<p><strong>ತಿ.ನರಸೀಪುರ:</strong> ತಾಲ್ಲೂಕಿನ ಮೂಗೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಗದೀಶಮೂರ್ತಿ, ಉಪಾಧ್ಯಕ್ಷರಾಗಿ ಎಂ.ಬಿ.ಪರಶಿವಮೂರ್ತಿ ಶನಿವಾರ ಅವಿರೋಧವಾಗಿ ಆಯ್ಕೆಯಾದರು.</p>.<p>ಗ್ರಾಮದ ಸಹಕಾರ ಸಂಘದ ಸಭಾಂಗಣದಲ್ಲಿ ನೂತನ ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಜಗದೀಶಮೂರ್ತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಂ.ಬಿ.ಪರಶಿವಮೂರ್ತಿ ಅವರಿಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು. </p>.<p>ಚುನಾವಣಾ ಸಭೆಯಲ್ಲಿ ಸಂಘದ 12 ಮಂದಿ ನಿರ್ದೇಶಕರು ಭಾಗವಹಿಸಿದ್ದರು. ಚುನಾವಣಾಧಿಕಾರಿಯಾಗಿ ಹೆಚ್.ಎನ್.ಸುಮಾ ಕಾರ್ಯನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸಂಘದ ನಿರ್ದೇಶಕರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.</p>.<p>ಚುನಾವಣೆ ಬಳಿಕ ಅಧ್ಯಕ್ಷ ಜಗದೀಶಮೂರ್ತಿ ಮಾತನಾಡಿ, ಅವಿರೋಧವಾಗಿ ಅಧ್ಯಕ್ಷರಾಗಲು ಸಹಕಾರ ನೀಡಿದ ನಿರ್ದೇಶಕರು ಹಾಗೂ ಸದಸ್ಯರೆಲ್ಲರ ವಿಶ್ವಾಸದೊಡನೆ ಸಂಘದ ಅಭಿವೃದ್ಧಿಗೆ ದುಡಿಯುವುದಾಗಿ ತಿಳಿಸಿದರು.</p>.<p>ಸಂಘದ ನಿರ್ದೇಶಕರಾದ ಎಂ.ಎನ್.ನಿಜಗುಣ, ಎಂ.ಬಿ.ಮಹೇಂದ್ರಕುಮಾರ್, ರಾಮೇಶನಾಯಕ, ಎಂ.ಕೆ.ಶರತ್ ಕುಮಾರ, ಎಂ.ಶಿವಸ್ವಾಮಿ, ಕಮಲಮ್ಮ, ರಾಧಾ, ತವಸಾರಯ್ಯ, ಎಂ.ಶಿವಮೂರ್ತಿ, ಎಸ್.ಸತೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಡಿ.ಲೋಕೇಶ್, ಸದಸ್ಯ ಪುಟ್ಟಮಾದಯ್ಯ, ಮುಖಂಡರಾದ ಚೇತನ್, ಗುರುಮಲ್ಲಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿ.ನರಸೀಪುರ:</strong> ತಾಲ್ಲೂಕಿನ ಮೂಗೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಗದೀಶಮೂರ್ತಿ, ಉಪಾಧ್ಯಕ್ಷರಾಗಿ ಎಂ.ಬಿ.ಪರಶಿವಮೂರ್ತಿ ಶನಿವಾರ ಅವಿರೋಧವಾಗಿ ಆಯ್ಕೆಯಾದರು.</p>.<p>ಗ್ರಾಮದ ಸಹಕಾರ ಸಂಘದ ಸಭಾಂಗಣದಲ್ಲಿ ನೂತನ ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಜಗದೀಶಮೂರ್ತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಂ.ಬಿ.ಪರಶಿವಮೂರ್ತಿ ಅವರಿಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು. </p>.<p>ಚುನಾವಣಾ ಸಭೆಯಲ್ಲಿ ಸಂಘದ 12 ಮಂದಿ ನಿರ್ದೇಶಕರು ಭಾಗವಹಿಸಿದ್ದರು. ಚುನಾವಣಾಧಿಕಾರಿಯಾಗಿ ಹೆಚ್.ಎನ್.ಸುಮಾ ಕಾರ್ಯನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸಂಘದ ನಿರ್ದೇಶಕರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.</p>.<p>ಚುನಾವಣೆ ಬಳಿಕ ಅಧ್ಯಕ್ಷ ಜಗದೀಶಮೂರ್ತಿ ಮಾತನಾಡಿ, ಅವಿರೋಧವಾಗಿ ಅಧ್ಯಕ್ಷರಾಗಲು ಸಹಕಾರ ನೀಡಿದ ನಿರ್ದೇಶಕರು ಹಾಗೂ ಸದಸ್ಯರೆಲ್ಲರ ವಿಶ್ವಾಸದೊಡನೆ ಸಂಘದ ಅಭಿವೃದ್ಧಿಗೆ ದುಡಿಯುವುದಾಗಿ ತಿಳಿಸಿದರು.</p>.<p>ಸಂಘದ ನಿರ್ದೇಶಕರಾದ ಎಂ.ಎನ್.ನಿಜಗುಣ, ಎಂ.ಬಿ.ಮಹೇಂದ್ರಕುಮಾರ್, ರಾಮೇಶನಾಯಕ, ಎಂ.ಕೆ.ಶರತ್ ಕುಮಾರ, ಎಂ.ಶಿವಸ್ವಾಮಿ, ಕಮಲಮ್ಮ, ರಾಧಾ, ತವಸಾರಯ್ಯ, ಎಂ.ಶಿವಮೂರ್ತಿ, ಎಸ್.ಸತೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಡಿ.ಲೋಕೇಶ್, ಸದಸ್ಯ ಪುಟ್ಟಮಾದಯ್ಯ, ಮುಖಂಡರಾದ ಚೇತನ್, ಗುರುಮಲ್ಲಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>