<p><strong>ಮೈಸೂರು:</strong> ‘ಕಳೆದ ವರ್ಷ ನಡೆದ ನಾಡಹಬ್ಬ ಮೈಸೂರು ದಸರಾದ ಖರ್ಚು–ವೆಚ್ಚದ ವಿವರವನ್ನು ಈವರೆಗೂ ಬಹಿರಂಗಪಡಿಸದಿರುವ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ನಡೆಯು ಹಲವು ಸಂಶಯಗಳಿಗೆ ಕಾರಣವಾಗಿದೆ’ ಎಂದು ಬಿಜೆಪಿ ಮುಖಂಡ ಡಾ.ಸುಶ್ರುತ್ ಗೌಡ ದೂರಿದ್ದಾರೆ. </p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘₹ 50 ಕೋಟಿಗೂ ಅಧಿಕ ಸಾರ್ವಜನಿಕರ ತೆರಿಗೆ ಹಣವನ್ನು ಖರ್ಚು ಮಾಡಿ ಉತ್ಸವ ನಡೆಸಲಾಗಿದೆ. ಇದರಲ್ಲಿ ಬಹಳಷ್ಟು ಅವ್ಯವಹಾರವಾಗಿದೆ ಎಂಬ ಅನುಮಾನ ಸಾರ್ವಜನಿಕರಲ್ಲಿದೆ. ಇದನ್ನು ನಿವಾರಿಸಲು ತಕ್ಷಣ ಜಿಲ್ಲಾಡಳಿತ ದಸರಾ ಖರ್ಚು–ವೆಚ್ಚ ಬಹಿರಂಗಪಡಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ದಸರೆಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಮೊತ್ತವೆಷ್ಟು, ಟಿಕೆಟ್ ಮಾರಾಟವಾಗಿದ್ದೆಷ್ಟು, ಪ್ರಾಯೋಜಕತ್ವದಲ್ಲಿ ಸಿಕ್ಕ ಮೊತ್ತವೆಷ್ಟು, ಖರ್ಚಾಗಿದ್ದೆಷ್ಟು ಎಂಬ ಮಾಹಿತಿಯನ್ನು ಅಧಿಕಾರಿಗಳು ಬಿಡುಗಡೆ ಮಾಡಿಲ್ಲ. ತಕ್ಷಣ ಮಾಹಿತಿ ನೀಡದಿದ್ದರೆ ಅದು ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕಳೆದ ವರ್ಷ ನಡೆದ ನಾಡಹಬ್ಬ ಮೈಸೂರು ದಸರಾದ ಖರ್ಚು–ವೆಚ್ಚದ ವಿವರವನ್ನು ಈವರೆಗೂ ಬಹಿರಂಗಪಡಿಸದಿರುವ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ನಡೆಯು ಹಲವು ಸಂಶಯಗಳಿಗೆ ಕಾರಣವಾಗಿದೆ’ ಎಂದು ಬಿಜೆಪಿ ಮುಖಂಡ ಡಾ.ಸುಶ್ರುತ್ ಗೌಡ ದೂರಿದ್ದಾರೆ. </p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘₹ 50 ಕೋಟಿಗೂ ಅಧಿಕ ಸಾರ್ವಜನಿಕರ ತೆರಿಗೆ ಹಣವನ್ನು ಖರ್ಚು ಮಾಡಿ ಉತ್ಸವ ನಡೆಸಲಾಗಿದೆ. ಇದರಲ್ಲಿ ಬಹಳಷ್ಟು ಅವ್ಯವಹಾರವಾಗಿದೆ ಎಂಬ ಅನುಮಾನ ಸಾರ್ವಜನಿಕರಲ್ಲಿದೆ. ಇದನ್ನು ನಿವಾರಿಸಲು ತಕ್ಷಣ ಜಿಲ್ಲಾಡಳಿತ ದಸರಾ ಖರ್ಚು–ವೆಚ್ಚ ಬಹಿರಂಗಪಡಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ದಸರೆಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಮೊತ್ತವೆಷ್ಟು, ಟಿಕೆಟ್ ಮಾರಾಟವಾಗಿದ್ದೆಷ್ಟು, ಪ್ರಾಯೋಜಕತ್ವದಲ್ಲಿ ಸಿಕ್ಕ ಮೊತ್ತವೆಷ್ಟು, ಖರ್ಚಾಗಿದ್ದೆಷ್ಟು ಎಂಬ ಮಾಹಿತಿಯನ್ನು ಅಧಿಕಾರಿಗಳು ಬಿಡುಗಡೆ ಮಾಡಿಲ್ಲ. ತಕ್ಷಣ ಮಾಹಿತಿ ನೀಡದಿದ್ದರೆ ಅದು ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>