<p><strong>ಮೈಸೂರು:</strong> ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕವು ನಿರ್ಮಿಸುತ್ತಿರುವ ಭವನಕ್ಕೆ ಮಹಾಸಭಾದಿಂದ ಜಿಲ್ಲೆಯ ಸದಸ್ಯತ್ವದ ಸಂಗ್ರಹದಿಂದ ಕೊಡಮಾಡುವ ₹ 50.22 ಲಕ್ಷವನ್ನು ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಸಚಿವ ಈಶ್ವರ ಖಂಡ್ರೆ ಜಿಲ್ಲಾ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.</p>.<p>‘ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಭವನ ನಿರ್ಮಾಣಕ್ಕಾಗಿ ರಾಜ್ಕುಮಾರ್ ರಸ್ತೆಯಲ್ಲಿ ಜಾಗ ಮಂಜೂರಾಗಿದ್ದು, ಕಟ್ಟಡ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ರಾಷ್ಟ್ರೀಯ ಸಂಘವು ಜಿಲ್ಲೆಯಿಂದ ಸಂಗ್ರಹಿಸಿದ ಸದಸ್ಯತ್ವ ಶುಲ್ಕದ ಶೇ 90 ಅನ್ನು ಕಟ್ಟಡ ನಿರ್ಮಾಣಕ್ಕೆ ನೀಡಲಾಗುತ್ತಿದೆ. ಇದಲ್ಲದೆ ಸಂಘದಿಂದ ₹ 50 ಲಕ್ಷ ಬಡ್ಡಿ ರಹಿತ ಸಾಲ ಒದಗಿಸಲಾಗಿದೆ’ ಎಂದು ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಬಸವರಾಜ್ ಹಿನಕಲ್ ತಿಳಿಸಿದರು.</p>.<p>ಮಹಾಸಭಾದ ಪದಾಧಿಕಾರಿಗಳಾದ ಭಾಗ್ಯರಾಜು, ಬಿ.ವಿ.ಬಸವರಾಜು, ಕೆ.ಕೆ.ಖಂಡೇಶ್, ಶಿವಕುಮಾರ್, ನಟರಾಜ್, ಗಿರಿಕುಮಾರ್, ಧರ್ಮಾ ಮಂಜುನಾಥ್, ಅನುಸೂಯ ಗಣೇಶ್, ಬಸವರಾಜ್, ಮಹೇಶ್ ಗೆದ್ದಗಳ್ಳಿ, ಪರಮೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕವು ನಿರ್ಮಿಸುತ್ತಿರುವ ಭವನಕ್ಕೆ ಮಹಾಸಭಾದಿಂದ ಜಿಲ್ಲೆಯ ಸದಸ್ಯತ್ವದ ಸಂಗ್ರಹದಿಂದ ಕೊಡಮಾಡುವ ₹ 50.22 ಲಕ್ಷವನ್ನು ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಸಚಿವ ಈಶ್ವರ ಖಂಡ್ರೆ ಜಿಲ್ಲಾ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.</p>.<p>‘ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಭವನ ನಿರ್ಮಾಣಕ್ಕಾಗಿ ರಾಜ್ಕುಮಾರ್ ರಸ್ತೆಯಲ್ಲಿ ಜಾಗ ಮಂಜೂರಾಗಿದ್ದು, ಕಟ್ಟಡ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ರಾಷ್ಟ್ರೀಯ ಸಂಘವು ಜಿಲ್ಲೆಯಿಂದ ಸಂಗ್ರಹಿಸಿದ ಸದಸ್ಯತ್ವ ಶುಲ್ಕದ ಶೇ 90 ಅನ್ನು ಕಟ್ಟಡ ನಿರ್ಮಾಣಕ್ಕೆ ನೀಡಲಾಗುತ್ತಿದೆ. ಇದಲ್ಲದೆ ಸಂಘದಿಂದ ₹ 50 ಲಕ್ಷ ಬಡ್ಡಿ ರಹಿತ ಸಾಲ ಒದಗಿಸಲಾಗಿದೆ’ ಎಂದು ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಬಸವರಾಜ್ ಹಿನಕಲ್ ತಿಳಿಸಿದರು.</p>.<p>ಮಹಾಸಭಾದ ಪದಾಧಿಕಾರಿಗಳಾದ ಭಾಗ್ಯರಾಜು, ಬಿ.ವಿ.ಬಸವರಾಜು, ಕೆ.ಕೆ.ಖಂಡೇಶ್, ಶಿವಕುಮಾರ್, ನಟರಾಜ್, ಗಿರಿಕುಮಾರ್, ಧರ್ಮಾ ಮಂಜುನಾಥ್, ಅನುಸೂಯ ಗಣೇಶ್, ಬಸವರಾಜ್, ಮಹೇಶ್ ಗೆದ್ದಗಳ್ಳಿ, ಪರಮೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>