<p><strong>ಮೈಸೂರು</strong>: 'ನಾನು ಮನಸ್ಸು ಮಾಡಿದರೆ ರಾಜ್ಯದ ಎಲ್ಲಿಯೂ ಬಿಜೆಪಿಯವರು ಕಾರ್ಯಕ್ರಮ ನಡೆಸಲು ಮತ್ತು ಫ್ಲೆಕ್ಸ್ ಹಾಕಲು ಬಿಡುವುದಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದರು.</p>.<p>ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಭಾರತ್ ಜೋಡೊ ಪಾದಯಾತ್ರೆಗೆ ಸಂಬಂಧಿಸಿದ ಫ್ಲೆಕ್ಸ್ ಹಾಗೂ ಬ್ಯಾನರ್ ಹರಿದ ವಿಚಾರಕ್ಕೆ ಇಲ್ಲಿ ಪ್ರತಿಕ್ರಿಯೆ ನೀಡಿದ ಅವರು, 'ಬ್ಯಾನರ್, ಫ್ಲೆಕ್ಸ್ ಹರಿದು ಹಾಕುವುದನ್ನು ಒಳ್ಳೆಯ ಕೆಲಸ ಎಂದುಕೊಂಡಿದ್ದಾರೆ. ಚುಚ್ಚಿದರೂ, ಗುಂಡಿಕ್ಕಿದರೂ ಕಾಂಗ್ರೆಸ್ನವರು ಹೆದರುವುದಿಲ್ಲ' ಎಂದರು.</p>.<p>'ಅವರು ಹೇಳಿಕೊಡುತ್ತಿರುವ ಪಾಠವನ್ನು ಕಾಂಗ್ರೆಸ್ನವರು ಇನ್ನೂ ಚೆನ್ನಾಗಿಯೇ ಚೆನ್ನಾಗಿ ಕಲಿತಿದ್ದಾರೆ. ಮುಖ್ಯಮಂತ್ರಿ ಹಾಗೂ ಅವರ ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ಫ್ಲೆಕ್ಸ್ ಹರಿದು ಹೇಡಿಗಳಂತೆ ಓಡಿ ಹೋದರೆ ಅದು ನಿಮಗೆ ಶೋಭೆ ತರುವುದಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ತಮ್ಮ ಮನೆ ಮೇಲೆ ಸಿಬಿಐ ಅಧಿಕಾರಿಗಳ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಏನ್ ಮಾಡ್ತಿರಾ? ಯಾರ ಮೇಲೆ ಪ್ರೀತಿ ಇರುತ್ತದೆಯೋ ಅವರ ಮನೆ ದಾಳಿ ಮಾಡುತ್ತಾರೆ. ನಾನು ಪಾದಯಾತ್ರೆ ಸಿದ್ಧತೆ ಕೆಲಸದಲ್ಲಿದ್ದೇನೆ. ಅವರು ಅಲ್ಲಿ ದಾಳಿ ಮಾಡಿದ್ದಾರೆ' ಎಂದರು.</p>.<p>'ಸಿಬಿಐ ಎಂದ ಕೂಡಲೇ ನಮ್ಮ ಜನ ಗಡಗಡ ಅಂತಾರೆ. ನಾವೂ ಗಡಗಡ ಅಂತೀವಿ' ಎಂದು ವ್ಯಂಗ್ಯವಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: 'ನಾನು ಮನಸ್ಸು ಮಾಡಿದರೆ ರಾಜ್ಯದ ಎಲ್ಲಿಯೂ ಬಿಜೆಪಿಯವರು ಕಾರ್ಯಕ್ರಮ ನಡೆಸಲು ಮತ್ತು ಫ್ಲೆಕ್ಸ್ ಹಾಕಲು ಬಿಡುವುದಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದರು.</p>.<p>ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಭಾರತ್ ಜೋಡೊ ಪಾದಯಾತ್ರೆಗೆ ಸಂಬಂಧಿಸಿದ ಫ್ಲೆಕ್ಸ್ ಹಾಗೂ ಬ್ಯಾನರ್ ಹರಿದ ವಿಚಾರಕ್ಕೆ ಇಲ್ಲಿ ಪ್ರತಿಕ್ರಿಯೆ ನೀಡಿದ ಅವರು, 'ಬ್ಯಾನರ್, ಫ್ಲೆಕ್ಸ್ ಹರಿದು ಹಾಕುವುದನ್ನು ಒಳ್ಳೆಯ ಕೆಲಸ ಎಂದುಕೊಂಡಿದ್ದಾರೆ. ಚುಚ್ಚಿದರೂ, ಗುಂಡಿಕ್ಕಿದರೂ ಕಾಂಗ್ರೆಸ್ನವರು ಹೆದರುವುದಿಲ್ಲ' ಎಂದರು.</p>.<p>'ಅವರು ಹೇಳಿಕೊಡುತ್ತಿರುವ ಪಾಠವನ್ನು ಕಾಂಗ್ರೆಸ್ನವರು ಇನ್ನೂ ಚೆನ್ನಾಗಿಯೇ ಚೆನ್ನಾಗಿ ಕಲಿತಿದ್ದಾರೆ. ಮುಖ್ಯಮಂತ್ರಿ ಹಾಗೂ ಅವರ ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ಫ್ಲೆಕ್ಸ್ ಹರಿದು ಹೇಡಿಗಳಂತೆ ಓಡಿ ಹೋದರೆ ಅದು ನಿಮಗೆ ಶೋಭೆ ತರುವುದಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ತಮ್ಮ ಮನೆ ಮೇಲೆ ಸಿಬಿಐ ಅಧಿಕಾರಿಗಳ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಏನ್ ಮಾಡ್ತಿರಾ? ಯಾರ ಮೇಲೆ ಪ್ರೀತಿ ಇರುತ್ತದೆಯೋ ಅವರ ಮನೆ ದಾಳಿ ಮಾಡುತ್ತಾರೆ. ನಾನು ಪಾದಯಾತ್ರೆ ಸಿದ್ಧತೆ ಕೆಲಸದಲ್ಲಿದ್ದೇನೆ. ಅವರು ಅಲ್ಲಿ ದಾಳಿ ಮಾಡಿದ್ದಾರೆ' ಎಂದರು.</p>.<p>'ಸಿಬಿಐ ಎಂದ ಕೂಡಲೇ ನಮ್ಮ ಜನ ಗಡಗಡ ಅಂತಾರೆ. ನಾವೂ ಗಡಗಡ ಅಂತೀವಿ' ಎಂದು ವ್ಯಂಗ್ಯವಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>