ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯಕ್ಕೆ ಸಾಕಷ್ಟು ಬಾರಿ ಭೇಟಿ ನೀಡಿದರೂ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಈ ರೀತಿ ದ್ವೇಷ ತೀರಿಸಿಕೊಳ್ಳುತ್ತಿದ್ದಾರೆ. ಇಂಧನ ಸಬ್ಸಿಡಿ ಕಡಿತಗೊಳಿಸುವ ಮೂಲಕ ದೇಶದ ಅನೇಕ ಭಾಗಗಳಿಗೆ ನಿತ್ಯವೂ ವಿಮಾನ ಸಂಚಾರ ನಡೆಸುತ್ತಿದ್ದ ನಿಲ್ದಾಣವನ್ನು ಸಂಪೂರ್ಣ ಸೊರಗುವಂತೆ ಮಾಡಿದ್ದಾರೆ. ‘ಅಭಿವೃದ್ಧಿ ಮಾಡುತ್ತೇವೆ, ಭೂ ಸ್ವಾಧೀನ ನಡೆಯಲಿದೆ’ ಎನ್ನುತ್ತಾ ಸುತ್ತಮುತ್ತಲಿನ ರೈತರ ಜಮೀನು ಮಾರಾಟಕ್ಕೂ ಸಮಸ್ಯೆ ಉಂಟು ಮಾಡಲಾಗಿದೆ’ ಎಂದು ಆರೋಪಿಸಿದರು.