<p><strong>ಹುಣಸೂರು:</strong> ಹೈನುಗಾರಿಕೆ ಪ್ರತಿಯೊಂದು ಕೃಷಿ ಕುಟುಂಬಕ್ಕೆ ನಿತ್ಯ ಆರ್ಥಿಕ ಸಹಾಯ ನೀಡುವ ವ್ಯವಸ್ಥೆಯಾಗಿದೆ. ಈ ಉದ್ಯೋಗವನ್ನು ಜಾಗೃತಿಯಿಂದ ಅಳವಡಿಸಿಕೊಂಡಲ್ಲಿ ಆರ್ಥಿಕ ಸಮಸ್ಯೆಯಿಂದ ಮುಕ್ತರಾಗಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿ ಮುರಳೀಧರ್ ಹೇಳಿದರು.</p>.<p>ತಾಲ್ಲೂಕಿನ ಕುಟ್ಟುವಾಡಿಯಲ್ಲಿ ಶುಕ್ರವಾರ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ₹2 ಲಕ್ಷ ಆರ್ಥಿಕ ಸಹಾಯಧನ ಮಂಜೂರಾತಿ ಆದೇಶ ಪತ್ರ ಹಸ್ತಾಂತರಿಸಿ ಅವರು ಮಾತನಾಡಿದರು.</p>.<p>ದಶಕಗಳ ಹಿಂದೆ ಕೃಷಿ ಕುಟುಂಬಕ್ಕೆ ಹೈನುಗಾರಿಕೆ ಪ್ರಧಾನ ಉದ್ಯೋಗವಾಗಿರಲಿಲ್ಲ. ಆದರೆ ಕಾಲ ಬದಲಾದಂತೆ ಹೈನುಗಾರಿಕೆ ಕ್ಷೇತ್ರ ಬೃಹತ್ತಾಗಿ ಬೆಳೆದು ಕೃಷಿಯೊಂದಿಗೆ ಹೈನುಗಾರಿಕೆ ಉದ್ಯಮವಾಗಿ ಬೆಳೆದಿದೆ. ಗ್ರಾಮೀಣ ಭಾಗದಲ್ಲಿ ಪ್ರತಿಯೊಂದು ಕೃಷಿಕ ಕುಟುಂಬದವರು ಹಸು ಸಾಕಾಣಿಕೆ ಪದ್ಧತಿ ಅನಾದಿ ಕಾಲದಿಂದಲು ಅಳವಡಿಸಿಕೊಂಡಿದ್ದು, ಆ ಸಂಸ್ಕೃತಿ ಈಗ ಉದ್ಯಮವಾಗಿ ಬದಲಾಗಿದೆ ಎಂದರು.</p>.<p>ಆರ್ಥಿಕ ಸಾಮರ್ಥ್ಯ ಹೊಂದಿರುವ ಕೃಷಿಕರು 10 ರಿಂದ 20ಹಸುಗಳನ್ನು ಸಾಕಾಣಿಕೆ ಮಾಡುವ ಮೂಲಕ ಲಕ್ಷಾಂತರ ರೂಪಾಯಿ ವ್ಯವಹಾರ ನಡೆಸುವ ಶಕ್ತಿ ಪಡೆದುಕೊಂಡಿದ್ದಾರೆ. ಈ ಉದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡುವ ದೃಷ್ಟಿಯಲ್ಲಿ ಹಾಲು ಉತ್ಪಾದಕರ ಸಂಘಕ್ಕೆ ಆರ್ಥಿಕ ಶಕ್ತಿ ನೀಡಿ ಮತ್ತಷ್ಟು ಸದೃಢಪಡಿಸುವ ಕೆಲಸದಲ್ಲಿ ತೊಡಗಿದ್ದೇವೆ ಎಂದರು.</p>.<p>ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ದೇವರಾಜು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವು ಜನಪರ ಯೋಜನೆ ಜಾರಿಗೊಳಿಸಿ ಗ್ರಾಮೀಣ ಜನರ ಆರ್ಥಿಕ ಶಕ್ತಿ ವೃದ್ಧಿಸಿ ಸಮಾಜಮುಖಿಯಾಗಿದೆ ಎಂದರು.</p>.<p>ಸಹಕಾರಿ ಸಂಘದ ಅಧ್ಯಕ್ಷ ರವಿ ಜಿ, ಕಾರ್ಯದರ್ಶಿ ಮಂಜುಗೌಡ, ಗ್ರಾ.ಪಂ ಸದಸ್ಯ ರವಿಕುಮಾರ್, ಮುಖಂಡರಾದ ನಾಗೇಗೌಡ, ಸೋಮಶೇಖರ್, ನಾಗರಾಜು, ರವಿಕುಮಾರ್, ಮೋಹನ್, ನಜ್ಮಾ, ಆಶಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ಹೈನುಗಾರಿಕೆ ಪ್ರತಿಯೊಂದು ಕೃಷಿ ಕುಟುಂಬಕ್ಕೆ ನಿತ್ಯ ಆರ್ಥಿಕ ಸಹಾಯ ನೀಡುವ ವ್ಯವಸ್ಥೆಯಾಗಿದೆ. ಈ ಉದ್ಯೋಗವನ್ನು ಜಾಗೃತಿಯಿಂದ ಅಳವಡಿಸಿಕೊಂಡಲ್ಲಿ ಆರ್ಥಿಕ ಸಮಸ್ಯೆಯಿಂದ ಮುಕ್ತರಾಗಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿ ಮುರಳೀಧರ್ ಹೇಳಿದರು.</p>.<p>ತಾಲ್ಲೂಕಿನ ಕುಟ್ಟುವಾಡಿಯಲ್ಲಿ ಶುಕ್ರವಾರ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ₹2 ಲಕ್ಷ ಆರ್ಥಿಕ ಸಹಾಯಧನ ಮಂಜೂರಾತಿ ಆದೇಶ ಪತ್ರ ಹಸ್ತಾಂತರಿಸಿ ಅವರು ಮಾತನಾಡಿದರು.</p>.<p>ದಶಕಗಳ ಹಿಂದೆ ಕೃಷಿ ಕುಟುಂಬಕ್ಕೆ ಹೈನುಗಾರಿಕೆ ಪ್ರಧಾನ ಉದ್ಯೋಗವಾಗಿರಲಿಲ್ಲ. ಆದರೆ ಕಾಲ ಬದಲಾದಂತೆ ಹೈನುಗಾರಿಕೆ ಕ್ಷೇತ್ರ ಬೃಹತ್ತಾಗಿ ಬೆಳೆದು ಕೃಷಿಯೊಂದಿಗೆ ಹೈನುಗಾರಿಕೆ ಉದ್ಯಮವಾಗಿ ಬೆಳೆದಿದೆ. ಗ್ರಾಮೀಣ ಭಾಗದಲ್ಲಿ ಪ್ರತಿಯೊಂದು ಕೃಷಿಕ ಕುಟುಂಬದವರು ಹಸು ಸಾಕಾಣಿಕೆ ಪದ್ಧತಿ ಅನಾದಿ ಕಾಲದಿಂದಲು ಅಳವಡಿಸಿಕೊಂಡಿದ್ದು, ಆ ಸಂಸ್ಕೃತಿ ಈಗ ಉದ್ಯಮವಾಗಿ ಬದಲಾಗಿದೆ ಎಂದರು.</p>.<p>ಆರ್ಥಿಕ ಸಾಮರ್ಥ್ಯ ಹೊಂದಿರುವ ಕೃಷಿಕರು 10 ರಿಂದ 20ಹಸುಗಳನ್ನು ಸಾಕಾಣಿಕೆ ಮಾಡುವ ಮೂಲಕ ಲಕ್ಷಾಂತರ ರೂಪಾಯಿ ವ್ಯವಹಾರ ನಡೆಸುವ ಶಕ್ತಿ ಪಡೆದುಕೊಂಡಿದ್ದಾರೆ. ಈ ಉದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡುವ ದೃಷ್ಟಿಯಲ್ಲಿ ಹಾಲು ಉತ್ಪಾದಕರ ಸಂಘಕ್ಕೆ ಆರ್ಥಿಕ ಶಕ್ತಿ ನೀಡಿ ಮತ್ತಷ್ಟು ಸದೃಢಪಡಿಸುವ ಕೆಲಸದಲ್ಲಿ ತೊಡಗಿದ್ದೇವೆ ಎಂದರು.</p>.<p>ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ದೇವರಾಜು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವು ಜನಪರ ಯೋಜನೆ ಜಾರಿಗೊಳಿಸಿ ಗ್ರಾಮೀಣ ಜನರ ಆರ್ಥಿಕ ಶಕ್ತಿ ವೃದ್ಧಿಸಿ ಸಮಾಜಮುಖಿಯಾಗಿದೆ ಎಂದರು.</p>.<p>ಸಹಕಾರಿ ಸಂಘದ ಅಧ್ಯಕ್ಷ ರವಿ ಜಿ, ಕಾರ್ಯದರ್ಶಿ ಮಂಜುಗೌಡ, ಗ್ರಾ.ಪಂ ಸದಸ್ಯ ರವಿಕುಮಾರ್, ಮುಖಂಡರಾದ ನಾಗೇಗೌಡ, ಸೋಮಶೇಖರ್, ನಾಗರಾಜು, ರವಿಕುಮಾರ್, ಮೋಹನ್, ನಜ್ಮಾ, ಆಶಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>