<p><strong>ತಿ.ನರಸೀಪುರ:</strong> ಇಕೈವೈಸಿ ಮಾಡದ ತಾಲ್ಲೂಕಿನ ಎಲ್ಲಾ ಅಂತ್ಯೋದಯ ಅನ್ನ(ಎಎವೈ) ಹಾಗೂ ಆದ್ಯತಾ (ಬಿಪಿಎಲ್) ಪಡಿತರದಾರರಿಗೆ ಆಗಸ್ಟ್ 31 ಇಕೆವೈಸಿ ಮಾಡಲು ಕೊನೆಯ ದಿನವಾಗಿದ್ದು, ಕೂಡಲೇ ಮಾಡಿಸುವಂತೆ ತಾಲ್ಲೂಕು ತಹಶೀಲ್ದಾರ್ ಸೂಚಿಸಿದ್ದಾರೆ.</p><p>ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಸಂಗ್ರಹಣೆ ಮಾಡಲಾಗುತ್ತಿದ್ದು, ಇದುವರೆಗೆ ತಾಲ್ಲೂಕಿನ 82,002 ಪಡಿತರ ಚೀಟಿಗಳಲ್ಲಿ 2,60,334 ಸದಸ್ಯರ ಪೈಕಿ 2,51,486 ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಸಂಗ್ರಹಿಸಲಾಗಿದೆ. ಉಳಿಕೆ 8,848 ಸದಸ್ಯರು ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದು ಬಾಕಿ ಇದ್ದು, ಆಗಸ್ಟ್ 31, 2024 ಕೊನೆಯ ದಿನದ ಒಳಗೆ ಮಾಡಿಸುವಂತೆ ತಿಳಿಸಲಾಗಿದೆ.</p><p>ಬಾಕಿ ಇರುವ ಸದಸ್ಯರು ಕೂಡಲೇ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಕೊಂಡು ಇ-ಕೆವೈಸಿ ಧೃಡೀಕರಣ ಮಾಡುವಂತೆ ಸೂಚಿಸಲಾಗಿದೆ. ನಿಗದಿತ ದಿನಾಂಕದೊಳಗೆ ಮಾಡದಿದ್ದಲ್ಲಿ ಪಡಿತರ ಚೀಟಿಯಲ್ಲಿ ಅಂತಹ ಸದಸ್ಯರ ಹೆಸರನ್ನು ಕೈ ಬಿಡಲಾಗುವುದು ಎಂದು ತಹಶೀಲ್ದಾರ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿ.ನರಸೀಪುರ:</strong> ಇಕೈವೈಸಿ ಮಾಡದ ತಾಲ್ಲೂಕಿನ ಎಲ್ಲಾ ಅಂತ್ಯೋದಯ ಅನ್ನ(ಎಎವೈ) ಹಾಗೂ ಆದ್ಯತಾ (ಬಿಪಿಎಲ್) ಪಡಿತರದಾರರಿಗೆ ಆಗಸ್ಟ್ 31 ಇಕೆವೈಸಿ ಮಾಡಲು ಕೊನೆಯ ದಿನವಾಗಿದ್ದು, ಕೂಡಲೇ ಮಾಡಿಸುವಂತೆ ತಾಲ್ಲೂಕು ತಹಶೀಲ್ದಾರ್ ಸೂಚಿಸಿದ್ದಾರೆ.</p><p>ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಸಂಗ್ರಹಣೆ ಮಾಡಲಾಗುತ್ತಿದ್ದು, ಇದುವರೆಗೆ ತಾಲ್ಲೂಕಿನ 82,002 ಪಡಿತರ ಚೀಟಿಗಳಲ್ಲಿ 2,60,334 ಸದಸ್ಯರ ಪೈಕಿ 2,51,486 ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಸಂಗ್ರಹಿಸಲಾಗಿದೆ. ಉಳಿಕೆ 8,848 ಸದಸ್ಯರು ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದು ಬಾಕಿ ಇದ್ದು, ಆಗಸ್ಟ್ 31, 2024 ಕೊನೆಯ ದಿನದ ಒಳಗೆ ಮಾಡಿಸುವಂತೆ ತಿಳಿಸಲಾಗಿದೆ.</p><p>ಬಾಕಿ ಇರುವ ಸದಸ್ಯರು ಕೂಡಲೇ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಕೊಂಡು ಇ-ಕೆವೈಸಿ ಧೃಡೀಕರಣ ಮಾಡುವಂತೆ ಸೂಚಿಸಲಾಗಿದೆ. ನಿಗದಿತ ದಿನಾಂಕದೊಳಗೆ ಮಾಡದಿದ್ದಲ್ಲಿ ಪಡಿತರ ಚೀಟಿಯಲ್ಲಿ ಅಂತಹ ಸದಸ್ಯರ ಹೆಸರನ್ನು ಕೈ ಬಿಡಲಾಗುವುದು ಎಂದು ತಹಶೀಲ್ದಾರ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>