ಯಕ್ತಪಡಿಸಿಲ್ಲ, ಕೂಡಲೇ ಸಂಸದರು ಮತ್ತು ಸಚಿವರು ಈ ಬಗ್ಗೆ ಎಚ್ಚೆತ್ತುಕೊಂಡು ಸಂಬಂಧಿಸಿದವರ ಜೊತೆಗೆ ವ್ಯವಹರಿಸಿ ಕನ್ನಡ ಕೈ ಬಿಟ್ಟು ನಡೆಸಿರುವ ರೈಲ್ವೆ ನೇಮಕಾತಿ ಪರೀಕ್ಷೆಯನ್ನು ಕೂಡಲೇ ರದ್ದುಮಾಡಿ ಹೊಸದಾಗಿ ಕನ್ನಡದಲ್ಲಿಯೂ ಪರೀಕ್ಷೆಯನ್ನು ನಡೆಸಬೇಕು. ಜತೆಗೆ ರಾಜ್ಯ ಸರ್ಕಾರವು ವಿಧಾನಸಭೆಯ ಅಧಿವೇಶನದಲ್ಲಿ ಈ ಬಗ್ಗೆ ಖಂಡನಾ ನಿರ್ಣಯ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿ.ನರಸೀಪುರ:</strong> ‘ಕೇಂದ್ರದ ರೈಲ್ವೆ ನೇಮಕಾತಿಯಲ್ಲಿ ಕನ್ನಡವನ್ನು ಕೈ ಬಿಟ್ಟು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಪರೀಕ್ಷೆ ನಡೆಸಿರುವುದು ಖಂಡನೀಯ’ ಎಂದು ಕನ್ನಡ ಸಾಂಸ್ಕೃತಿಕ ಪರಿಷತ್ ರಾಜ್ಯಾಧ್ಯಕ್ಷ ಎಸ್.ಕೆ.ರಾಜೂಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಈ ನಡೆ ಒಕ್ಕೂಟ ವ್ಯವಸ್ಥೆಗೆ ಮಾರಕ ಮತ್ತು ಕನ್ನಡಿಗರಿಗೆ ಮಾಡಿದ ಅನ್ಯಾಯ, ಅಪಮಾನವಾಗಿದೆ. ಇದನ್ನು ನಮ್ಮ ಸಂಘಟನೆಯು ಖಂಡಿಸುತ್ತದೆ’ ಎಂದು ಗುರುವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ</p>.<p>‘ಇದರ ಬಗ್ಗೆ ಸಂಸತ್ತಿನಲ್ಲಿ ನಮ್ಮ ನಾಡಿನ ಸಂಸದರು ಯಾವುದೇ ಪ್ರತಿರೋಧ ವ್ಯಕ್ತಪಡಿಸಿಲ್ಲ, ಕೂಡಲೇ ಸಂಸದರು ಮತ್ತು ಸಚಿವರು ಈ ಬಗ್ಗೆ ಎಚ್ಚೆತ್ತುಕೊಂಡು ಸಂಬಂಧಿಸಿದವರ ಜೊತೆಗೆ ವ್ಯವಹರಿಸಿ ಕನ್ನಡ ಕೈ ಬಿಟ್ಟು ನಡೆಸಿರುವ ರೈಲ್ವೆ ನೇಮಕಾತಿ ಪರೀಕ್ಷೆಯನ್ನು ಕೂಡಲೇ ರದ್ದುಮಾಡಿ ಹೊಸದಾಗಿ ಕನ್ನಡದಲ್ಲಿಯೂ ಪರೀಕ್ಷೆಯನ್ನು ನಡೆಸಬೇಕು. ಜತೆಗೆ ರಾಜ್ಯ ಸರ್ಕಾರವು ವಿಧಾನಸಭೆಯ ಅಧಿವೇಶನದಲ್ಲಿ ಈ ಬಗ್ಗೆ ಖಂಡನಾ ನಿರ್ಣಯ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>