ಐಎಂಎ ಕೇಂದ್ರೀಯ ಸಮಿತಿ ಸದಸ್ಯ ಡಾ.ಎಸ್.ಪಿ.ಯೋಗಣ್ಣ ಮಾತನಾಡಿ, ‘ಆಯುರ್ವೇದ, ಯುನಾನಿ ಮತ್ತು ಹೋಮಿಯೊಪಥಿ ಹೀಗೆ... ಪ್ರತಿಯೊಂದಕ್ಕೂ ಪ್ರತ್ಯೇಕವಾದ ಚಿಕಿತ್ಸಾ ವಿಧಾನಗಳಿವೆ. ಇವುಗಳಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಒಂದಕ್ಕೊಂದು ಮಿಶ್ರಣ ಮಾಡಿದರೆ ಉಪಯೋಗಕ್ಕಿಂತ ಅಪಾಯವೇ ಹೆಚ್ಚು. ಈ ವಿಚಾರವನ್ನು ಪುನರ್ ಪರಿಶೀಲಿಸ ಬೇಕು’ ಎಂದು ಒತ್ತಾಯಿಸಿದರು.