<p><strong>ಮೈಸೂರು</strong>: ‘ವರುಣ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹ 224 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.</p>.<p>ವರುಣ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಗುರುವಾರ ನೆರವೇರಿಸಿ ಅವರು ಮಾತನಾಡಿದರು.</p>.<p>‘ಕ್ಷೇತ್ರವನ್ನು ಮಾದರಿ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ದೇವಸ್ಥಾನಗಳ ಅಭಿವೃದ್ಧಿಗೆ ₹ 3.32 ಕೋಟಿ, ಚರ್ಚ್ಗಳಿಗೆ ₹ 1 ಕೋಟಿ, ಗ್ರಾಮ ಪರಿಮಿತಿ ರಸ್ತೆ ಹಾಗೂ ನಾಲಾ ಅಭಿವೃದ್ಧಿಗೆ ₹ 116 ಕೋಟಿ, ಜಿಲ್ಲಾ ಮುಖ್ಯರಸ್ತೆ ಹಾಗೂ ಸೇತುವೆ ಅಭಿವೃದ್ಧಿಗೆ ₹ 50 ಕೋಟಿ, ಅಲ್ಪಸಂಖ್ಯಾತರ ಕಾಲೊನಿಗಳ ಅಭಿವೃದ್ಧಿಗೆ ₹ 10 ಕೋಟಿ ನೀಡಲಾಗಿದೆ’ ಎಂದರು.</p>.<p>‘ಗರ್ಗೇಶ್ವರಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ₹ 1.25 ಕೋಟಿ, ಪ್ರಾಚ್ಯವಸ್ತು ಇಲಾಖೆಯಿಂದ ₹1.71 ಕೋಟಿ, ಶಾಲಾ ಕೊಠಡಿ ನಿರ್ಮಾಣ ಹಾಗೂ ದುರಸ್ತಿಗೆ ₹ 5.87 ಕೋಟಿ, ಸಮುದಾಯ ಭವನ ಹಾಗೂ ಬಸ್ ನಿಲ್ದಾಣ ಕಾಮಗಾರಿಗೆ ₹ 30 ಕೋಟಿ ಮಂಜೂರಾಗಿದೆ. ಇವುಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಇದಲ್ಲದೆ ₹ 620 ಕೋಟಿ ಕಾಮಗಾರಿಯ ಮಂಜೂರಾತಿಗೆ ಸರ್ಕಾರಕ್ಕೆ ಕಳುಹಿಸಲಾಗಿದೆ’ ಎಂದು ವಿವರ ನೀಡಿದರು.</p>.<p>‘ಶಾಸಕರ ನಿಧಿಯಿಂದ ₹ 2 ಕೋಟಿ ಬಿಡುಗಡೆ ಮಾಡಲಾಗಿದೆ. 15 ಅಂಗವಿಕಲರಿಗೆ ಬ್ಯಾಟರಿ ಚಾಲಿತ ಸ್ಕೂಟರ್ಗಳನ್ನು ವಿತರಿಸಲಾಗಿದೆ. ಕಾರ್ಮಿಕ ಇಲಾಖೆಯಿಂದ 50 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ್ದೇವೆ’ ಎಂದು ತಿಳಿಸಿದರು.</p>.<p>‘ಬಡವರ ಪರ ಯಾರಿದ್ದಾರೆ ಎಂಬುದನ್ನು ಅರಿತು ಮುಂದಿನ ಚುನಾವಣೆಯಲ್ಲಿ ಮತ ಚಲಾಯಿಸಬೇಕು. ನಾವು ನೀಡುತ್ತಿರುವ ಸೌಲಭ್ಯಗಳನ್ನು ಬಿಟ್ಟಿ ಭಾಗ್ಯಗಳೆಂದು ಹೀಯಾಳಿಸುವವರಿಗೆ ತಕ್ಕ ಪಾಠ ಕಲಿಸಬೇಕು’ ಎಂದು ಕೋರಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಮುಖಂಡರಾದ ವರುಣ ಮಹೇಶ್, ಮಂಜುಳಾ ಮಂಜುನಾಥ್, ಎಂ.ಟಿ. ರವಿಕುಮಾರ್, ಮಹೇಂದ್ರ, ಕೃಷ್ಣಮೂರ್ತಿ, ಮುದ್ದುರಾಮೇಗೌಡ, ಚಿಕ್ಕದೇವಯ್ಯ, ದೇವರಾಜ್, ಅಭಿ, ವೆಂಕಟೇಶ್, ಬಿಇಒ ವಿವೇಕಾನಂದ, ರಾಜೇಶ್ ಜಾಧವ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ವರುಣ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹ 224 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.</p>.<p>ವರುಣ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಗುರುವಾರ ನೆರವೇರಿಸಿ ಅವರು ಮಾತನಾಡಿದರು.</p>.<p>‘ಕ್ಷೇತ್ರವನ್ನು ಮಾದರಿ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ದೇವಸ್ಥಾನಗಳ ಅಭಿವೃದ್ಧಿಗೆ ₹ 3.32 ಕೋಟಿ, ಚರ್ಚ್ಗಳಿಗೆ ₹ 1 ಕೋಟಿ, ಗ್ರಾಮ ಪರಿಮಿತಿ ರಸ್ತೆ ಹಾಗೂ ನಾಲಾ ಅಭಿವೃದ್ಧಿಗೆ ₹ 116 ಕೋಟಿ, ಜಿಲ್ಲಾ ಮುಖ್ಯರಸ್ತೆ ಹಾಗೂ ಸೇತುವೆ ಅಭಿವೃದ್ಧಿಗೆ ₹ 50 ಕೋಟಿ, ಅಲ್ಪಸಂಖ್ಯಾತರ ಕಾಲೊನಿಗಳ ಅಭಿವೃದ್ಧಿಗೆ ₹ 10 ಕೋಟಿ ನೀಡಲಾಗಿದೆ’ ಎಂದರು.</p>.<p>‘ಗರ್ಗೇಶ್ವರಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ₹ 1.25 ಕೋಟಿ, ಪ್ರಾಚ್ಯವಸ್ತು ಇಲಾಖೆಯಿಂದ ₹1.71 ಕೋಟಿ, ಶಾಲಾ ಕೊಠಡಿ ನಿರ್ಮಾಣ ಹಾಗೂ ದುರಸ್ತಿಗೆ ₹ 5.87 ಕೋಟಿ, ಸಮುದಾಯ ಭವನ ಹಾಗೂ ಬಸ್ ನಿಲ್ದಾಣ ಕಾಮಗಾರಿಗೆ ₹ 30 ಕೋಟಿ ಮಂಜೂರಾಗಿದೆ. ಇವುಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಇದಲ್ಲದೆ ₹ 620 ಕೋಟಿ ಕಾಮಗಾರಿಯ ಮಂಜೂರಾತಿಗೆ ಸರ್ಕಾರಕ್ಕೆ ಕಳುಹಿಸಲಾಗಿದೆ’ ಎಂದು ವಿವರ ನೀಡಿದರು.</p>.<p>‘ಶಾಸಕರ ನಿಧಿಯಿಂದ ₹ 2 ಕೋಟಿ ಬಿಡುಗಡೆ ಮಾಡಲಾಗಿದೆ. 15 ಅಂಗವಿಕಲರಿಗೆ ಬ್ಯಾಟರಿ ಚಾಲಿತ ಸ್ಕೂಟರ್ಗಳನ್ನು ವಿತರಿಸಲಾಗಿದೆ. ಕಾರ್ಮಿಕ ಇಲಾಖೆಯಿಂದ 50 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ್ದೇವೆ’ ಎಂದು ತಿಳಿಸಿದರು.</p>.<p>‘ಬಡವರ ಪರ ಯಾರಿದ್ದಾರೆ ಎಂಬುದನ್ನು ಅರಿತು ಮುಂದಿನ ಚುನಾವಣೆಯಲ್ಲಿ ಮತ ಚಲಾಯಿಸಬೇಕು. ನಾವು ನೀಡುತ್ತಿರುವ ಸೌಲಭ್ಯಗಳನ್ನು ಬಿಟ್ಟಿ ಭಾಗ್ಯಗಳೆಂದು ಹೀಯಾಳಿಸುವವರಿಗೆ ತಕ್ಕ ಪಾಠ ಕಲಿಸಬೇಕು’ ಎಂದು ಕೋರಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಮುಖಂಡರಾದ ವರುಣ ಮಹೇಶ್, ಮಂಜುಳಾ ಮಂಜುನಾಥ್, ಎಂ.ಟಿ. ರವಿಕುಮಾರ್, ಮಹೇಂದ್ರ, ಕೃಷ್ಣಮೂರ್ತಿ, ಮುದ್ದುರಾಮೇಗೌಡ, ಚಿಕ್ಕದೇವಯ್ಯ, ದೇವರಾಜ್, ಅಭಿ, ವೆಂಕಟೇಶ್, ಬಿಇಒ ವಿವೇಕಾನಂದ, ರಾಜೇಶ್ ಜಾಧವ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>