ಹುಣಸೂರು: ‘ಮಕ್ಕಳ ಪ್ರತಿಭೆ ಗುರುತಿಸುವಲ್ಲಿ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಪ್ರಮುಖ ಪಾತ್ರ ವಹಿಸುತ್ತಿದೆ’ ಎಂದು ಶಿಕ್ಷಣ ಇಲಾಖೆ ಅಧಿಕಾರಿ ಸಂತೋಷ್ ಕುಮಾರ್ ಹೇಳಿದರು.
ತಾಲ್ಲೂಕಿನ ಹಗರನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಗ್ರಾಮೀಣ ಪ್ರದೇಶದಲ್ಲಿ ಜಾನಪದ ಸೊಗಡಿನ ಕಲೆಯನ್ನು ಮೈಗೂಡಿಸಿಕೊಂಡ ಪ್ರತಿಭೆಗಳಿದ್ದು, ಅವರನ್ನು ಶಿಕ್ಷಕರು ಗುರುತಿಸಬೇಕು. ಇತ್ತೀಚಿನ ದಿನದಲ್ಲಿ ಜಾನಪದ ನೃತ್ಯ, ಲಾವಣಿ ಕಣ್ಮರೆಯಾಗುತ್ತಿವೆ. ರೈತರು ಬೇಸಾಯದ ಸಮಯದಲ್ಲಿ ಹೊಲ ಗದ್ದೆಗಳಲ್ಲಿ ಹಾಡುವ ಪದಗಳು ಅಲಿಖಿತವಾಗಿದ್ದು, ಅವುಗಳನ್ನು ದಾಖಲಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು’ ಎಂದರು.
ಕಾರ್ಯಕ್ರಮದಲ್ಲಿ ಮದೂರು ಗ್ರಾ.ಪಂ. ಅಧ್ಯಕ್ಷೆ ಸಿದ್ದಮ್ಮ,, ಉಪಾಧ್ಯಕ್ಷ ವೆಂಕಟಾಚಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಿಕ್ಕೇಗೌಡ, ಮುಖ್ಯಶಿಕ್ಷಕ ನಾಗೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.