<p><strong>ಮೈಸೂರು</strong>: ಸೋಮವಾರ ಮೈಸೂರಿಗೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ‘ವಜ್ರ ಮಹೋತ್ಸವ‘ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.</p><p>ಈ ವೇಳೆ ಕನ್ನಡದಲ್ಲೇ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದ್ರೌಪದಿ ಮುರ್ಮು ಅವರ ಕಡೆಗೆ ತಿರುಗಿ ‘ಕನ್ನಡ ನಿಮಗೆ ಗೊತ್ತಾಗುತ್ತಾ... ಯು ನೋ ಕನ್ನಡ’ ಎಂದು ಕೇಳಿದ್ದಾರೆ.</p><p>ಇದಕ್ಕೆ ಪ್ರತಿಕ್ರಿಯಿಸಿದ ಮುರ್ಮು ಅವರು, ‘ನಿಮ್ಮ ಮಾತೃಭಾಷೆ ಗೊತ್ತಿಲ್ಲ. ಕರ್ನಾಟಕದ ಭಾಷೆಯಲ್ಲದೇ ಭಾರತದಲ್ಲಿರುವ ಬಹು ಭಾಷಾ ಸಂಸ್ಕೃತಿ, ಪರಂಪರೆಯನ್ನು ಪ್ರೀತಿಸುವುದು, ಗೌರವಿಸುವುದು ಹಾಗೂ ಸಮ್ಮಾನಿಸುವುದು ನಮ್ಮೆಲ್ಲರ ಕರ್ತವ್ಯ. ಶೀಘ್ರದಲ್ಲೇ ಸ್ವಲ್ಪವಾದರೂ ಕನ್ನಡ ಕಲಿಯುವೆ’ ಎಂದು ಹೇಳಿ ನಕ್ಕಿದ್ದಾರೆ. </p>.<p>ನಿನ್ನೆ ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುರ್ಮು ಅವರನ್ನು ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಸ್ವಾಗತಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಸೋಮವಾರ ಮೈಸೂರಿಗೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ‘ವಜ್ರ ಮಹೋತ್ಸವ‘ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.</p><p>ಈ ವೇಳೆ ಕನ್ನಡದಲ್ಲೇ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದ್ರೌಪದಿ ಮುರ್ಮು ಅವರ ಕಡೆಗೆ ತಿರುಗಿ ‘ಕನ್ನಡ ನಿಮಗೆ ಗೊತ್ತಾಗುತ್ತಾ... ಯು ನೋ ಕನ್ನಡ’ ಎಂದು ಕೇಳಿದ್ದಾರೆ.</p><p>ಇದಕ್ಕೆ ಪ್ರತಿಕ್ರಿಯಿಸಿದ ಮುರ್ಮು ಅವರು, ‘ನಿಮ್ಮ ಮಾತೃಭಾಷೆ ಗೊತ್ತಿಲ್ಲ. ಕರ್ನಾಟಕದ ಭಾಷೆಯಲ್ಲದೇ ಭಾರತದಲ್ಲಿರುವ ಬಹು ಭಾಷಾ ಸಂಸ್ಕೃತಿ, ಪರಂಪರೆಯನ್ನು ಪ್ರೀತಿಸುವುದು, ಗೌರವಿಸುವುದು ಹಾಗೂ ಸಮ್ಮಾನಿಸುವುದು ನಮ್ಮೆಲ್ಲರ ಕರ್ತವ್ಯ. ಶೀಘ್ರದಲ್ಲೇ ಸ್ವಲ್ಪವಾದರೂ ಕನ್ನಡ ಕಲಿಯುವೆ’ ಎಂದು ಹೇಳಿ ನಕ್ಕಿದ್ದಾರೆ. </p>.<p>ನಿನ್ನೆ ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುರ್ಮು ಅವರನ್ನು ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಸ್ವಾಗತಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>