<p><strong>ಸಾಲಿಗ್ರಾಮ: </strong>ಸಾಲಿಗ್ರಾಮ, ಕೆ.ಆರ್.ನಗರ ತಾಲ್ಲೂಕುಗಳ ರೈತಾಪಿ ವರ್ಗದ ಭೂ ದಾಖಲೆಗಳ ಗಣಕೀಕರಣ ಮಾಡುವ ಭೂ ಸುರಕ್ಷಾ ಯೋಜನೆಗೆ ಶಾಸಕ ಡಿ.ರವಿಶಂಕರ್ ಸೋಮವಾರ ಚಾಲನೆ ನೀಡಿದರು.</p>.<p>‘ರೈತ ಸಮುದಾಯವು ತಮ್ಮ ಜಮೀನಿನ ದಾಖಲೆಗಳನ್ನು ಯಾವುದೇ ಕುಳಿತ ಸ್ಥಳದಲ್ಲೇ ನೋಡಬಹುದಾದ ಸರಳೀಕೃತ ವ್ಯವಸ್ಥೆ ಮಾಡಲಾಗುತ್ತಿದೆ. ಇದನ್ನು ತಿದ್ದುವ ಅಥವಾ ಬದಲಾಯಿಸಲು ಸಾಧ್ಯವಿಲ್ಲ. ಇದರಿಂದ ದಾಖಲೆಗಳ ಬಗ್ಗೆ ಇರುವ ಗೊಂದಲ ನಿವಾರಣೆಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಅವಳಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಭೂಮಿ ವಿಸ್ತೀರ್ಣವನ್ನು ಗಣಕೀಕೃತ ಮಾಡುವ ವೇಳೆ ಸಿಬ್ಬಂದಿ ಜಾಗರೂಕರಾಗಿ ಕೆಲಸ ನಿರ್ವಹಿಸಬೇಕು. ಈ ಹಿಂದೆ ಕೈತಪ್ಪಿನಿಂದ ಆಗುತ್ತಿದ್ದ ವ್ಯತ್ಯಾಸದಿಂದ ಕೆಲವು ರೈತರು ಜಮೀನು ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗುತ್ತಿತು. ಗಣಕೀಕೃತವಾಗುತ್ತಿರುವ ಹಿನ್ನೆಲೆಯಲ್ಲಿ ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ’ ಎಂದು ತಿಳಿಸಿದರು.</p>.<p>ಕೆ.ಆರ್.ನಗರ ತಹಶೀಲ್ದಾರ್ ಸುರೇಂದ್ರಕುಮಾರ್, ಸಾಲಿಗ್ರಾಮ ತಹಶೀಲ್ದಾರ್ ಎಸ್.ಎನ್.ನರಗುಂದ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಲಿಗ್ರಾಮ: </strong>ಸಾಲಿಗ್ರಾಮ, ಕೆ.ಆರ್.ನಗರ ತಾಲ್ಲೂಕುಗಳ ರೈತಾಪಿ ವರ್ಗದ ಭೂ ದಾಖಲೆಗಳ ಗಣಕೀಕರಣ ಮಾಡುವ ಭೂ ಸುರಕ್ಷಾ ಯೋಜನೆಗೆ ಶಾಸಕ ಡಿ.ರವಿಶಂಕರ್ ಸೋಮವಾರ ಚಾಲನೆ ನೀಡಿದರು.</p>.<p>‘ರೈತ ಸಮುದಾಯವು ತಮ್ಮ ಜಮೀನಿನ ದಾಖಲೆಗಳನ್ನು ಯಾವುದೇ ಕುಳಿತ ಸ್ಥಳದಲ್ಲೇ ನೋಡಬಹುದಾದ ಸರಳೀಕೃತ ವ್ಯವಸ್ಥೆ ಮಾಡಲಾಗುತ್ತಿದೆ. ಇದನ್ನು ತಿದ್ದುವ ಅಥವಾ ಬದಲಾಯಿಸಲು ಸಾಧ್ಯವಿಲ್ಲ. ಇದರಿಂದ ದಾಖಲೆಗಳ ಬಗ್ಗೆ ಇರುವ ಗೊಂದಲ ನಿವಾರಣೆಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಅವಳಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಭೂಮಿ ವಿಸ್ತೀರ್ಣವನ್ನು ಗಣಕೀಕೃತ ಮಾಡುವ ವೇಳೆ ಸಿಬ್ಬಂದಿ ಜಾಗರೂಕರಾಗಿ ಕೆಲಸ ನಿರ್ವಹಿಸಬೇಕು. ಈ ಹಿಂದೆ ಕೈತಪ್ಪಿನಿಂದ ಆಗುತ್ತಿದ್ದ ವ್ಯತ್ಯಾಸದಿಂದ ಕೆಲವು ರೈತರು ಜಮೀನು ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗುತ್ತಿತು. ಗಣಕೀಕೃತವಾಗುತ್ತಿರುವ ಹಿನ್ನೆಲೆಯಲ್ಲಿ ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ’ ಎಂದು ತಿಳಿಸಿದರು.</p>.<p>ಕೆ.ಆರ್.ನಗರ ತಹಶೀಲ್ದಾರ್ ಸುರೇಂದ್ರಕುಮಾರ್, ಸಾಲಿಗ್ರಾಮ ತಹಶೀಲ್ದಾರ್ ಎಸ್.ಎನ್.ನರಗುಂದ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>