<p><strong>ಮೈಸೂರು:</strong> ಡಿಜಿಪಿ ಎಂ.ಎ.ಸಲೀಂ ಬುಧವಾರ ನಗರಕ್ಕೆ ಭೇಟಿ ನೀಡಿದರು. ಚಾಮುಂಡಿ ಬೆಟ್ಟಕ್ಕೆ ತೆರಳಿ ಆಷಾಢ ಶುಕ್ರವಾರದ ಭದ್ರತೆ ಕುರಿತು ಪರಿಶೀಲಿಸಿದರು.</p>.<p>ಮೊದಲನೇ ಶುಕ್ರವಾರದಂದು ಬೆಟ್ಟದಲ್ಲಿ ಭದ್ರತೆಯಲ್ಲಿ ವೈಫಲ್ಯಗಳಾಗಿವೆ ಎಂಬ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಎರಡನೇ ಶುಕ್ರವಾರ ಪೊಲೀಸರು ಕೆಲವು ಹೊಸ ಕ್ರಮಗಳನ್ನು ಕೈಗೊಂಡಿದ್ದರು. ಈ ಬಗ್ಗೆ ಡಿಜಿಪಿ ಮಾಹಿತಿ ಪಡೆದು, ಕಾನೂನು ಮತ್ತು ಸುವ್ಯವಸ್ಥೆ ಕುರಿತು ಕೆಲವು ಸಲಹೆ ನೀಡಿದರು.</p>.<p>ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಪರಾಧ ವಿಮರ್ಶನ ಸಭೆ ನಡೆಸಿದರು. ಅಧಿಕಾರಿಗಳು ಚಾಮುಂಡಿ ಬೆಟ್ಟದಲ್ಲಿನ ಭದ್ರತಾ ವ್ಯವಸ್ಥೆಯ ಕುರಿತ ಪಿಪಿಟಿ ಪ್ರದರ್ಶಿಸಿದರು. ಬಾಕಿ ಉಳಿದಿರುವ ಪ್ರಕರಣಗಳ ಮಾಹಿತಿ ಪಡೆದರು.</p>.<p>‘ಪೊಲೀಸಿಂಗ್ ವ್ಯವಸ್ಥೆಯ ಬದಲಾವಣೆ ಕಾಲಘಟ್ಟದಲ್ಲಿ ನಾವಿದ್ದೇವೆ. ಈಚೆಗೆ ಆನ್ಲೈನ್ ಪ್ರಕರಣ ಹೆಚ್ಚತ್ತಿದ್ದು, ತಂತ್ರಜ್ಞಾನದ ಕುರಿತು ಅರಿವು ಇರಲಿ. ಯಾವುದೇ ಕಾರ್ಯಕ್ರಮಗಳಿದ್ದರೂ ಅಲ್ಲಿ ಸೇರುವ ಜನರ ಬಗ್ಗೆ ಅರಿತು, ಯಾವುದೇ ದುರ್ಘಟನೆ ನಡೆಯದಂತೆ ಎಚ್ಚರವಹಿಸಲು ತಿಳಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ದೇವರಾಜ ಠಾಣೆಗೆ ಸಂಜೆ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು. ಠಾಣೆಗೆ ಈ ದಿನ ಭೇಟಿ ನೀಡಿದ್ದ ದೂರುದಾರರಿಗೆ ಕರೆ ಮಾಡಿ, ಪೊಲೀಸರು ಯಾವ ರೀತಿ ಸ್ಪಂದಿಸಿದರು ಎಂದು ಮಾಹಿತಿ ಪಡೆದರು.</p>.<p>ಐಜಿಪಿ ಡಾ.ಬೋರೆಲಿಂಗಯ್ಯ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಡಿಸಿಪಿಗಳಾದ ಕೆ.ಎಸ್.ಸುಂದರ್ ರಾಜ್, ಆರ್.ಎನ್.ಬಿಂದು ಮಣಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಡಿಜಿಪಿ ಎಂ.ಎ.ಸಲೀಂ ಬುಧವಾರ ನಗರಕ್ಕೆ ಭೇಟಿ ನೀಡಿದರು. ಚಾಮುಂಡಿ ಬೆಟ್ಟಕ್ಕೆ ತೆರಳಿ ಆಷಾಢ ಶುಕ್ರವಾರದ ಭದ್ರತೆ ಕುರಿತು ಪರಿಶೀಲಿಸಿದರು.</p>.<p>ಮೊದಲನೇ ಶುಕ್ರವಾರದಂದು ಬೆಟ್ಟದಲ್ಲಿ ಭದ್ರತೆಯಲ್ಲಿ ವೈಫಲ್ಯಗಳಾಗಿವೆ ಎಂಬ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಎರಡನೇ ಶುಕ್ರವಾರ ಪೊಲೀಸರು ಕೆಲವು ಹೊಸ ಕ್ರಮಗಳನ್ನು ಕೈಗೊಂಡಿದ್ದರು. ಈ ಬಗ್ಗೆ ಡಿಜಿಪಿ ಮಾಹಿತಿ ಪಡೆದು, ಕಾನೂನು ಮತ್ತು ಸುವ್ಯವಸ್ಥೆ ಕುರಿತು ಕೆಲವು ಸಲಹೆ ನೀಡಿದರು.</p>.<p>ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಪರಾಧ ವಿಮರ್ಶನ ಸಭೆ ನಡೆಸಿದರು. ಅಧಿಕಾರಿಗಳು ಚಾಮುಂಡಿ ಬೆಟ್ಟದಲ್ಲಿನ ಭದ್ರತಾ ವ್ಯವಸ್ಥೆಯ ಕುರಿತ ಪಿಪಿಟಿ ಪ್ರದರ್ಶಿಸಿದರು. ಬಾಕಿ ಉಳಿದಿರುವ ಪ್ರಕರಣಗಳ ಮಾಹಿತಿ ಪಡೆದರು.</p>.<p>‘ಪೊಲೀಸಿಂಗ್ ವ್ಯವಸ್ಥೆಯ ಬದಲಾವಣೆ ಕಾಲಘಟ್ಟದಲ್ಲಿ ನಾವಿದ್ದೇವೆ. ಈಚೆಗೆ ಆನ್ಲೈನ್ ಪ್ರಕರಣ ಹೆಚ್ಚತ್ತಿದ್ದು, ತಂತ್ರಜ್ಞಾನದ ಕುರಿತು ಅರಿವು ಇರಲಿ. ಯಾವುದೇ ಕಾರ್ಯಕ್ರಮಗಳಿದ್ದರೂ ಅಲ್ಲಿ ಸೇರುವ ಜನರ ಬಗ್ಗೆ ಅರಿತು, ಯಾವುದೇ ದುರ್ಘಟನೆ ನಡೆಯದಂತೆ ಎಚ್ಚರವಹಿಸಲು ತಿಳಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ದೇವರಾಜ ಠಾಣೆಗೆ ಸಂಜೆ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು. ಠಾಣೆಗೆ ಈ ದಿನ ಭೇಟಿ ನೀಡಿದ್ದ ದೂರುದಾರರಿಗೆ ಕರೆ ಮಾಡಿ, ಪೊಲೀಸರು ಯಾವ ರೀತಿ ಸ್ಪಂದಿಸಿದರು ಎಂದು ಮಾಹಿತಿ ಪಡೆದರು.</p>.<p>ಐಜಿಪಿ ಡಾ.ಬೋರೆಲಿಂಗಯ್ಯ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಡಿಸಿಪಿಗಳಾದ ಕೆ.ಎಸ್.ಸುಂದರ್ ರಾಜ್, ಆರ್.ಎನ್.ಬಿಂದು ಮಣಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>