<p><strong>ಬೆಳಕವಾಡಿ</strong>: ಸಮೀಪದ ಅಂತರಾಯನಪುರದದೊಡ್ಡಿ ಗ್ರಾಮದ ಹೊರವಲಯದ ತೋಟದ ಮನೆಯಲ್ಲಿ ಸಾಕಿದ್ದ ಕತ್ತೆ ಮೇಲೆ ಶನಿವಾರ ರಾತ್ರಿ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ.</p>.<p>ಮುತ್ತು ಅವರ ತೋಟದ ಮನೆಯಲ್ಲಿ ಸಾಕಿದ್ದ ಮೂರು ಕತ್ತೆಗಳ ಮೇಲೆ ಶನಿವಾರ ರಾತ್ರಿ ದಾಳಿ ಮಾಡಿದ ಚಿರತೆ ಕತ್ತೆಯೊಂದನ್ನು ಕೊಂದು ಎಳೆದೊಯ್ಯುವಾಗ ನಾಯಿಗಳ ಚೀರಾಟ ಕೇಳಿ ಮನೆಯ ಮಾಲೀಕ ಬಂದು ನೋಡಿದಾಗ ಚಿರತೆ ಕತ್ತೆ ಬಿಟ್ಟು ಪರಾರಿಯಾಗಿದೆ.</p>.<p>‘ತೋಟದ ಸುತ್ತಮುತ್ತ ಮೂರು ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ಇದ್ದರಿಂದ ಮನೆಯಿಂದ ಹೊರಬರಲು ಭಯಪಡುವಂತಾಗಿದೆ. ಸುಮಾರು ₹ 12 ಸಾವಿರ ಬೆಲೆ ಬಾಳುವ ಕತ್ತೆ ಮೃತ ಪಟ್ಟಿದ್ದು ನಷ್ಟವಾಗಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು’ ಎಂದು ಮಾಲೀಕ ಮುತ್ತು ಒತ್ತಾಯಿಸಿದ್ದಾರೆ.</p>.<p>‘ಇತ್ತೀಚಿನ ದಿನಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ತೋಟದ ಮನೆಯಲ್ಲಿ ವಾಸಿಸುವ ಜನರಿಗೆ ಜೀವಭಯದ ವಾತಾವರಣ ಉಂಟಾಗಿದೆ. ಸಾಕುಪ್ರಾಣಿಗಳನ್ನು ರಕ್ಷಿಸುವುದು ಕಷ್ಟವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಎಚ್ಚೆತ್ತು ಚಿರತೆ ಸೆರೆಗೆ ಮುಂದಾಗಬೇಕು’ ಎಂದು ತೋಟದ ಮನೆಯ ಎಸ್. ರಾಜು, ಮುತ್ತು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಕವಾಡಿ</strong>: ಸಮೀಪದ ಅಂತರಾಯನಪುರದದೊಡ್ಡಿ ಗ್ರಾಮದ ಹೊರವಲಯದ ತೋಟದ ಮನೆಯಲ್ಲಿ ಸಾಕಿದ್ದ ಕತ್ತೆ ಮೇಲೆ ಶನಿವಾರ ರಾತ್ರಿ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ.</p>.<p>ಮುತ್ತು ಅವರ ತೋಟದ ಮನೆಯಲ್ಲಿ ಸಾಕಿದ್ದ ಮೂರು ಕತ್ತೆಗಳ ಮೇಲೆ ಶನಿವಾರ ರಾತ್ರಿ ದಾಳಿ ಮಾಡಿದ ಚಿರತೆ ಕತ್ತೆಯೊಂದನ್ನು ಕೊಂದು ಎಳೆದೊಯ್ಯುವಾಗ ನಾಯಿಗಳ ಚೀರಾಟ ಕೇಳಿ ಮನೆಯ ಮಾಲೀಕ ಬಂದು ನೋಡಿದಾಗ ಚಿರತೆ ಕತ್ತೆ ಬಿಟ್ಟು ಪರಾರಿಯಾಗಿದೆ.</p>.<p>‘ತೋಟದ ಸುತ್ತಮುತ್ತ ಮೂರು ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ಇದ್ದರಿಂದ ಮನೆಯಿಂದ ಹೊರಬರಲು ಭಯಪಡುವಂತಾಗಿದೆ. ಸುಮಾರು ₹ 12 ಸಾವಿರ ಬೆಲೆ ಬಾಳುವ ಕತ್ತೆ ಮೃತ ಪಟ್ಟಿದ್ದು ನಷ್ಟವಾಗಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು’ ಎಂದು ಮಾಲೀಕ ಮುತ್ತು ಒತ್ತಾಯಿಸಿದ್ದಾರೆ.</p>.<p>‘ಇತ್ತೀಚಿನ ದಿನಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ತೋಟದ ಮನೆಯಲ್ಲಿ ವಾಸಿಸುವ ಜನರಿಗೆ ಜೀವಭಯದ ವಾತಾವರಣ ಉಂಟಾಗಿದೆ. ಸಾಕುಪ್ರಾಣಿಗಳನ್ನು ರಕ್ಷಿಸುವುದು ಕಷ್ಟವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಎಚ್ಚೆತ್ತು ಚಿರತೆ ಸೆರೆಗೆ ಮುಂದಾಗಬೇಕು’ ಎಂದು ತೋಟದ ಮನೆಯ ಎಸ್. ರಾಜು, ಮುತ್ತು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>