<p><strong>ಮೈಸೂರು</strong>: ‘ಕೋವಿಡ್ ಅವಧಿಯಲ್ಲಿ ಸಾಮಗ್ರಿಗಳ ಖರೀದಿಯಲ್ಲಿ ಲೋಪವಾಗಿದೆಯೋ ಇಲ್ಲವೋ ಗೊತ್ತಿಲ್ಲ. ನಾನು ಟಾಸ್ಕ್ಪೋರ್ಸ್ ಸಮಿತಿ ಅಧ್ಯಕ್ಷನಲ್ಲ. ಬೇಕಿದ್ದರೆ ತನಿಖೆ ಮಾಡಲಿ’ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಹೇಳಿದರು.</p>.<p>ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಸಲಹಾ ಸಮಿತಿ ಸದಸ್ಯನಷ್ಟೇ. ನನ್ನಂತೆ ಬಹಳಷ್ಟು ವೈದ್ಯರು ಸಮಿತಿಯಲ್ಲಿದ್ದರು. ನಮ್ಮದ್ದೇನಿದ್ದರೂ ಪರಿಸ್ಥಿತಿಗೆ ಅನುಗುಣವಾಗಿ ಸಲಹೆ ಕೊಡುವುದಷ್ಟೇ. ಆಡಳಿತಾತ್ಮಕವಾಗಿ ಅಥವಾ ಆರ್ಥಿಕ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರವಿರಲಿಲ್ಲ. ಅದು ನಮ್ಮ ಕೆಲಸವೂ ಆಗಿರಲಿಲ್ಲ’ ಎಂದರು.</p>.<p>‘ಚನ್ನಪಟ್ಟಣ ಉಪಚುನಾವಣೆ ವಿಚಾರದಲ್ಲಿ, ಯೋಗೇಶ್ವರ್ ಅವರಿಗೆ ಸದ್ಯದ ಪರಿಸ್ಥಿತಿ ಅರ್ಥವಾಗಿ ಸೋಲುವ ರೀತಿ ಮಾತನಾಡಿದ್ದಾರೆ. ಕ್ಷೇತ್ರದ ಒಲವು ಯಾರ ಕಡೆಗಿದೆ ಎಂಬುದು ಜೆಡಿಎಸ್ ಮತ್ತು ಬಿಜೆಪಿಗೆ ಗೊತ್ತಾಗಿದೆ. ನಿಖಿಲ್ ಗೆಲ್ಲುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಕೋವಿಡ್ ಅವಧಿಯಲ್ಲಿ ಸಾಮಗ್ರಿಗಳ ಖರೀದಿಯಲ್ಲಿ ಲೋಪವಾಗಿದೆಯೋ ಇಲ್ಲವೋ ಗೊತ್ತಿಲ್ಲ. ನಾನು ಟಾಸ್ಕ್ಪೋರ್ಸ್ ಸಮಿತಿ ಅಧ್ಯಕ್ಷನಲ್ಲ. ಬೇಕಿದ್ದರೆ ತನಿಖೆ ಮಾಡಲಿ’ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಹೇಳಿದರು.</p>.<p>ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಸಲಹಾ ಸಮಿತಿ ಸದಸ್ಯನಷ್ಟೇ. ನನ್ನಂತೆ ಬಹಳಷ್ಟು ವೈದ್ಯರು ಸಮಿತಿಯಲ್ಲಿದ್ದರು. ನಮ್ಮದ್ದೇನಿದ್ದರೂ ಪರಿಸ್ಥಿತಿಗೆ ಅನುಗುಣವಾಗಿ ಸಲಹೆ ಕೊಡುವುದಷ್ಟೇ. ಆಡಳಿತಾತ್ಮಕವಾಗಿ ಅಥವಾ ಆರ್ಥಿಕ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರವಿರಲಿಲ್ಲ. ಅದು ನಮ್ಮ ಕೆಲಸವೂ ಆಗಿರಲಿಲ್ಲ’ ಎಂದರು.</p>.<p>‘ಚನ್ನಪಟ್ಟಣ ಉಪಚುನಾವಣೆ ವಿಚಾರದಲ್ಲಿ, ಯೋಗೇಶ್ವರ್ ಅವರಿಗೆ ಸದ್ಯದ ಪರಿಸ್ಥಿತಿ ಅರ್ಥವಾಗಿ ಸೋಲುವ ರೀತಿ ಮಾತನಾಡಿದ್ದಾರೆ. ಕ್ಷೇತ್ರದ ಒಲವು ಯಾರ ಕಡೆಗಿದೆ ಎಂಬುದು ಜೆಡಿಎಸ್ ಮತ್ತು ಬಿಜೆಪಿಗೆ ಗೊತ್ತಾಗಿದೆ. ನಿಖಿಲ್ ಗೆಲ್ಲುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>