<p><strong>ಹುಣಸೂರು: </strong>ತಾಲ್ಲೂಕಿನ ಗ್ರಾಮೀಣ ಭಾಗದ ಆಸ್ಪತ್ರೆಗಳಿಗೆ ಕಟ್ಟಡ ಹಾಗೂ ಸಿಬ್ಬಂದಿ ಕೊರತೆ ಇದ್ದು ಹೊರ ರೋಗಿಗಳ ಶುಶ್ರೂಷೆ ಕಷ್ಟವಾಗಿದೆ ಎಂದು ತಾಲ್ಲೂಕಿನ ವಿವಿಧ ಆಸ್ಪತ್ರೆಗಳ ವೈದ್ಯರು ಶಾಸಕ ಮಂಜುನಾಥ್ ಅವರ ಗಮನ ಸೆಳೆದರು.</p>.<p>ನಗರಸಭೆಯಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮ ಕುರಿತು ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ 23 ಕೇಂದ್ರಗಳ ವೈದ್ಯರು ವಿವಿಧ ಸಮಸ್ಯೆಗಳನ್ನು ಹೊರ ಹಾಕಿದರು.</p>.<p>ತಾಲ್ಲೂಕು ವೈದ್ಯಾಧಿಕಾರಿ ಡಾ.ಕೀರ್ತಿಕುಮಾರ್ ಮಾತನಾಡಿ, ‘ತಾಲ್ಲೂಕಿನ 23 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೇರಿಸಲಾಗಿದ್ದು, ಈ ಪೈಕಿ ಕಟ್ಟೆಮಳಲವಾಡಿ, ಹಿರಿಕ್ಯಾತನಹಳ್ಳಿ, ಹೊಸೂರು ಗೇಟ್, ದೊಡ್ಡಹೆಜ್ಜೂರು, ಕರಿಮುದ್ದನಹಳ್ಳಿ ಕರ್ಣಕುಪ್ಪೆ 6 ಆಸ್ಪತ್ರೆಗಳಿಗೆ ಕಟ್ಟಡ ಇಲ್ಲವಾಗಿದೆ. ಹೀಗಾಗಿ, ಮೇಲ್ದರ್ಜೆಗೇರಿದ್ದರೂ ಇರುವ ಹಳೆ ವ್ಯವಸ್ಥೆಯಲ್ಲೇ ಸೇವೆ ನೀಡಲಾಗುತ್ತಿದೆ’ ಎಂದರು.</p>.<p>ತಾಲ್ಲೂಕಿನ ಕಟ್ಟೆಮಳಲವಾಡಿ ಮತ್ತು ನೇರಳಕುಪ್ಪೆ ಗ್ರಾಮಗಳ ಆಸ್ಪತ್ರೆಗೆ ವೈದ್ಯರ ಕೊರತೆ ಇದ್ದು, ನೇರಳಕುಪ್ಪೆ ಆಸ್ಪತ್ರೆಗೆ ಹನಗೋಡು ಆಸ್ಪತ್ರೆಯಿಂದ ಆಯುಷ್ ವೈದ್ಯರನ್ನು ನಿಯೋಜಿಸಲಾಗಿದೆ. ಕಟ್ಟೆಮಳಲವಾಡಿ ಗ್ರಾಮಕ್ಕೆ ವೈದ್ಯರು ಬರಲು ಸಮ್ಮತಿಸುತ್ತಿಲ್ಲ ಎಂದರು.</p>.<p>ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಕೈಗೊಳ್ಳುವ ಕೆಲವು ಕಾಮಗಾರಿಗಳ ಕುರಿತಂತೆ ಸಂಬಂಧಿಸಿದ ಆಸ್ಪತ್ರೆ ವೈದ್ಯಾಧಿಕಾರಿಗಳ ಗಮನಕ್ಕೆ ತಂದಲ್ಲಿ ಅವಶ್ಯಕವಿರುವ ಕಾಮಗಾರಿಗೆ ಆದ್ಯತೆ ನೀಡಿ ಅನುದಾನ ಬಳಸಲು ಸಹಕಾರಿ ಆಗಲಿದೆ ಎಂದು ಬಿಳಿಕೆರೆ ವೈದ್ಯಾಧಿಕಾರಿ ಡಾ.ಉಮೇಶ್ ಹೇಳಿದರು.</p>.<p>ಶಾಸಕರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಂಪೌಂಡ್ ನಿರ್ಮಿಸಲು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಗಿರೀಶ್ ಅವರಿಗೆ ಸೂಚಿಸಿದರು.</p>.<p>ಸಭೆಯಲ್ಲಿ ತಹಶೀಲ್ದಾರ್ ಬಸವರಾಜ್, ತಾ.ಪಂ. ಅಧ್ಯಕ್ಷೆ ಪದ್ಮಮ್ಮ,ವೈದ್ಯಕೀಯ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು: </strong>ತಾಲ್ಲೂಕಿನ ಗ್ರಾಮೀಣ ಭಾಗದ ಆಸ್ಪತ್ರೆಗಳಿಗೆ ಕಟ್ಟಡ ಹಾಗೂ ಸಿಬ್ಬಂದಿ ಕೊರತೆ ಇದ್ದು ಹೊರ ರೋಗಿಗಳ ಶುಶ್ರೂಷೆ ಕಷ್ಟವಾಗಿದೆ ಎಂದು ತಾಲ್ಲೂಕಿನ ವಿವಿಧ ಆಸ್ಪತ್ರೆಗಳ ವೈದ್ಯರು ಶಾಸಕ ಮಂಜುನಾಥ್ ಅವರ ಗಮನ ಸೆಳೆದರು.</p>.<p>ನಗರಸಭೆಯಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮ ಕುರಿತು ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ 23 ಕೇಂದ್ರಗಳ ವೈದ್ಯರು ವಿವಿಧ ಸಮಸ್ಯೆಗಳನ್ನು ಹೊರ ಹಾಕಿದರು.</p>.<p>ತಾಲ್ಲೂಕು ವೈದ್ಯಾಧಿಕಾರಿ ಡಾ.ಕೀರ್ತಿಕುಮಾರ್ ಮಾತನಾಡಿ, ‘ತಾಲ್ಲೂಕಿನ 23 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೇರಿಸಲಾಗಿದ್ದು, ಈ ಪೈಕಿ ಕಟ್ಟೆಮಳಲವಾಡಿ, ಹಿರಿಕ್ಯಾತನಹಳ್ಳಿ, ಹೊಸೂರು ಗೇಟ್, ದೊಡ್ಡಹೆಜ್ಜೂರು, ಕರಿಮುದ್ದನಹಳ್ಳಿ ಕರ್ಣಕುಪ್ಪೆ 6 ಆಸ್ಪತ್ರೆಗಳಿಗೆ ಕಟ್ಟಡ ಇಲ್ಲವಾಗಿದೆ. ಹೀಗಾಗಿ, ಮೇಲ್ದರ್ಜೆಗೇರಿದ್ದರೂ ಇರುವ ಹಳೆ ವ್ಯವಸ್ಥೆಯಲ್ಲೇ ಸೇವೆ ನೀಡಲಾಗುತ್ತಿದೆ’ ಎಂದರು.</p>.<p>ತಾಲ್ಲೂಕಿನ ಕಟ್ಟೆಮಳಲವಾಡಿ ಮತ್ತು ನೇರಳಕುಪ್ಪೆ ಗ್ರಾಮಗಳ ಆಸ್ಪತ್ರೆಗೆ ವೈದ್ಯರ ಕೊರತೆ ಇದ್ದು, ನೇರಳಕುಪ್ಪೆ ಆಸ್ಪತ್ರೆಗೆ ಹನಗೋಡು ಆಸ್ಪತ್ರೆಯಿಂದ ಆಯುಷ್ ವೈದ್ಯರನ್ನು ನಿಯೋಜಿಸಲಾಗಿದೆ. ಕಟ್ಟೆಮಳಲವಾಡಿ ಗ್ರಾಮಕ್ಕೆ ವೈದ್ಯರು ಬರಲು ಸಮ್ಮತಿಸುತ್ತಿಲ್ಲ ಎಂದರು.</p>.<p>ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಕೈಗೊಳ್ಳುವ ಕೆಲವು ಕಾಮಗಾರಿಗಳ ಕುರಿತಂತೆ ಸಂಬಂಧಿಸಿದ ಆಸ್ಪತ್ರೆ ವೈದ್ಯಾಧಿಕಾರಿಗಳ ಗಮನಕ್ಕೆ ತಂದಲ್ಲಿ ಅವಶ್ಯಕವಿರುವ ಕಾಮಗಾರಿಗೆ ಆದ್ಯತೆ ನೀಡಿ ಅನುದಾನ ಬಳಸಲು ಸಹಕಾರಿ ಆಗಲಿದೆ ಎಂದು ಬಿಳಿಕೆರೆ ವೈದ್ಯಾಧಿಕಾರಿ ಡಾ.ಉಮೇಶ್ ಹೇಳಿದರು.</p>.<p>ಶಾಸಕರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಂಪೌಂಡ್ ನಿರ್ಮಿಸಲು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಗಿರೀಶ್ ಅವರಿಗೆ ಸೂಚಿಸಿದರು.</p>.<p>ಸಭೆಯಲ್ಲಿ ತಹಶೀಲ್ದಾರ್ ಬಸವರಾಜ್, ತಾ.ಪಂ. ಅಧ್ಯಕ್ಷೆ ಪದ್ಮಮ್ಮ,ವೈದ್ಯಕೀಯ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>