<p><strong>ಮೈಸೂರು:</strong> ‘ಪ್ರತಿಯೊಬ್ಬರೂ ಉದಾರತೆ, ಒಳ್ಳೆಯತನ ಮತ್ತು ವಿಶಾಲ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ ಸಲಹೆ ನೀಡಿದರು.</p>.<p>ವಿಶ್ವಮಾನವ ಮೈಸೂರು ವಿಶ್ವವಿದ್ಯಾಲಯ ನೌಕರರ ವೇದಿಕೆ ಹಾಗೂ ನವ ವಿಶ್ವಮಾನವ ಟ್ರಸ್ಟ್ ಸೋಮವಾರ ಇಲ್ಲಿನ ಮಹಾರಾಜ ಕಾಲೇಜು ಹೊಸ ಕಟ್ಟಡದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ, ಸಿಂಡಿಕೇಟ್ ಸದಸ್ಯ ಪ್ರೊ.ಶಬ್ಬೀರ್ ಮುಸ್ತಫಾ ಅವರ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.</p>.<p>‘ಕರ್ತವ್ಯಲೋಪ ಇಲ್ಲದೆ ಕೆಲಸ ಮಾಡಿದರೆ ವೃತ್ತಿ ಜೀವನ ಸಾರ್ಥಕವಾಗುತ್ತದೆ. ಯಾವುದೇ ನೌಕರಿ ಇರಲಿ ಸೇವಾ ಮನೋಭಾವದಿಂದ ಕೆಲಸ ಮಾಡಬೇಕು. ಸರ್ಕಾರಿ ನೌಕರಿ ಪಡೆದವರು ಸಕಾರಾತ್ಮಕ ಧೋರಣೆಯೊಂದಿಗೆ ಸಮಾಜಕ್ಕೆ ನೆರವಾಗಬೇಕು’ ಎಂದು ತಿಳಿಸಿದರು.</p>.<p>ಮುಖ್ಯ ಅತಿಥಿಯಾಗಿದ್ದ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ, ‘ಸರಿಯಾಗಿ ಕಾರ್ಯನಿರ್ವಹಿಸಿದರೆ ಸ್ಮರಿಸಿ, ಸನ್ಮಾನಿಸಿ ಬೀಳ್ಕೊಡಲಾಗುತ್ತದೆ’ ಎಂದರು.</p>.<p>ವಿಜಯನಗರ ಎಸಿಪಿ ಪಿ. ರವಿಪ್ರಸಾದ್ ಮಾತನಾಡಿ, ‘ಮಹಾರಾಜ ಕಾಲೇಜಿಗೆ ದೊಡ್ಡ ಪರಂಪರೆ ಇದೆ. ನಾನೂ ಈ ಕಾಲೇಜಿನ ವಿದ್ಯಾರ್ಥಿ. ನಮ್ಮ ಬ್ಯಾಚ್ನ 27 ಮಂದಿ ಎಸ್ಐಗಳಾಗಿ ಆಯ್ಕೆಯಾದೆವು. ವಿದ್ಯಾರ್ಥಿಗಳು ಉತ್ತಮ ಗುರುಗಳ ಮಾರ್ಗದರ್ಶನ ಪಡೆದು ಮುಂದೆ ಬರಬೇಕು’ ಎಂದು ಹೇಳಿದರು.</p>.<p>ಮೈವಿವಿ ಸಿಂಡಿಕೇಟ್ ಸದಸ್ಯ ಪ್ರೊ.ಶಬ್ಬೀರ್ ಮುಸ್ತಫಾ ಮಾತನಾಡಿ, ‘ಪ್ರಸ್ತುತ ಉನ್ನತ ಶಿಕ್ಷಣದ ಪರಿಸ್ಥಿತಿ ಚೆನ್ನಾಗಿಲ್ಲ. ಶೇ 80ರಷ್ಟು ಮಂದಿಯನ್ನು ಅತಿಥಿ ಉಪನ್ಯಾಸಕರಾಗಿಯೇ ದುಡಿಸಿಕೊಳ್ಳಲಾಗುತ್ತಿದೆ. ಇದರಿಂದ ಗುಣಾತ್ಮಕ ಶಿಕ್ಷಣ ಸಾಧ್ಯವಾಗಿಲ್ಲ. ಆದ್ದರಿಂದ ಇಂತಹ ವ್ಯವಸ್ಥೆ ವಿರುದ್ಧ ಪ್ರತಿಭಟಿಸಬೇಕು’ ಎಂದು ತಿಳಿಸಿದರು.</p>.<p>ಮಹಾರಾಜ ಕಾಲೇಜು ಪ್ರಾಂಶುಪಾಲ ಎಚ್.ಸಿ. ದೇವರಾಜೇಗೌಡ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮುಖ್ಯ ಅತಿಥಿಯಾಗಿದ್ದರು. ಮಹಾರಾಜ ಕಾಲೇಜಿನ ಅಧೀಕ್ಷಕ ಉಮೇಶಚಂದ್ರ, ವಿನೋದ್, ವರ್ಗವಾದ ಚಂದ್ರಶೇಖರ್ ಹಾಗೂ ಹೇಮಂತಕುಮಾರ್ ಅವರನ್ನು ಸನ್ಮಾನಿಸಲಾಯಿತು.</p>.<p>ವೇದಿಕೆಯ ಅಧ್ಯಕ್ಷ ಆರ್. ವಾಸುದೇವ, ಭಾಸ್ಕರ್, ವಿನೋದ್, ಕೆ. ಗಣೇಶ್, ಚಿದಾನಂದ, ನವೀನ್, ಟಿ.ಎಂ. ಸರಸ್ವತಿ, ಬಿ.ಎಸ್. ದಿನಮಣಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಪ್ರತಿಯೊಬ್ಬರೂ ಉದಾರತೆ, ಒಳ್ಳೆಯತನ ಮತ್ತು ವಿಶಾಲ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ ಸಲಹೆ ನೀಡಿದರು.</p>.<p>ವಿಶ್ವಮಾನವ ಮೈಸೂರು ವಿಶ್ವವಿದ್ಯಾಲಯ ನೌಕರರ ವೇದಿಕೆ ಹಾಗೂ ನವ ವಿಶ್ವಮಾನವ ಟ್ರಸ್ಟ್ ಸೋಮವಾರ ಇಲ್ಲಿನ ಮಹಾರಾಜ ಕಾಲೇಜು ಹೊಸ ಕಟ್ಟಡದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ, ಸಿಂಡಿಕೇಟ್ ಸದಸ್ಯ ಪ್ರೊ.ಶಬ್ಬೀರ್ ಮುಸ್ತಫಾ ಅವರ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.</p>.<p>‘ಕರ್ತವ್ಯಲೋಪ ಇಲ್ಲದೆ ಕೆಲಸ ಮಾಡಿದರೆ ವೃತ್ತಿ ಜೀವನ ಸಾರ್ಥಕವಾಗುತ್ತದೆ. ಯಾವುದೇ ನೌಕರಿ ಇರಲಿ ಸೇವಾ ಮನೋಭಾವದಿಂದ ಕೆಲಸ ಮಾಡಬೇಕು. ಸರ್ಕಾರಿ ನೌಕರಿ ಪಡೆದವರು ಸಕಾರಾತ್ಮಕ ಧೋರಣೆಯೊಂದಿಗೆ ಸಮಾಜಕ್ಕೆ ನೆರವಾಗಬೇಕು’ ಎಂದು ತಿಳಿಸಿದರು.</p>.<p>ಮುಖ್ಯ ಅತಿಥಿಯಾಗಿದ್ದ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ, ‘ಸರಿಯಾಗಿ ಕಾರ್ಯನಿರ್ವಹಿಸಿದರೆ ಸ್ಮರಿಸಿ, ಸನ್ಮಾನಿಸಿ ಬೀಳ್ಕೊಡಲಾಗುತ್ತದೆ’ ಎಂದರು.</p>.<p>ವಿಜಯನಗರ ಎಸಿಪಿ ಪಿ. ರವಿಪ್ರಸಾದ್ ಮಾತನಾಡಿ, ‘ಮಹಾರಾಜ ಕಾಲೇಜಿಗೆ ದೊಡ್ಡ ಪರಂಪರೆ ಇದೆ. ನಾನೂ ಈ ಕಾಲೇಜಿನ ವಿದ್ಯಾರ್ಥಿ. ನಮ್ಮ ಬ್ಯಾಚ್ನ 27 ಮಂದಿ ಎಸ್ಐಗಳಾಗಿ ಆಯ್ಕೆಯಾದೆವು. ವಿದ್ಯಾರ್ಥಿಗಳು ಉತ್ತಮ ಗುರುಗಳ ಮಾರ್ಗದರ್ಶನ ಪಡೆದು ಮುಂದೆ ಬರಬೇಕು’ ಎಂದು ಹೇಳಿದರು.</p>.<p>ಮೈವಿವಿ ಸಿಂಡಿಕೇಟ್ ಸದಸ್ಯ ಪ್ರೊ.ಶಬ್ಬೀರ್ ಮುಸ್ತಫಾ ಮಾತನಾಡಿ, ‘ಪ್ರಸ್ತುತ ಉನ್ನತ ಶಿಕ್ಷಣದ ಪರಿಸ್ಥಿತಿ ಚೆನ್ನಾಗಿಲ್ಲ. ಶೇ 80ರಷ್ಟು ಮಂದಿಯನ್ನು ಅತಿಥಿ ಉಪನ್ಯಾಸಕರಾಗಿಯೇ ದುಡಿಸಿಕೊಳ್ಳಲಾಗುತ್ತಿದೆ. ಇದರಿಂದ ಗುಣಾತ್ಮಕ ಶಿಕ್ಷಣ ಸಾಧ್ಯವಾಗಿಲ್ಲ. ಆದ್ದರಿಂದ ಇಂತಹ ವ್ಯವಸ್ಥೆ ವಿರುದ್ಧ ಪ್ರತಿಭಟಿಸಬೇಕು’ ಎಂದು ತಿಳಿಸಿದರು.</p>.<p>ಮಹಾರಾಜ ಕಾಲೇಜು ಪ್ರಾಂಶುಪಾಲ ಎಚ್.ಸಿ. ದೇವರಾಜೇಗೌಡ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮುಖ್ಯ ಅತಿಥಿಯಾಗಿದ್ದರು. ಮಹಾರಾಜ ಕಾಲೇಜಿನ ಅಧೀಕ್ಷಕ ಉಮೇಶಚಂದ್ರ, ವಿನೋದ್, ವರ್ಗವಾದ ಚಂದ್ರಶೇಖರ್ ಹಾಗೂ ಹೇಮಂತಕುಮಾರ್ ಅವರನ್ನು ಸನ್ಮಾನಿಸಲಾಯಿತು.</p>.<p>ವೇದಿಕೆಯ ಅಧ್ಯಕ್ಷ ಆರ್. ವಾಸುದೇವ, ಭಾಸ್ಕರ್, ವಿನೋದ್, ಕೆ. ಗಣೇಶ್, ಚಿದಾನಂದ, ನವೀನ್, ಟಿ.ಎಂ. ಸರಸ್ವತಿ, ಬಿ.ಎಸ್. ದಿನಮಣಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>