‘ತುಂಬಾ ದುಃಖವಾಗಿ ಈ ನಿರ್ಧಾರ ಕೈಗೊಂಡೆ. ನನ್ನ ಜನ್ಮದಿನದ ಅಂಗವಾಗಿ 5 ಮಿ.ಲೀ. ರಕ್ತವನ್ನು ಸಿರಿಂಜ್ನಲ್ಲಿ ಆರೋಗ್ಯ ಸಿಬ್ಬಂದಿ ಸಹಾಯದಿಂದ ತೆಗೆದು ಅದರಿಂದ ಈ ಪತ್ರ ಬರೆದಿದ್ದೇನೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದ ನಂತರ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಲ್ಲಿಯ ಮೂಲಭೂತವಾದಿಗಳು ಬಿಜೆಪಿ ಕಾರ್ಯಕರ್ತರು ಮತ್ತು ಅಮಾಯಕ ಹಿಂದೂಗಳ ಕೊಲೆ ಮಾಡಿದ್ದಾರೆ. ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಹಲವಾರು ಪ್ರಕರಣಗಳು ದಾಖಲಾಗಿವೆ. ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ಭಯದಿಂದ ಪಕ್ಕದ ರಾಜ್ಯಗಳಿಗೆ ವಲಸೆ ಹೋಗಿದ್ದಾರೆ’ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.