<p><strong>ಮೈಸೂರು:</strong> ‘ಕಳೆದೆರಡು ತಿಂಗಳಿಂದ ಇ–ಖಾತೆ ಮಾಡಲಾಗುತ್ತಿಲ್ಲ. ಅದರಿಂದ ಜನರಿಗೆ ತೊಂದರೆಯಾಗಿದೆ. ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಬಿಜೆಪಿ ಮುಖಂಡ ಮಾಜಿ ಮೇಯರ್ ಶಿವಕುಮಾರ್ ಹೇಳಿದರು. </p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ವ್ಯವಸ್ಥೆಯನ್ನು ಉನ್ನತೀಕರಿಸುವ ಬದಲು ರಾಜ್ಯ ಸರ್ಕಾರವು 20 ವರ್ಷ ಹಿಂದಕ್ಕೆ ಕೊಂಡೊಯ್ದಿದೆ. ಸಾಧಕ– ಬಾಧಕ ಪರಿಶೀಲನೆ ನಡೆಸದೇ, ತರಾತುರಿಯಲ್ಲಿ ಅನುಷ್ಠಾನಗೊಳಿಸಿದ್ದರಿಂದ ಜನರು ಪರದಾಡುತ್ತಿದ್ದಾರೆ. ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ ನಡೆಸಲಾಗುವುದು’ ಎಂದರು. </p>.<p>‘ಎಲ್ಲ ಆಸ್ತಿಗಳ ದತ್ತಾಂಶ ಸಂಗ್ರಹ ಸಮಪರ್ಕವಾಗಿ ನಡೆದಿಲ್ಲ. ಇದೀಗ ತಾಂತ್ರಿಕ ದೋಷ ಉಂಟಾಗಿರುವುದರಿಂದ ಆಸ್ತಿ ಮಾರಾಟ ಮತ್ತು ಖರೀದಿ ಆಗುತ್ತಿಲ್ಲ. ಆಸ್ತಿಗಾಗಿ ಕೋರ್ಟ್ ಮೆಟ್ಟಿಲೇರುವಂತಾಗಿದೆ. ಪಾಲಿಕೆಗೆ ₹ 200 ಕೋಟಿ ಆಸ್ತಿ ತೆರಿಗೆ ಬರುತ್ತಿತ್ತು. ಜನರು ತೆರಿಗೆ ಪಾವತಿಸಲು ಆಗುತ್ತಿಲ್ಲ’ ಎಂದು ಹೇಳಿದರು.</p>.<p>‘ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂರುತ್ತಾರೆ. ಅವರಿಗೆ ಇ– ಖಾತಾ ಅವ್ಯವಸ್ಥೆ ಸರಿಪಡಿಸಲು ಆಗುವುದಿಲ್ಲವೇ. ಪ್ರತಿಷ್ಠಿತ ಕಂಪನಿಗಳು ನೆರೆ ರಾಜ್ಯಗಳ ಪಾಲಾಗುತ್ತಿವೆ. ಉದ್ಯೋಗವಕಾಶ ಕೈ ತಪ್ಪುತ್ತಿದೆ’ ಎಂದರು. </p>.<p>ಮುಖಂಡರಾದ ಬಿ.ವಿ.ಮಂಜುನಾಥ್, ಸುಬ್ಬಯ್ಯ, ರಂಗಸ್ವಾಮಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕಳೆದೆರಡು ತಿಂಗಳಿಂದ ಇ–ಖಾತೆ ಮಾಡಲಾಗುತ್ತಿಲ್ಲ. ಅದರಿಂದ ಜನರಿಗೆ ತೊಂದರೆಯಾಗಿದೆ. ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಬಿಜೆಪಿ ಮುಖಂಡ ಮಾಜಿ ಮೇಯರ್ ಶಿವಕುಮಾರ್ ಹೇಳಿದರು. </p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ವ್ಯವಸ್ಥೆಯನ್ನು ಉನ್ನತೀಕರಿಸುವ ಬದಲು ರಾಜ್ಯ ಸರ್ಕಾರವು 20 ವರ್ಷ ಹಿಂದಕ್ಕೆ ಕೊಂಡೊಯ್ದಿದೆ. ಸಾಧಕ– ಬಾಧಕ ಪರಿಶೀಲನೆ ನಡೆಸದೇ, ತರಾತುರಿಯಲ್ಲಿ ಅನುಷ್ಠಾನಗೊಳಿಸಿದ್ದರಿಂದ ಜನರು ಪರದಾಡುತ್ತಿದ್ದಾರೆ. ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ ನಡೆಸಲಾಗುವುದು’ ಎಂದರು. </p>.<p>‘ಎಲ್ಲ ಆಸ್ತಿಗಳ ದತ್ತಾಂಶ ಸಂಗ್ರಹ ಸಮಪರ್ಕವಾಗಿ ನಡೆದಿಲ್ಲ. ಇದೀಗ ತಾಂತ್ರಿಕ ದೋಷ ಉಂಟಾಗಿರುವುದರಿಂದ ಆಸ್ತಿ ಮಾರಾಟ ಮತ್ತು ಖರೀದಿ ಆಗುತ್ತಿಲ್ಲ. ಆಸ್ತಿಗಾಗಿ ಕೋರ್ಟ್ ಮೆಟ್ಟಿಲೇರುವಂತಾಗಿದೆ. ಪಾಲಿಕೆಗೆ ₹ 200 ಕೋಟಿ ಆಸ್ತಿ ತೆರಿಗೆ ಬರುತ್ತಿತ್ತು. ಜನರು ತೆರಿಗೆ ಪಾವತಿಸಲು ಆಗುತ್ತಿಲ್ಲ’ ಎಂದು ಹೇಳಿದರು.</p>.<p>‘ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂರುತ್ತಾರೆ. ಅವರಿಗೆ ಇ– ಖಾತಾ ಅವ್ಯವಸ್ಥೆ ಸರಿಪಡಿಸಲು ಆಗುವುದಿಲ್ಲವೇ. ಪ್ರತಿಷ್ಠಿತ ಕಂಪನಿಗಳು ನೆರೆ ರಾಜ್ಯಗಳ ಪಾಲಾಗುತ್ತಿವೆ. ಉದ್ಯೋಗವಕಾಶ ಕೈ ತಪ್ಪುತ್ತಿದೆ’ ಎಂದರು. </p>.<p>ಮುಖಂಡರಾದ ಬಿ.ವಿ.ಮಂಜುನಾಥ್, ಸುಬ್ಬಯ್ಯ, ರಂಗಸ್ವಾಮಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>