<p><strong>ಮೈಸೂರು</strong>: ಮೈಸೂರು ನಗರ ಪೊಲೀಸ್ ಘಟಕದ ಶ್ವಾನದಳದಲ್ಲಿ ಮಾದಕ ದ್ರವ್ಯ ಪತ್ತೆ ಕರ್ತವ್ಯ ನಿರ್ವಹಿಸುತ್ತಿದ್ದ ‘ಹಿರೋ’ ಎಂಬ ಹೆಸರಿನ ಲ್ಯಾಬ್ರಡಾರ್ ತಳಿಯ ಶ್ವಾನವು ಶುಕ್ರವಾರ ವಯೋ ಸಹಜ ಕಾಯಿಲೆಗಳಿಂದ ನಿಧನವಾಯಿತು.</p>.<p>ತರಬೇತಿ ಪಡೆದ ಈ ಶ್ವಾನವು 2011ರ ಏಪ್ರಿಲ್ 4ರಂದು ಇಲಾಖೆಗೆ ಸೇರಿತ್ತು. ಹಲವು ಶ್ವಾನ ಪ್ರದರ್ಶನಗಳು ಹಾಗೂ ಅಣಕು ಕಾರ್ಯಾಚರಣೆಗಳಲ್ಲಿ ಈ ಶ್ವಾನವು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿತ್ತು. ಬಿ.ಎಸ್.ಸುನಿಲ್ಕುಮಾರ್ ಅವರು ಇದರ ತರಬೇತುದಾರರಾಗಿದ್ದರು.</p>.<p>ಈ ಶ್ವಾನವು ಇಲಾಖೆಯಲ್ಲಿ ಸುಮಾರು 10 ವರ್ಷ 12 ದಿನಗಳ ಕಾಲ ಯಶಸ್ವಿಯಾಗಿ ಸೇವೆ ಸಲ್ಲಿಸಿತ್ತು. ನಂತರ, ಇದು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿತ್ತು.</p>.<p>ಇದರ ಪಾರ್ಥೀವಶರೀರಕ್ಕೆ ನಗರ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಶಿವರಾಜು ಅವರ ನೇತೃತ್ವದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು.</p>.<p>ಶ್ವಾನದಳದ ಉಸ್ತುವಾರಿ ಅಧಿಕಾರಿಗಳಾದ ಕೆ.ಎಂ.ಮೂರ್ತಿ, ಸೋಮಣ್ಣ, ಸುರೇಶ್ ಹಾಗೂ ಶ್ವಾನದಳದ ಇತರೆ ಅಧಿಕಾರಿ ಹಾಗೂ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮೈಸೂರು ನಗರ ಪೊಲೀಸ್ ಘಟಕದ ಶ್ವಾನದಳದಲ್ಲಿ ಮಾದಕ ದ್ರವ್ಯ ಪತ್ತೆ ಕರ್ತವ್ಯ ನಿರ್ವಹಿಸುತ್ತಿದ್ದ ‘ಹಿರೋ’ ಎಂಬ ಹೆಸರಿನ ಲ್ಯಾಬ್ರಡಾರ್ ತಳಿಯ ಶ್ವಾನವು ಶುಕ್ರವಾರ ವಯೋ ಸಹಜ ಕಾಯಿಲೆಗಳಿಂದ ನಿಧನವಾಯಿತು.</p>.<p>ತರಬೇತಿ ಪಡೆದ ಈ ಶ್ವಾನವು 2011ರ ಏಪ್ರಿಲ್ 4ರಂದು ಇಲಾಖೆಗೆ ಸೇರಿತ್ತು. ಹಲವು ಶ್ವಾನ ಪ್ರದರ್ಶನಗಳು ಹಾಗೂ ಅಣಕು ಕಾರ್ಯಾಚರಣೆಗಳಲ್ಲಿ ಈ ಶ್ವಾನವು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿತ್ತು. ಬಿ.ಎಸ್.ಸುನಿಲ್ಕುಮಾರ್ ಅವರು ಇದರ ತರಬೇತುದಾರರಾಗಿದ್ದರು.</p>.<p>ಈ ಶ್ವಾನವು ಇಲಾಖೆಯಲ್ಲಿ ಸುಮಾರು 10 ವರ್ಷ 12 ದಿನಗಳ ಕಾಲ ಯಶಸ್ವಿಯಾಗಿ ಸೇವೆ ಸಲ್ಲಿಸಿತ್ತು. ನಂತರ, ಇದು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿತ್ತು.</p>.<p>ಇದರ ಪಾರ್ಥೀವಶರೀರಕ್ಕೆ ನಗರ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಶಿವರಾಜು ಅವರ ನೇತೃತ್ವದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು.</p>.<p>ಶ್ವಾನದಳದ ಉಸ್ತುವಾರಿ ಅಧಿಕಾರಿಗಳಾದ ಕೆ.ಎಂ.ಮೂರ್ತಿ, ಸೋಮಣ್ಣ, ಸುರೇಶ್ ಹಾಗೂ ಶ್ವಾನದಳದ ಇತರೆ ಅಧಿಕಾರಿ ಹಾಗೂ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>