<p><strong>ಮೈಸೂರು</strong>: ‘ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದಾರನ ಹೇಳಿಕೆಯಂತೆ ನಡೆದಿದೆ ಎನ್ನಲಾದ ಕೊಲೆಗಳ ತನಿಖೆ ನಡೆಸುತ್ತಿರುವ ಎಸ್ಐಟಿ ವಿರುದ್ಧವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡುತ್ತಿರುವುದು ಸಂವಿಧಾನ ವಿರೋಧಿ ನಡೆಯಾಗಿದ್ದು, ಕರ್ತವ್ಯಲೋಪ ಎಸಗುತ್ತಿದ್ದಾರೆ’ ಎಂದು ಸರ್ವೋದಯ ಕರ್ನಾಟಕ ಪಕ್ಷದ ಉಗ್ರನರಸಿಂಹೇಗೌಡ ದೂರಿದ್ದಾರೆ.</p>.<p>‘ಎಸ್ಐಟಿ ರಚಿಸುವವರೆಗೂ ಸುಮ್ಮನಿದ್ದ ಬಿಜೆಪಿ, ಧರ್ಮಸ್ಥಳದಲ್ಲಿ ಅಸ್ಥಿಪಂಜರಗಳು ಸಿಕ್ಕ ಬಳಿಕ ತಮ್ಮ ಪಕ್ಷದ ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಬೆಂಬಲಕ್ಕೆ ನಿಂತಿದೆ. ಅವರಿಗೆ ಡಿ.ಕೆ.ಶಿವಕುಮಾರ್ ಪ್ರೋತ್ಸಾಹ ನೀಡುತ್ತಿದ್ದು, ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಎನ್ನುವ ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತಿಗೆ ಬೆಂಬಲ ಸೂಚಿಸುತ್ತಿದ್ದಾರೆ. ಈ ಧೋರಣೆ ಮೂಲಕ ತನಿಖೆಯಿಂದ ಸತ್ಯ ಬಯಸುತ್ತಿರುವ ರಾಜ್ಯದ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.</p>.<p>‘ಈ ಇಬ್ಬರೂ ಷಡ್ಯಂತ್ರದ ಹಿಂದಿನ ಕಾರಣಗಳನ್ನು ಹೇಳದೆ ಸದನ ಮತ್ತು ರಾಜ್ಯದ ಜನರಿಗೆ ದ್ರೋಹ ಎಸಗುತ್ತಿದ್ದಾರೆ. ಇನ್ನೊಂದು ಕಡೆ ಧರ್ಮಸ್ಥಳ ಕುರಿತ ಚರ್ಚೆಯನ್ನೇ ಅಪರಾಧ ಎನ್ನುವ ಮೂಲಕ ಭಯ ಸೃಷ್ಟಿಸಲು ಹೊರಟಿದ್ದಾರೆ. ರಾಜ್ಯ ಮತ್ತು ದೇಶದ ಎಲ್ಲಾ ನಾಗರಿಕರು ಈ ನಡೆಯನ್ನು ಗಟ್ಟಿಯಾಗಿ ಪ್ರಶ್ನಿಸಬೇಕಿದೆ’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದಾರನ ಹೇಳಿಕೆಯಂತೆ ನಡೆದಿದೆ ಎನ್ನಲಾದ ಕೊಲೆಗಳ ತನಿಖೆ ನಡೆಸುತ್ತಿರುವ ಎಸ್ಐಟಿ ವಿರುದ್ಧವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡುತ್ತಿರುವುದು ಸಂವಿಧಾನ ವಿರೋಧಿ ನಡೆಯಾಗಿದ್ದು, ಕರ್ತವ್ಯಲೋಪ ಎಸಗುತ್ತಿದ್ದಾರೆ’ ಎಂದು ಸರ್ವೋದಯ ಕರ್ನಾಟಕ ಪಕ್ಷದ ಉಗ್ರನರಸಿಂಹೇಗೌಡ ದೂರಿದ್ದಾರೆ.</p>.<p>‘ಎಸ್ಐಟಿ ರಚಿಸುವವರೆಗೂ ಸುಮ್ಮನಿದ್ದ ಬಿಜೆಪಿ, ಧರ್ಮಸ್ಥಳದಲ್ಲಿ ಅಸ್ಥಿಪಂಜರಗಳು ಸಿಕ್ಕ ಬಳಿಕ ತಮ್ಮ ಪಕ್ಷದ ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಬೆಂಬಲಕ್ಕೆ ನಿಂತಿದೆ. ಅವರಿಗೆ ಡಿ.ಕೆ.ಶಿವಕುಮಾರ್ ಪ್ರೋತ್ಸಾಹ ನೀಡುತ್ತಿದ್ದು, ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಎನ್ನುವ ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತಿಗೆ ಬೆಂಬಲ ಸೂಚಿಸುತ್ತಿದ್ದಾರೆ. ಈ ಧೋರಣೆ ಮೂಲಕ ತನಿಖೆಯಿಂದ ಸತ್ಯ ಬಯಸುತ್ತಿರುವ ರಾಜ್ಯದ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.</p>.<p>‘ಈ ಇಬ್ಬರೂ ಷಡ್ಯಂತ್ರದ ಹಿಂದಿನ ಕಾರಣಗಳನ್ನು ಹೇಳದೆ ಸದನ ಮತ್ತು ರಾಜ್ಯದ ಜನರಿಗೆ ದ್ರೋಹ ಎಸಗುತ್ತಿದ್ದಾರೆ. ಇನ್ನೊಂದು ಕಡೆ ಧರ್ಮಸ್ಥಳ ಕುರಿತ ಚರ್ಚೆಯನ್ನೇ ಅಪರಾಧ ಎನ್ನುವ ಮೂಲಕ ಭಯ ಸೃಷ್ಟಿಸಲು ಹೊರಟಿದ್ದಾರೆ. ರಾಜ್ಯ ಮತ್ತು ದೇಶದ ಎಲ್ಲಾ ನಾಗರಿಕರು ಈ ನಡೆಯನ್ನು ಗಟ್ಟಿಯಾಗಿ ಪ್ರಶ್ನಿಸಬೇಕಿದೆ’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>