<p><strong>ಮೈಸೂರು</strong>: ‘ನಶೆ ಮುಕ್ತ ಮೈಸೂರು ನಿರ್ಮಾಣಕ್ಕಾಗಿ ಒತ್ತಾಯಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಜ.12ರಂದು ಬೆಳಿಗ್ಗೆ 10ಕ್ಕೆ ಇಲ್ಲಿನ ಅಗ್ರಹಾರ ವೃತ್ತದಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ’ ಎಂದು ಕನ್ನಡಪರ ಹೋರಾಟಗಾರ ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದರು.</p><p>‘ಮಾದಕ ದ್ರವ್ಯಗಳು ಬೇಡ, ನಶೆ ಮುಕ್ತ ಮೈಸೂರು ಅಭಿಯಾನದ ಭಾಗವಾಗಿ ಧರಣಿ ನಡೆಸಲಾಗುತ್ತಿದೆ. ವಿವಿಧ ಸಂಘ–ಸಂಸ್ಥೆಗಳು ನಮ್ಮೊಂದಿಗೆ ಕೈಜೋಡಿಸಿವೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p><p>‘ಸರ್ಕಾರಗಳು ಮಾದಕ ವಸ್ತು ಮಾರಾಟಕ್ಕೆ ಸಂಪೂರ್ಣವಾಗಿ ಕಡಿವಾಣ ಹಾಕಬೇಕು ಎಂಬ ಹಕ್ಕೊತ್ತಾಯ ಮಂಡಿಸಲಾಗುವುದು. ವ್ಯಸನಮುಕ್ತ ಜೀವನ ನಡೆಸಲು ಯುವಜನರನ್ನು ಪ್ರೇರೇಪಿಸುವ ಗುರಿಯನ್ನು ಅಭಿಯಾನದ ಮೂಲಕ ಹೊಂದಲಾಗಿದೆ’ ಎಂದರು.</p>
<p><strong>ಮೈಸೂರು</strong>: ‘ನಶೆ ಮುಕ್ತ ಮೈಸೂರು ನಿರ್ಮಾಣಕ್ಕಾಗಿ ಒತ್ತಾಯಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಜ.12ರಂದು ಬೆಳಿಗ್ಗೆ 10ಕ್ಕೆ ಇಲ್ಲಿನ ಅಗ್ರಹಾರ ವೃತ್ತದಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ’ ಎಂದು ಕನ್ನಡಪರ ಹೋರಾಟಗಾರ ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದರು.</p><p>‘ಮಾದಕ ದ್ರವ್ಯಗಳು ಬೇಡ, ನಶೆ ಮುಕ್ತ ಮೈಸೂರು ಅಭಿಯಾನದ ಭಾಗವಾಗಿ ಧರಣಿ ನಡೆಸಲಾಗುತ್ತಿದೆ. ವಿವಿಧ ಸಂಘ–ಸಂಸ್ಥೆಗಳು ನಮ್ಮೊಂದಿಗೆ ಕೈಜೋಡಿಸಿವೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p><p>‘ಸರ್ಕಾರಗಳು ಮಾದಕ ವಸ್ತು ಮಾರಾಟಕ್ಕೆ ಸಂಪೂರ್ಣವಾಗಿ ಕಡಿವಾಣ ಹಾಕಬೇಕು ಎಂಬ ಹಕ್ಕೊತ್ತಾಯ ಮಂಡಿಸಲಾಗುವುದು. ವ್ಯಸನಮುಕ್ತ ಜೀವನ ನಡೆಸಲು ಯುವಜನರನ್ನು ಪ್ರೇರೇಪಿಸುವ ಗುರಿಯನ್ನು ಅಭಿಯಾನದ ಮೂಲಕ ಹೊಂದಲಾಗಿದೆ’ ಎಂದರು.</p>