<p>ಮೈಸೂರು: ‘ರಕ್ತದಾನದಿಂದ ನಮ್ಮ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ. ಬದಲಾಗಿ ಆರೋಗ್ಯದಲ್ಲಿ ಸುಧಾರಣೆಯಾಗುತ್ತದೆ’ ಎಂದು ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಪ್ರಭಾರ ನಿರ್ದೇಶಕ ಡಾ.ಕೆ.ಬಿ.ಚಂದ್ರಶೇಖರ್ ಹೇಳಿದರು.</p>.<p>ಇಲ್ಲಿನ ಸಂಸ್ಥೆ ಆವರಣದಲ್ಲಿ ವಿಶ್ವ ರಕ್ತದಾನಿ ದಿನಾಚರಣೆ ಅಂಗವಾಗಿ ಲಯನ್ಸ್ ಬ್ಲಡ್ ಸೆಂಟರ್ ಜೀವಧಾರ ಸಹಯೋಗದೊಂದಿಗೆ ಶುಕ್ರವಾರ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ರಕ್ತದಾನ ಅಭಿಯಾನದ ಪ್ರತಿಜ್ಞೆ ಬೋಧಿಸಿ ಮಾತನಾಡಿರು.</p>.<p>‘ಯುವ ಸಮುದಾಯವು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಬೇಕು. ಇದರಿಂದ ಬೇರೊಬ್ಬರ ಜೀವ ಉಳಿಸುವ ಮಹಾಕಾಯಕದಲ್ಲಿ ನಾವು ಭಾಗಿಯಾದಂತಾಗುತ್ತದೆ. ರಕ್ತದಾನ ಮಾಡಿದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುವ ಮೂಲಕ ಬೇರೆಯವರನ್ನು ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.</p>.<p>‘ಹರಿಯಾಣ ಮೂಲದ ಕ್ಯಾಪ್ಟನ್ ಸುರೇಶ್ಕುಮಾರ್ ಸೈನಿ ಅವರು ಸೇನೆಯಲ್ಲಿ ಸೇವೆ ಸಲ್ಲಿಸುತ್ತಾ 131 ಬಾರಿ ರಕ್ತದಾನ ಮತ್ತು 94 ಬಾರಿ ಪ್ಲೇಟ್ಲೆಟ್ಸ್ ದಾನ ಮಾಡಿ ದಾಖಲೆ ಮಾಡಿದ್ದಾರೆ. ಇಂಥ ವ್ಯಕ್ತಿಗಳು ನಮಗೆ ಸ್ಫೂರ್ತಿಯಾಗಬೇಕು’ ಎಂದು ಸ್ಮರಿಸಿದರು.</p>.<p>ಲಯನ್ಸ್ ಬ್ಲಡ್ ಸೆಂಟರ್ ಜೀವಧಾರದ ಡಾ.ಸುಷ್ಮಾ ಮಾತನಾಡಿ, ‘ಮಹಿಳೆಯರು ಮೂಢನಂಬಿಕೆಯನ್ನು ತೊರೆದು ಪ್ರತಿ ಆರು ತಿಂಗಳಿಗೊಮ್ಮೆ ರಕ್ತದಾನ ಮಾಡಬೇಕು. ಇದರಿಂದ ಆರೋಗ್ಯ ಲಾಭವೂ ಇದೆ. ರಕ್ತದಾನ ಮಾಡುವುದರಿಂದ ಹೃದ್ರೋಗ, ಥೈರಾಯಿಡ್ ಹಾಗೂ ಇತರ ಸಮಸ್ಯೆಗಳನ್ನು ತಡೆಯಲು ಪರಿಣಾಮಕಾರಿಯಾಗಿರುತ್ತದೆ’ ಎಂದು ಮನವರಿಕೆ<br />ಮಾಡಿಕೊಟ್ಟರು.</p>.<p>ಸಂಸ್ಥೆಯ 30 ಜನರು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ಆಯೋಜಕರಾದ ಕೆ.ಗಾಯಿತ್ರಿ, ರಂಜನಿ, ಕುಸುಮ, ಎಲ್.ವಿ.ರಾಮಕೃಷ್ಣ, ಸಿಬ್ಬಂದಿ ಎಸ್.ಬಾಲಸರಸ್ವತಿ, ಸಿ.ಎಂ.ಬಾಬು, ಎಂ.ಎನ್. ಚಂದ್ರಶೇಖರ್, ಜೀವಧಾರ ಕೇಂದ್ರದ ಮಹಾಂತೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ರಕ್ತದಾನದಿಂದ ನಮ್ಮ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ. ಬದಲಾಗಿ ಆರೋಗ್ಯದಲ್ಲಿ ಸುಧಾರಣೆಯಾಗುತ್ತದೆ’ ಎಂದು ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಪ್ರಭಾರ ನಿರ್ದೇಶಕ ಡಾ.ಕೆ.ಬಿ.ಚಂದ್ರಶೇಖರ್ ಹೇಳಿದರು.</p>.<p>ಇಲ್ಲಿನ ಸಂಸ್ಥೆ ಆವರಣದಲ್ಲಿ ವಿಶ್ವ ರಕ್ತದಾನಿ ದಿನಾಚರಣೆ ಅಂಗವಾಗಿ ಲಯನ್ಸ್ ಬ್ಲಡ್ ಸೆಂಟರ್ ಜೀವಧಾರ ಸಹಯೋಗದೊಂದಿಗೆ ಶುಕ್ರವಾರ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ರಕ್ತದಾನ ಅಭಿಯಾನದ ಪ್ರತಿಜ್ಞೆ ಬೋಧಿಸಿ ಮಾತನಾಡಿರು.</p>.<p>‘ಯುವ ಸಮುದಾಯವು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಬೇಕು. ಇದರಿಂದ ಬೇರೊಬ್ಬರ ಜೀವ ಉಳಿಸುವ ಮಹಾಕಾಯಕದಲ್ಲಿ ನಾವು ಭಾಗಿಯಾದಂತಾಗುತ್ತದೆ. ರಕ್ತದಾನ ಮಾಡಿದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುವ ಮೂಲಕ ಬೇರೆಯವರನ್ನು ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.</p>.<p>‘ಹರಿಯಾಣ ಮೂಲದ ಕ್ಯಾಪ್ಟನ್ ಸುರೇಶ್ಕುಮಾರ್ ಸೈನಿ ಅವರು ಸೇನೆಯಲ್ಲಿ ಸೇವೆ ಸಲ್ಲಿಸುತ್ತಾ 131 ಬಾರಿ ರಕ್ತದಾನ ಮತ್ತು 94 ಬಾರಿ ಪ್ಲೇಟ್ಲೆಟ್ಸ್ ದಾನ ಮಾಡಿ ದಾಖಲೆ ಮಾಡಿದ್ದಾರೆ. ಇಂಥ ವ್ಯಕ್ತಿಗಳು ನಮಗೆ ಸ್ಫೂರ್ತಿಯಾಗಬೇಕು’ ಎಂದು ಸ್ಮರಿಸಿದರು.</p>.<p>ಲಯನ್ಸ್ ಬ್ಲಡ್ ಸೆಂಟರ್ ಜೀವಧಾರದ ಡಾ.ಸುಷ್ಮಾ ಮಾತನಾಡಿ, ‘ಮಹಿಳೆಯರು ಮೂಢನಂಬಿಕೆಯನ್ನು ತೊರೆದು ಪ್ರತಿ ಆರು ತಿಂಗಳಿಗೊಮ್ಮೆ ರಕ್ತದಾನ ಮಾಡಬೇಕು. ಇದರಿಂದ ಆರೋಗ್ಯ ಲಾಭವೂ ಇದೆ. ರಕ್ತದಾನ ಮಾಡುವುದರಿಂದ ಹೃದ್ರೋಗ, ಥೈರಾಯಿಡ್ ಹಾಗೂ ಇತರ ಸಮಸ್ಯೆಗಳನ್ನು ತಡೆಯಲು ಪರಿಣಾಮಕಾರಿಯಾಗಿರುತ್ತದೆ’ ಎಂದು ಮನವರಿಕೆ<br />ಮಾಡಿಕೊಟ್ಟರು.</p>.<p>ಸಂಸ್ಥೆಯ 30 ಜನರು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ಆಯೋಜಕರಾದ ಕೆ.ಗಾಯಿತ್ರಿ, ರಂಜನಿ, ಕುಸುಮ, ಎಲ್.ವಿ.ರಾಮಕೃಷ್ಣ, ಸಿಬ್ಬಂದಿ ಎಸ್.ಬಾಲಸರಸ್ವತಿ, ಸಿ.ಎಂ.ಬಾಬು, ಎಂ.ಎನ್. ಚಂದ್ರಶೇಖರ್, ಜೀವಧಾರ ಕೇಂದ್ರದ ಮಹಾಂತೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>