<p>ಹುಣಸೂರು: ಯುವಕರನ್ನು ಕೆಟ್ಟ ಚಟಗಳಿಗೆ ಬಲಿಮಾಡಿ ಬದುಕು ಕತ್ತಲೆಯಾಗಿಸುವ ಸಮಾಜಘಾತುಕ ಶಕ್ತಿಗಳಿದ್ದು, ಎಚ್ಚರಿಕೆ ನಡೆ ಅಗತ್ಯ ಎಂದು ಹುಣಸೂರು ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ಮುನಿಯಪ್ಪ ಹೇಳಿದರು.</p>.<p>ತಾಲ್ಲೂಕಿನ ಹನಗೋಡು ಹೋಬಳಿ ಕೇಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ಮಾರಾಟ ಮತ್ತು ಸೇವನೆ ನಿಷೇಧ ಕುರಿತ ಜಾಗೃತಿ ಕಾರ್ಯಗಾರದಲ್ಲಿ ಮಾತನಾಡಿದರು. ವಿದ್ಯಾವಂತ ಯುವಕರು ಅಪರಿಚಿತರೊಂದಿಗೆ ಸ್ನೇಹ ಸಂಪರ್ಕ ಬೆಳೆಸುವ ಮುನ್ನ ಆ ವ್ಯಕ್ತಿಯ ಸಂಪೂರ್ಣ ಮಾಹಿತಿ ಪಡೆದು ನಂತರದಲ್ಲಿ ಸ್ನೇಹ ಬೆಳೆಸಬೇಕು ಎಂದರು.</p>.<p>ಶಾಲಾ–ಕಾಲೇಜು ಸುತ್ತ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು ಸರ್ಕಾರ ನಿಷೇಧಿಸಿದ್ದು, ಇದನ್ನು ಉಲ್ಲಂಘಿಸಿದವರ ಬಗ್ಗೆ ಮಾಹಿತಿ ನೀಡುವುದರಿಂದ ತಂಬಾಕು ಉತ್ಪನ್ನ ಮಾರಾಟಕ್ಕೆ ಕಡಿವಾಣ ಹಾಕಲು ಸಹಾಯವಾಗಲಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಪೋಕ್ಸೊ ಕಾಯ್ದೆ, ಸೈಬರ್ ಕ್ರೈಂ, ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಾಂತರ ಠಾಣೆ ಪಿಎಸ್ಐ ಬಸಪ್ಪ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸೂರು: ಯುವಕರನ್ನು ಕೆಟ್ಟ ಚಟಗಳಿಗೆ ಬಲಿಮಾಡಿ ಬದುಕು ಕತ್ತಲೆಯಾಗಿಸುವ ಸಮಾಜಘಾತುಕ ಶಕ್ತಿಗಳಿದ್ದು, ಎಚ್ಚರಿಕೆ ನಡೆ ಅಗತ್ಯ ಎಂದು ಹುಣಸೂರು ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ಮುನಿಯಪ್ಪ ಹೇಳಿದರು.</p>.<p>ತಾಲ್ಲೂಕಿನ ಹನಗೋಡು ಹೋಬಳಿ ಕೇಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ಮಾರಾಟ ಮತ್ತು ಸೇವನೆ ನಿಷೇಧ ಕುರಿತ ಜಾಗೃತಿ ಕಾರ್ಯಗಾರದಲ್ಲಿ ಮಾತನಾಡಿದರು. ವಿದ್ಯಾವಂತ ಯುವಕರು ಅಪರಿಚಿತರೊಂದಿಗೆ ಸ್ನೇಹ ಸಂಪರ್ಕ ಬೆಳೆಸುವ ಮುನ್ನ ಆ ವ್ಯಕ್ತಿಯ ಸಂಪೂರ್ಣ ಮಾಹಿತಿ ಪಡೆದು ನಂತರದಲ್ಲಿ ಸ್ನೇಹ ಬೆಳೆಸಬೇಕು ಎಂದರು.</p>.<p>ಶಾಲಾ–ಕಾಲೇಜು ಸುತ್ತ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು ಸರ್ಕಾರ ನಿಷೇಧಿಸಿದ್ದು, ಇದನ್ನು ಉಲ್ಲಂಘಿಸಿದವರ ಬಗ್ಗೆ ಮಾಹಿತಿ ನೀಡುವುದರಿಂದ ತಂಬಾಕು ಉತ್ಪನ್ನ ಮಾರಾಟಕ್ಕೆ ಕಡಿವಾಣ ಹಾಕಲು ಸಹಾಯವಾಗಲಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಪೋಕ್ಸೊ ಕಾಯ್ದೆ, ಸೈಬರ್ ಕ್ರೈಂ, ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಾಂತರ ಠಾಣೆ ಪಿಎಸ್ಐ ಬಸಪ್ಪ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>