<p><strong>ಹುಣಸೂರು:</strong> ‘ಸಹಕಾರ ಸಂಘಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನಾಮನಿರ್ದೇಶನಕ್ಕೆ ಶಾಸಕ ಜಿ.ಟಿ.ದೇವೇಗೌಡರು ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ’ ಎಂದು ದಲಿತ ಸಂಘರ್ಷ ಸಮಿತಿ ಮುಖಂಡ ರತ್ನಾಪುರಿ ಪುಟ್ಟಸ್ವಾಮಿ ಹೇಳಿದರು.</p>.<p>ನಗರದ ಸಂವಿಧಾನ ವೃತ್ತದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, ‘ಶಾಸಕರ ನಿಲುವಿನಿಂದ ಹಿಂದುಳಿದ ಸಮುದಾಯದವರಿಗೆ ಪ್ರಾತಿನಿತ್ಯ ಇಲ್ಲವಾಗುತ್ತದೆ’ ಎಂದರು.</p>.<p> ಮುಖಂಡರಾದ ರಾಮಕೃಷ್ಣ ಅತ್ತಿಕುಪ್ಪೆ, ಶಿವರಾಜ್ ಮುತ್ತುರಾಯನಹೊಸಹಳ್ಳಿ ಮಾತನಾಡಿ, ‘ಶೋಷಿತ ಸಮುದಾಯದವರು ಸಹಕಾರಿ ಕ್ಷೇತ್ರದಲ್ಲಿ ಪಾಲ್ಗೊಳ್ಳಲು ಅನುವಾಗುವಂತೆ ಸರ್ಕಾರ ತಿದ್ದುಪಡಿ ತರಲು ಮುಂದಾಗಿರುವುದು ಸ್ವಾಗತಾರ್ಹ’ ಎಂದರು.</p>.<p>ಕೃಷ್ಣ, ಸಿದ್ದೇಶ, ಪುಟ್ಟರಾಜು, ಚೆಲುವರಾಜು, ಜೆ.ಮಹದೇವ್,ಮುದಸ್ಸಿರ್, ಅಜೀಜ್, ಪ್ರಭಾಕರ್, ಮಹೇಶ್. ಕುಮಾರ್, ರಾಜು ಚಿಕ್ಕಹುಣಸೂರು, ರೇಣುಕ, ಮಹದೇವಮ್ಮ ಪಾಲ್ಗೊಂಡಿದ್ದರು.</p>.<div><blockquote>ಸಹಕಾರಿ ಕ್ಷೇತ್ರದಲ್ಲಿ ನಾಮನಿರ್ದೇಶನ ಕಾಯ್ದೆ ತಿದ್ದುಪಡಿ ತರುವುದಕ್ಕೆ ತಮ್ಮ ವಿರೋಧವಿಲ್ಲ ಎಂದು ಜಿ.ಟಿ.ದೇವೇಗೌಡರು ಸ್ಪಷ್ಟನೆ ನೀಡಿದ್ದಾರೆ. ನಾನೂ ಸದನದಲ್ಲಿ ಪ್ರಸ್ತಾಪಿಸಿ ಸ್ವಾಗತಿಸಿದ್ದೇನೆ.</blockquote><span class="attribution">ಜಿ.ಡಿ.ಹರೀಶ್ ಗೌಡ ಶಾಸಕರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ‘ಸಹಕಾರ ಸಂಘಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನಾಮನಿರ್ದೇಶನಕ್ಕೆ ಶಾಸಕ ಜಿ.ಟಿ.ದೇವೇಗೌಡರು ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ’ ಎಂದು ದಲಿತ ಸಂಘರ್ಷ ಸಮಿತಿ ಮುಖಂಡ ರತ್ನಾಪುರಿ ಪುಟ್ಟಸ್ವಾಮಿ ಹೇಳಿದರು.</p>.<p>ನಗರದ ಸಂವಿಧಾನ ವೃತ್ತದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, ‘ಶಾಸಕರ ನಿಲುವಿನಿಂದ ಹಿಂದುಳಿದ ಸಮುದಾಯದವರಿಗೆ ಪ್ರಾತಿನಿತ್ಯ ಇಲ್ಲವಾಗುತ್ತದೆ’ ಎಂದರು.</p>.<p> ಮುಖಂಡರಾದ ರಾಮಕೃಷ್ಣ ಅತ್ತಿಕುಪ್ಪೆ, ಶಿವರಾಜ್ ಮುತ್ತುರಾಯನಹೊಸಹಳ್ಳಿ ಮಾತನಾಡಿ, ‘ಶೋಷಿತ ಸಮುದಾಯದವರು ಸಹಕಾರಿ ಕ್ಷೇತ್ರದಲ್ಲಿ ಪಾಲ್ಗೊಳ್ಳಲು ಅನುವಾಗುವಂತೆ ಸರ್ಕಾರ ತಿದ್ದುಪಡಿ ತರಲು ಮುಂದಾಗಿರುವುದು ಸ್ವಾಗತಾರ್ಹ’ ಎಂದರು.</p>.<p>ಕೃಷ್ಣ, ಸಿದ್ದೇಶ, ಪುಟ್ಟರಾಜು, ಚೆಲುವರಾಜು, ಜೆ.ಮಹದೇವ್,ಮುದಸ್ಸಿರ್, ಅಜೀಜ್, ಪ್ರಭಾಕರ್, ಮಹೇಶ್. ಕುಮಾರ್, ರಾಜು ಚಿಕ್ಕಹುಣಸೂರು, ರೇಣುಕ, ಮಹದೇವಮ್ಮ ಪಾಲ್ಗೊಂಡಿದ್ದರು.</p>.<div><blockquote>ಸಹಕಾರಿ ಕ್ಷೇತ್ರದಲ್ಲಿ ನಾಮನಿರ್ದೇಶನ ಕಾಯ್ದೆ ತಿದ್ದುಪಡಿ ತರುವುದಕ್ಕೆ ತಮ್ಮ ವಿರೋಧವಿಲ್ಲ ಎಂದು ಜಿ.ಟಿ.ದೇವೇಗೌಡರು ಸ್ಪಷ್ಟನೆ ನೀಡಿದ್ದಾರೆ. ನಾನೂ ಸದನದಲ್ಲಿ ಪ್ರಸ್ತಾಪಿಸಿ ಸ್ವಾಗತಿಸಿದ್ದೇನೆ.</blockquote><span class="attribution">ಜಿ.ಡಿ.ಹರೀಶ್ ಗೌಡ ಶಾಸಕರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>