<p><strong>ಮೈಸೂರು</strong>:ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳು ಸಾಂಸ್ಕೃತಿಕ ನಗರಿಯತ್ತ ಪ್ರಯಾಣ ಬೆಳೆಸಿದವು.</p>.<p>ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ವೀರನಹೊಸಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಸೋಮವಾರ ಆಯೋಜಿಸಿದ್ದ ಗಜಪಯಣ ಕಾರ್ಯಕ್ರಮ ಸರಳವಾಗಿ ನಡೆಯಿತು..</p>.<p>ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ ಎಂಟು ಆನೆಗಳಿಗೆಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.ವಿವಿಧ ಶಿಬಿರಗಳಿಂದ ವೀರನಹೊಸಹಳ್ಳಿ ಗ್ರಾಮದಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಸಿಂಗರಿಸಲಾಗಿತ್ತು.</p>.<p>ಅಭಿಮನ್ಯು ಜೊತೆಗೆ ಅಶ್ವತ್ಥಾಮ, ಧನಂಜಯ, ವಿಕ್ರಮ, ಕಾವೇರಿ, ಚೈತ್ರಾ, ಲಕ್ಷ್ಮಿ ಮತ್ತು ಗೋಪಾಲಸ್ವಾಮಿ ಆನೆಗಳು ಈ ಬಾರಿ ಭಾಗಿಯಾಗಲಿವೆ.ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ ಸಿಂಹ, ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಸಿಇಒ ಎ.ಎಂ.ಯೋಗೀಶ್, ಎಸ್ ಪಿ ಆರ್.ಚೇತನ್, ಮೇಯರ್ ಸುನಂದಾ ಫಾಲನೇತ್ರ ಪಾಲ್ಗೊಂಡರು.</p>.<p><strong>ಸೆ.16ಕ್ಕೆ ಅರಮನೆಗೆ ಸ್ವಾಗತ</strong></p>.<p>ಕಾಡಿನಿಂದ ಬಂದ ಈ ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ತಂಗಲಿವೆ.ಗಜಪಡೆಯನ್ನು ಸೆ.16 ರಂದು ಬೆಳಿಗ್ಗೆ 8.36ಕ್ಕೆ ಅರಮನೆಗೆ ಸ್ವಾಗತಿಸಲಾಗುತ್ತದೆ.ಈ ಬಾರಿಯ ದಸರಾ ಅ.7 ರಿಂದ 15 ರ ವರೆಗೆ ನಡೆಯಲಿದೆ. ಕೋವಿಡ್ ಕಾರಣ ಸರಳವಾಗಿ ನಡೆಯಲಿದ್ದು, ಕಾರ್ಯಕ್ರಮಗಳು ಚಾಮುಂಡಿ ಬೆಟ್ಟ ಹಾಗೂ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>:ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳು ಸಾಂಸ್ಕೃತಿಕ ನಗರಿಯತ್ತ ಪ್ರಯಾಣ ಬೆಳೆಸಿದವು.</p>.<p>ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ವೀರನಹೊಸಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಸೋಮವಾರ ಆಯೋಜಿಸಿದ್ದ ಗಜಪಯಣ ಕಾರ್ಯಕ್ರಮ ಸರಳವಾಗಿ ನಡೆಯಿತು..</p>.<p>ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ ಎಂಟು ಆನೆಗಳಿಗೆಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.ವಿವಿಧ ಶಿಬಿರಗಳಿಂದ ವೀರನಹೊಸಹಳ್ಳಿ ಗ್ರಾಮದಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಸಿಂಗರಿಸಲಾಗಿತ್ತು.</p>.<p>ಅಭಿಮನ್ಯು ಜೊತೆಗೆ ಅಶ್ವತ್ಥಾಮ, ಧನಂಜಯ, ವಿಕ್ರಮ, ಕಾವೇರಿ, ಚೈತ್ರಾ, ಲಕ್ಷ್ಮಿ ಮತ್ತು ಗೋಪಾಲಸ್ವಾಮಿ ಆನೆಗಳು ಈ ಬಾರಿ ಭಾಗಿಯಾಗಲಿವೆ.ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ ಸಿಂಹ, ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಸಿಇಒ ಎ.ಎಂ.ಯೋಗೀಶ್, ಎಸ್ ಪಿ ಆರ್.ಚೇತನ್, ಮೇಯರ್ ಸುನಂದಾ ಫಾಲನೇತ್ರ ಪಾಲ್ಗೊಂಡರು.</p>.<p><strong>ಸೆ.16ಕ್ಕೆ ಅರಮನೆಗೆ ಸ್ವಾಗತ</strong></p>.<p>ಕಾಡಿನಿಂದ ಬಂದ ಈ ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ತಂಗಲಿವೆ.ಗಜಪಡೆಯನ್ನು ಸೆ.16 ರಂದು ಬೆಳಿಗ್ಗೆ 8.36ಕ್ಕೆ ಅರಮನೆಗೆ ಸ್ವಾಗತಿಸಲಾಗುತ್ತದೆ.ಈ ಬಾರಿಯ ದಸರಾ ಅ.7 ರಿಂದ 15 ರ ವರೆಗೆ ನಡೆಯಲಿದೆ. ಕೋವಿಡ್ ಕಾರಣ ಸರಳವಾಗಿ ನಡೆಯಲಿದ್ದು, ಕಾರ್ಯಕ್ರಮಗಳು ಚಾಮುಂಡಿ ಬೆಟ್ಟ ಹಾಗೂ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>