<p><strong>ಮೈಸೂರು</strong>: ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 50:50 ಅನುಪಾತದಲ್ಲಿ ಬದಲಿ ನಿವೇಶನಗಳ ಹಂಚಿಕೆಯಲ್ಲಿನ ಅಕ್ರಮ ಆರೋಪದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇ.ಡಿ)ವು ಇನ್ನಷ್ಟು ನಿವೇಶನಗಳ ಕುರಿತು ಮಾಹಿತಿ ಕೋರಿ ಮುಡಾ ಆಯುಕ್ತರಿಗೆ ಪತ್ರ ಬರೆದಿದೆ.</p>.<p>ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ.ಯ ಬೆಂಗಳೂರು ಕಚೇರಿಯ ಸಹಾಯಕ ನಿರ್ದೇಶಕ ವಿ. ಮುರಳಿಕಣ್ಣನ್ ಮೇ 9ರಂದು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.</p>.<p>‘ಮೈಸೂರಿನ ಬಸವನಹಳ್ಳಿ ಸರ್ವೆ ಸಂಖ್ಯೆ 116/2ರಲ್ಲಿ 4 ಎಕರೆ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದ 26 ವರ್ಷಗಳ ನಂತರವೂ ಭೂಮಿ ವಶಕ್ಕೆ ಪಡೆಯದ ಕಾರಣದಿಂದ ಹೈಕೋರ್ಟ್ 2018ರಲ್ಲಿ ಅಧಿಸೂಚನೆಯನ್ನು ರದ್ದುಪಡಿಸಿತ್ತು. ಆದಾಗ್ಯೂ 2023ರಲ್ಲಿ ಮತ್ತೆ ಅದೇ ಜಮೀನನ್ನು ಸ್ವಾಧೀನಕ್ಕೆ ಪಡೆದದ್ದು ಏಕೆ ಎಂಬುದರ ದಾಖಲೆ ನೀಡಿ’ ಎಂದು ಕೇಳಿದ್ದಾರೆ.</p>.<p>‘ಹೆಬ್ಬಾಳ ಸರ್ವೆ ಸಂಖ್ಯೆ 88/2ರಲ್ಲಿನ 2 ಎಕರೆ ಜಮೀನು, ದೇವನೂರು ಗ್ರಾಮದ ಸರ್ವೆ ಸಂಖ್ಯೆ 81/2ರಲ್ಲಿನ 2 ಎಕರೆ ಜಮೀನುಗಳಿಗೆ ಪರಿಹಾರ ವಿತರಣೆ ಹಾಗೂ ದಟ್ಟಗಳ್ಳಿ ಸರ್ವೆ ಸಂಖ್ಯೆ 168, 169/1, 176 ಹಾಗೂ 183/1ರಲ್ಲಿನ ಜಮೀನುಗಳಿಗೆ ಪರಿಹಾರವಾಗಿ 28 ನಿವೇಶನಗಳ ಹಂಚಿಕೆಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿ’ ಎಂದು ಅವರು ಪತ್ರದಲ್ಲಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 50:50 ಅನುಪಾತದಲ್ಲಿ ಬದಲಿ ನಿವೇಶನಗಳ ಹಂಚಿಕೆಯಲ್ಲಿನ ಅಕ್ರಮ ಆರೋಪದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇ.ಡಿ)ವು ಇನ್ನಷ್ಟು ನಿವೇಶನಗಳ ಕುರಿತು ಮಾಹಿತಿ ಕೋರಿ ಮುಡಾ ಆಯುಕ್ತರಿಗೆ ಪತ್ರ ಬರೆದಿದೆ.</p>.<p>ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ.ಯ ಬೆಂಗಳೂರು ಕಚೇರಿಯ ಸಹಾಯಕ ನಿರ್ದೇಶಕ ವಿ. ಮುರಳಿಕಣ್ಣನ್ ಮೇ 9ರಂದು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.</p>.<p>‘ಮೈಸೂರಿನ ಬಸವನಹಳ್ಳಿ ಸರ್ವೆ ಸಂಖ್ಯೆ 116/2ರಲ್ಲಿ 4 ಎಕರೆ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದ 26 ವರ್ಷಗಳ ನಂತರವೂ ಭೂಮಿ ವಶಕ್ಕೆ ಪಡೆಯದ ಕಾರಣದಿಂದ ಹೈಕೋರ್ಟ್ 2018ರಲ್ಲಿ ಅಧಿಸೂಚನೆಯನ್ನು ರದ್ದುಪಡಿಸಿತ್ತು. ಆದಾಗ್ಯೂ 2023ರಲ್ಲಿ ಮತ್ತೆ ಅದೇ ಜಮೀನನ್ನು ಸ್ವಾಧೀನಕ್ಕೆ ಪಡೆದದ್ದು ಏಕೆ ಎಂಬುದರ ದಾಖಲೆ ನೀಡಿ’ ಎಂದು ಕೇಳಿದ್ದಾರೆ.</p>.<p>‘ಹೆಬ್ಬಾಳ ಸರ್ವೆ ಸಂಖ್ಯೆ 88/2ರಲ್ಲಿನ 2 ಎಕರೆ ಜಮೀನು, ದೇವನೂರು ಗ್ರಾಮದ ಸರ್ವೆ ಸಂಖ್ಯೆ 81/2ರಲ್ಲಿನ 2 ಎಕರೆ ಜಮೀನುಗಳಿಗೆ ಪರಿಹಾರ ವಿತರಣೆ ಹಾಗೂ ದಟ್ಟಗಳ್ಳಿ ಸರ್ವೆ ಸಂಖ್ಯೆ 168, 169/1, 176 ಹಾಗೂ 183/1ರಲ್ಲಿನ ಜಮೀನುಗಳಿಗೆ ಪರಿಹಾರವಾಗಿ 28 ನಿವೇಶನಗಳ ಹಂಚಿಕೆಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿ’ ಎಂದು ಅವರು ಪತ್ರದಲ್ಲಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>