<p><strong>ಮೈಸೂರು:</strong> ‘ಮನುಷ್ಯನ ಬದುಕಿಗೆ ಪರಿಪೂರ್ಣತೆ ಬರುವುದು ಸರ್ವತೋಮುಖ ಅಭಿವೃದ್ಧಿಯಾದಾಗ ಮಾತ್ರ’ ಎಂದು ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಕೆ.ಅನಂತರಾಮು ಹೇಳಿದರು.</p>.<p>ಇಲ್ಲಿನ ಊಟಿ ರಸ್ತೆಯ ಜೆಎಸ್ಎಸ್ ಪಿಯು ಕಾಲೇಜಿನಲ್ಲಿ ಶನಿವಾರ 2025–26ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ವೇದಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯೆ ಸಂಪತ್ತು ಅಮೂಲ್ಯವಾದುದು. ಅದರೊಂದಿಗೆ ಮಾನವೀಯ ಗುಣಗಳೂ ಬೇಕು. ನಿರಹಂಕಾರ ಗುಣ, ವಿನಯಶೀಲತೆ, ದೈವಭಕ್ತಿ, ದೇಶಭಕ್ತಿ, ಗುರುಭಕ್ತಿ, ಸ್ನೇಹಶೀಲತೆ ಹಾಗೂ ಎಲ್ಲರನ್ನೂ ಗೌರವಿಸುವ ಗುಣವನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಕನ್ನಡ ಭಾಷೆ ಸಂರಕ್ಷಣೆ ವಿಷಯದಲ್ಲಿ ವಚನಕಾರರ ಪಾತ್ರ ದೊಡ್ಡದು. ಜನಸಾಮಾನ್ಯರಿಗೆ ಒಳ್ಳೆಯ ವಿಚಾರಗಳನ್ನು ಸರಳವಾದ ಭಾಷೆಯಲ್ಲಿ ತಿಳಿಸುವ ಜೊತೆಗೆ ಕನ್ನಡದ ಸಂರಕ್ಷಣೆಯನ್ನೂ ಮಾಡಿದರು. ನಮ್ಮ ಮಾತೃಭಾಷೆಯಾದ ಕನ್ನಡವನ್ನು ಉಳಿಸಿಕೊಳ್ಳುವ ಪ್ರೇಮ ನಮ್ಮೆಲ್ಲರಲ್ಲೂ ಇರಬೇಕು’ ಎಂದರು.</p>.<p>ಜೆಎಸ್ಎಸ್ ಕಾಲೇಜು ಸಮುಚ್ಚಯದ ಮುಖ್ಯಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ, ‘ಕಾಲೇಜುಗಳ ಪದವೀಧರರನ್ನು ತಯಾರಿಸುವ ಕಾರ್ಖಾನೆಯಾಗದೆ ಪರಿಪೂರ್ಣ ವ್ಯಕ್ತಿತ್ವ ಬೆಳೆಸುವ ಮಾನವ ಸಂಪನ್ಮೂಲ ಕೇಂದ್ರವಾಗಬೇಕು’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ, ಚಲನಚಿತ್ರ ನಟ ಗೋಪಾಲ್, ಅಥ್ಲೀಟ್ ಧನುಷ ಎಂ.ಆರ್. ಮಾತನಾಡಿದರು.</p>.<p>2024–25ನೇ ಸಾಲಿನಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಪ್ರಾಂಶುಪಾಲ ಎಸ್.ನಂಜುಂಡಸ್ವಾಮಿ, ಉಪನ್ಯಾಸಕರಾದ ಟಿ.ಗುರುಪಾದಸ್ವಾಮಿ, ಎಚ್.ಆರ್. ಗಾಯತ್ರಿ, ಕ್ರೀಡಾ ಚಟುವಟಿಕೆಗಳ ಸಂಚಾಲಕ ಟಿ.ಅರವಿಂದ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಮನುಷ್ಯನ ಬದುಕಿಗೆ ಪರಿಪೂರ್ಣತೆ ಬರುವುದು ಸರ್ವತೋಮುಖ ಅಭಿವೃದ್ಧಿಯಾದಾಗ ಮಾತ್ರ’ ಎಂದು ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಕೆ.ಅನಂತರಾಮು ಹೇಳಿದರು.</p>.<p>ಇಲ್ಲಿನ ಊಟಿ ರಸ್ತೆಯ ಜೆಎಸ್ಎಸ್ ಪಿಯು ಕಾಲೇಜಿನಲ್ಲಿ ಶನಿವಾರ 2025–26ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ವೇದಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯೆ ಸಂಪತ್ತು ಅಮೂಲ್ಯವಾದುದು. ಅದರೊಂದಿಗೆ ಮಾನವೀಯ ಗುಣಗಳೂ ಬೇಕು. ನಿರಹಂಕಾರ ಗುಣ, ವಿನಯಶೀಲತೆ, ದೈವಭಕ್ತಿ, ದೇಶಭಕ್ತಿ, ಗುರುಭಕ್ತಿ, ಸ್ನೇಹಶೀಲತೆ ಹಾಗೂ ಎಲ್ಲರನ್ನೂ ಗೌರವಿಸುವ ಗುಣವನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಕನ್ನಡ ಭಾಷೆ ಸಂರಕ್ಷಣೆ ವಿಷಯದಲ್ಲಿ ವಚನಕಾರರ ಪಾತ್ರ ದೊಡ್ಡದು. ಜನಸಾಮಾನ್ಯರಿಗೆ ಒಳ್ಳೆಯ ವಿಚಾರಗಳನ್ನು ಸರಳವಾದ ಭಾಷೆಯಲ್ಲಿ ತಿಳಿಸುವ ಜೊತೆಗೆ ಕನ್ನಡದ ಸಂರಕ್ಷಣೆಯನ್ನೂ ಮಾಡಿದರು. ನಮ್ಮ ಮಾತೃಭಾಷೆಯಾದ ಕನ್ನಡವನ್ನು ಉಳಿಸಿಕೊಳ್ಳುವ ಪ್ರೇಮ ನಮ್ಮೆಲ್ಲರಲ್ಲೂ ಇರಬೇಕು’ ಎಂದರು.</p>.<p>ಜೆಎಸ್ಎಸ್ ಕಾಲೇಜು ಸಮುಚ್ಚಯದ ಮುಖ್ಯಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ, ‘ಕಾಲೇಜುಗಳ ಪದವೀಧರರನ್ನು ತಯಾರಿಸುವ ಕಾರ್ಖಾನೆಯಾಗದೆ ಪರಿಪೂರ್ಣ ವ್ಯಕ್ತಿತ್ವ ಬೆಳೆಸುವ ಮಾನವ ಸಂಪನ್ಮೂಲ ಕೇಂದ್ರವಾಗಬೇಕು’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ, ಚಲನಚಿತ್ರ ನಟ ಗೋಪಾಲ್, ಅಥ್ಲೀಟ್ ಧನುಷ ಎಂ.ಆರ್. ಮಾತನಾಡಿದರು.</p>.<p>2024–25ನೇ ಸಾಲಿನಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಪ್ರಾಂಶುಪಾಲ ಎಸ್.ನಂಜುಂಡಸ್ವಾಮಿ, ಉಪನ್ಯಾಸಕರಾದ ಟಿ.ಗುರುಪಾದಸ್ವಾಮಿ, ಎಚ್.ಆರ್. ಗಾಯತ್ರಿ, ಕ್ರೀಡಾ ಚಟುವಟಿಕೆಗಳ ಸಂಚಾಲಕ ಟಿ.ಅರವಿಂದ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>