<p><strong>ಮೈಸೂರು:</strong> ‘ವೈದ್ಯರು ದೇವರಲ್ಲ. ದೇವರ ಪ್ರತಿನಿಧಿಗಳು. ಜನರ ಆರೋಗ್ಯ ಕಾಪಾಡಿ ಆರೈಕೆ ಮೂಲಕ ಜೀವ ಉಳಿಸುವ ಆ ವೃತ್ತಿ ಪವಿತ್ರವಾದುದು’ ಎಂದು ನಿವೃತ್ತ ವೈದ್ಯಾಧಿಕಾರಿ ಡಾ.ಎಂ.ಜಿ.ಆರ್.ಅರಸ್ ಹೇಳಿದರು.</p>.<p>ನಗರದ ನಮನ ಕಲಾಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದಿಂದ ಡಾ.ಬಿ.ಸಿ.ರಾಯ್ ಸ್ಮರಣಾರ್ಥ ಸೋಮವಾರ ಆಯೋಜಿಸಿದ್ದ ವೈದ್ಯರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಆರೈಕೆ ಮಾಡಿ ಮರುಜೀವ ನೀಡುವ ವಿಶೇಷ ಶಕ್ತಿ ವೈದ್ಯಲೋಕಕ್ಕೆ ಇದೆ. ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ದೇವರಾಗುತ್ತಾರೆ. ಅವರಿಗೆ ಸಲ್ಲಿಸುವ ಕೃತಜ್ಞತಾ ಮನೋಭಾವವೇ ದೇವರು’ ಎಂದರು.</p>.<p>ನಿವೃತ್ತ ವೈದ್ಯಾಧಿಕಾರಿ ಡಾ.ಎಚ್.ಹನುಮಂತಪ್ಪ ಮಾತನಾಡಿ, ‘ಪ್ರಶಸ್ತಿ ಸ್ವೀಕರಿಸಿರುವುದು ಖುಷಿ ಇದೆ. ವೈದ್ಯಕೀಯ ವೃತ್ತಿಯಲ್ಲಿ ಸೇವೆಯ ಜೊತೆಗೆ ಮಾನವೀಯ ಮೌಲ್ಯ ಮೈಗೂಡಿಸಿಕೊಂಡಾಗ ಮಾತ್ರ ಸಾರ್ಥಕ ಬದುಕು ನಮ್ಮದಾಗಲಿದೆ. ಪ್ರಸ್ತುತ ದಿನಮಾನಗಳಲ್ಲಿ ವೈದ್ಯರ ಮೇಲೆ ನಂಬಿಕೆ ಇಡುವುದು, ಹಲ್ಲೆ ಮಾಡುವುದು ಎರಡೂ ಸಾಮಾನ್ಯವಾಗಿದೆ’ ಎಂದರು.</p>.<p>ಸಂಸ್ಕೃತ ವಿದ್ವಾಂಸರಾದ ಕೆ.ಲೀಲಾ ಪ್ರಕಾಶ್ ಮಾತನಾಡಿದರು. ವೈದ್ಯರನ್ನು ಸನ್ಮಾನಿಸಲಾಯಿತು. ಧನ್ವಂತರಿ ಸಂಬಂಧ ಅನುಭವಗಳ ಹಂಚಿಕೆ, ಚಟುಕು, ಹನಿಗವನ, ಮುಕ್ತಕ, ಕವಿಗೋಷ್ಠಿ, ಲಲಿತ ಪ್ರಬಂಧ, ಗೀತ ಗಾಯನ, ಆಧುನಿಕ ವಚನ, ಹಾಸ್ಯ ಪ್ರಸಂಗ, ನ್ಯಾನೊ ಕತೆಗಳ ಅನಾವರಣ ನಡೆಯಿತು.</p>.<p>ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಮ.ನ.ಲತಾ ಮೋಹನ್, ಅಂತರರಾಷ್ಟ್ರೀಯ ಬಯೋವೆಲ್ಲಾ ತರಬೇತುದಾರ ಗುರುರಾಜ್, ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ, ಹೇಮಲತಾ ಕುಮಾರಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ವೈದ್ಯರು ದೇವರಲ್ಲ. ದೇವರ ಪ್ರತಿನಿಧಿಗಳು. ಜನರ ಆರೋಗ್ಯ ಕಾಪಾಡಿ ಆರೈಕೆ ಮೂಲಕ ಜೀವ ಉಳಿಸುವ ಆ ವೃತ್ತಿ ಪವಿತ್ರವಾದುದು’ ಎಂದು ನಿವೃತ್ತ ವೈದ್ಯಾಧಿಕಾರಿ ಡಾ.ಎಂ.ಜಿ.ಆರ್.ಅರಸ್ ಹೇಳಿದರು.</p>.<p>ನಗರದ ನಮನ ಕಲಾಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದಿಂದ ಡಾ.ಬಿ.ಸಿ.ರಾಯ್ ಸ್ಮರಣಾರ್ಥ ಸೋಮವಾರ ಆಯೋಜಿಸಿದ್ದ ವೈದ್ಯರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಆರೈಕೆ ಮಾಡಿ ಮರುಜೀವ ನೀಡುವ ವಿಶೇಷ ಶಕ್ತಿ ವೈದ್ಯಲೋಕಕ್ಕೆ ಇದೆ. ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ದೇವರಾಗುತ್ತಾರೆ. ಅವರಿಗೆ ಸಲ್ಲಿಸುವ ಕೃತಜ್ಞತಾ ಮನೋಭಾವವೇ ದೇವರು’ ಎಂದರು.</p>.<p>ನಿವೃತ್ತ ವೈದ್ಯಾಧಿಕಾರಿ ಡಾ.ಎಚ್.ಹನುಮಂತಪ್ಪ ಮಾತನಾಡಿ, ‘ಪ್ರಶಸ್ತಿ ಸ್ವೀಕರಿಸಿರುವುದು ಖುಷಿ ಇದೆ. ವೈದ್ಯಕೀಯ ವೃತ್ತಿಯಲ್ಲಿ ಸೇವೆಯ ಜೊತೆಗೆ ಮಾನವೀಯ ಮೌಲ್ಯ ಮೈಗೂಡಿಸಿಕೊಂಡಾಗ ಮಾತ್ರ ಸಾರ್ಥಕ ಬದುಕು ನಮ್ಮದಾಗಲಿದೆ. ಪ್ರಸ್ತುತ ದಿನಮಾನಗಳಲ್ಲಿ ವೈದ್ಯರ ಮೇಲೆ ನಂಬಿಕೆ ಇಡುವುದು, ಹಲ್ಲೆ ಮಾಡುವುದು ಎರಡೂ ಸಾಮಾನ್ಯವಾಗಿದೆ’ ಎಂದರು.</p>.<p>ಸಂಸ್ಕೃತ ವಿದ್ವಾಂಸರಾದ ಕೆ.ಲೀಲಾ ಪ್ರಕಾಶ್ ಮಾತನಾಡಿದರು. ವೈದ್ಯರನ್ನು ಸನ್ಮಾನಿಸಲಾಯಿತು. ಧನ್ವಂತರಿ ಸಂಬಂಧ ಅನುಭವಗಳ ಹಂಚಿಕೆ, ಚಟುಕು, ಹನಿಗವನ, ಮುಕ್ತಕ, ಕವಿಗೋಷ್ಠಿ, ಲಲಿತ ಪ್ರಬಂಧ, ಗೀತ ಗಾಯನ, ಆಧುನಿಕ ವಚನ, ಹಾಸ್ಯ ಪ್ರಸಂಗ, ನ್ಯಾನೊ ಕತೆಗಳ ಅನಾವರಣ ನಡೆಯಿತು.</p>.<p>ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಮ.ನ.ಲತಾ ಮೋಹನ್, ಅಂತರರಾಷ್ಟ್ರೀಯ ಬಯೋವೆಲ್ಲಾ ತರಬೇತುದಾರ ಗುರುರಾಜ್, ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ, ಹೇಮಲತಾ ಕುಮಾರಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>