<p><strong>ಹುಣಸೂರು</strong>: ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧವಾದ ಗೊಮ್ಮಟಗಿರಿಯ ಗೊಮ್ಮಟೇಶ್ವರ ಶ್ರೀಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ₹ 2 ಕೋಟಿ ಬಿಡುಗಡೆ ಮಾಡಿದ್ದು, ಸರ್ಕಾರಕ್ಕೆ ₹ 10 ಕೋಟಿ ಅನುದಾನದ ಬೇಡಿಕೆ ಇಡಲಾಗಿದೆ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.</p>.<p>ತಾಲ್ಲೂಕಿನ ಬಿಳಿಕೆರೆ ಹೋಬಳಿ ಬೆಟ್ಟದೂರಿನಲ್ಲಿ ₹ 40 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೆಟ್ಟದೂರಿಗೆ ಹೊಂದಿಕೊಂಡಿರುವ ಗೊಮಟ್ಟಗಿರಿ ವೀಕ್ಷಣೆಗೆ ರಾಜ್ಯ ಮತ್ತು ಹೊರ ರಾಜ್ಯದಿಂದ ಭಕ್ತರು ಬಂದು ಹೋಗುತ್ತಿದ್ದಾರೆ. ಈ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದರು.</p>.<p>ಗೊಮ್ಮಟಗಿರಿ ಅಭಿವೃದ್ಧಿಗೆ ಅಂದಾಜು ವೆಚ್ಚದ ಪ್ರಸ್ತಾವನೆ ಪ್ರವಾಸೋದ್ಯಮಕ್ಕೆ ಸಲ್ಲಿಸಿದೆ. ಸರ್ಕಾರ ಮೊದಲ ಹಂತದಲ್ಲಿ ₹ 2 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಕ್ಷೇತ್ರದ ಅಭಿವೃದ್ಧಿಗೆ ಭಕ್ತರಿಂದಲ್ಲೂ ಆರ್ಥಿಕ ಸಹಾಯ ಸಂಗ್ರಹಿಸಲು ಆಡಳಿತ ಮಂಡಳಿಗೆ ಮನವಿ ಮಾಡಿದ್ದೇನೆ. ಸಂಪನ್ಮೂಲ ಕೃಢೀಕರಿಸಿದ ಬಳಿಕ ಅಭಿವೃದ್ಧಿ ಕಾಮಗಾರಿ ಹಂತ ಹಂತವಾಗಿ ಸಂಪೂರ್ಣ ಅಭಿವೃದ್ಧಿಗೆ ಒತ್ತು ನೀಡಲು ಬದ್ಧ ಎಂದರು.</p>.<p>ಕೆರೆ ಕಟ್ಟೆಗೆ ನೀರು: ತಾಲ್ಲೂಕಿನ ಲಕ್ಷ್ಮಣತೀರ್ಥ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಸಂಬಂಧಿಸಿದ ಇಲಾಖೆಗೆ ಸೂಚಿಸಿದೆ. ಬಿಳಿಕೆರೆ ಮತ್ತು ಬನ್ನಿಕುಪ್ಪೆ, ಸೋಮನಹಳ್ಳಿ ಕೆರೆಗಳಿಗೆ ಏತ ನೀರಾವರಿ ಮೂಲಕ ನೀರು ತುಂಬಿಸಲು ಹೊಸದಾಗಿ ಮೋಟಾರ್ ಅಳವಡಿಸಿ ಕ್ರಮವಹಿಸಿದೆ ಎಂದರು.</p>.<p>ಕೆ.ಎಂ.ಎಫ್ ನಿರ್ದೇಶಕ ಕೆ.ಎಸ್.ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್,ಶೃತಿ, ಮರಿಗೌಡ, ಅಶೋಕ್, ಸುಂದರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧವಾದ ಗೊಮ್ಮಟಗಿರಿಯ ಗೊಮ್ಮಟೇಶ್ವರ ಶ್ರೀಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ₹ 2 ಕೋಟಿ ಬಿಡುಗಡೆ ಮಾಡಿದ್ದು, ಸರ್ಕಾರಕ್ಕೆ ₹ 10 ಕೋಟಿ ಅನುದಾನದ ಬೇಡಿಕೆ ಇಡಲಾಗಿದೆ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.</p>.<p>ತಾಲ್ಲೂಕಿನ ಬಿಳಿಕೆರೆ ಹೋಬಳಿ ಬೆಟ್ಟದೂರಿನಲ್ಲಿ ₹ 40 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೆಟ್ಟದೂರಿಗೆ ಹೊಂದಿಕೊಂಡಿರುವ ಗೊಮಟ್ಟಗಿರಿ ವೀಕ್ಷಣೆಗೆ ರಾಜ್ಯ ಮತ್ತು ಹೊರ ರಾಜ್ಯದಿಂದ ಭಕ್ತರು ಬಂದು ಹೋಗುತ್ತಿದ್ದಾರೆ. ಈ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದರು.</p>.<p>ಗೊಮ್ಮಟಗಿರಿ ಅಭಿವೃದ್ಧಿಗೆ ಅಂದಾಜು ವೆಚ್ಚದ ಪ್ರಸ್ತಾವನೆ ಪ್ರವಾಸೋದ್ಯಮಕ್ಕೆ ಸಲ್ಲಿಸಿದೆ. ಸರ್ಕಾರ ಮೊದಲ ಹಂತದಲ್ಲಿ ₹ 2 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಕ್ಷೇತ್ರದ ಅಭಿವೃದ್ಧಿಗೆ ಭಕ್ತರಿಂದಲ್ಲೂ ಆರ್ಥಿಕ ಸಹಾಯ ಸಂಗ್ರಹಿಸಲು ಆಡಳಿತ ಮಂಡಳಿಗೆ ಮನವಿ ಮಾಡಿದ್ದೇನೆ. ಸಂಪನ್ಮೂಲ ಕೃಢೀಕರಿಸಿದ ಬಳಿಕ ಅಭಿವೃದ್ಧಿ ಕಾಮಗಾರಿ ಹಂತ ಹಂತವಾಗಿ ಸಂಪೂರ್ಣ ಅಭಿವೃದ್ಧಿಗೆ ಒತ್ತು ನೀಡಲು ಬದ್ಧ ಎಂದರು.</p>.<p>ಕೆರೆ ಕಟ್ಟೆಗೆ ನೀರು: ತಾಲ್ಲೂಕಿನ ಲಕ್ಷ್ಮಣತೀರ್ಥ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಸಂಬಂಧಿಸಿದ ಇಲಾಖೆಗೆ ಸೂಚಿಸಿದೆ. ಬಿಳಿಕೆರೆ ಮತ್ತು ಬನ್ನಿಕುಪ್ಪೆ, ಸೋಮನಹಳ್ಳಿ ಕೆರೆಗಳಿಗೆ ಏತ ನೀರಾವರಿ ಮೂಲಕ ನೀರು ತುಂಬಿಸಲು ಹೊಸದಾಗಿ ಮೋಟಾರ್ ಅಳವಡಿಸಿ ಕ್ರಮವಹಿಸಿದೆ ಎಂದರು.</p>.<p>ಕೆ.ಎಂ.ಎಫ್ ನಿರ್ದೇಶಕ ಕೆ.ಎಸ್.ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್,ಶೃತಿ, ಮರಿಗೌಡ, ಅಶೋಕ್, ಸುಂದರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>