ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯು ಬಾಂಡ್ ಮೂಲಕ ಸುಮಾರು ₹8,252 ಕೋಟಿ ಪಡೆದಿದೆ. ಇಲ್ಲಿ ಅಧಿಕಾರ ದುರುಪಯೋಗವಾಗಿದೆ. ಹಲವು ಉದ್ಯಮಿಗಳು ತನಿಖಾ ಸಂಸ್ಥೆಗಳಿಗೆ ಹೆದರಿ, ಉದ್ಯಮದ ಲಾಭಕ್ಕಾಗಿ ಹಣ ನೀಡಿರುವುದು ಕಂಡುಬಂದಿದ್ದು, ನರೇಂದ್ರ ಮೋದಿ ಸರ್ಕಾರದ ಭ್ರಷ್ಟಾಚಾರವನ್ನು ಸೂಚಿಸುತ್ತದೆ. ಅಲ್ಲದೇ, ರಾಜಕೀಯ ದ್ವೇಷ ಸಾಧನೆಯಲ್ಲೂ ಕೇಂದ್ರ ನಿರತವಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಖಂಡನೀಯ. ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕು’ ಎಂದು ಆಗ್ರಹಿಸಿದರು.