ಪುರಸ್ಕಾರಕ್ಕೆ ಆಯ್ಕೆಗೆ ಪ್ರತ್ಯೇಕ ಉಪಸಮಿತಿಯೇ ಇದೆ. ಹಿರಿಯ ಅಧಿಕಾರಿಗಳು ಈ ಸಮಿತಿಯಲ್ಲಿ ಇದ್ದಾರೆ. ಪ್ರಶಸ್ತಿ ಕೋರಿ ಬರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹರನ್ನು ಆಯ್ಕೆ ಮಾಡುವುದು ಈ ಸಮಿತಿಯ ಜವಾಬ್ದಾರಿ. ಹೀಗಿದ್ದೂ, ಪರಿಶೀಲಿಸದೇ ಪುರಸ್ಕಾರ ನೀಡಲಾಗಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ, 22 ದಿನಗಳ ಬಳಿಕ ವಾಪಸ್ ಪಡೆದಿದೆ. ‘ಸನ್ಮಾನಿತರ ಆಯ್ಕೆ ಹಿನ್ನೆಲೆಯ ಕುರಿತು ಪೊಲೀಸರಿಂದ ಮಾಹಿತಿ ಪಡೆಯಬೇಕಿತ್ತು. ಆದರೆ, ಕಾಲಾವಕಾಶದ ಕೊರತೆಯಿಂದ ಈ ಅಚಾತುರ್ಯವಾಗಿದೆ’ ಎಂದು ಸಬೂಬು ನೀಡಿದೆ.