<p>ಮೈಸೂರು: ನಗರದ ಚಾಮುಂಡಿ ವಿಹಾರ ಬಡಾವಣೆಯ ನಿವಾಸಿ ಆರ್.ವರ್ಣಿಕಾ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿದ್ದಾರೆ.</p>.<p>ಇವರು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಆರ್.ರಘು ಕೌಟಿಲ್ಯ ಅವರ ಪುತ್ರಿ.</p>.<p>ಹೈಕೋರ್ಟ್ನ ಸಿವಿಲ್ ನ್ಯಾಯಾಧೀಶರ ನೇಮಕಾತಿ ಪರೀಕ್ಷೆಯಲ್ಲಿ ವರ್ಣಿಕಾ ತೇರ್ಗಡೆಯಾಗಿದ್ದು, 2023ರ ನವೆಂಬರ್ನಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. ಶುಕ್ರವಾರ ಹೈಕೋರ್ಟ್ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದೆ.</p>.<p>ಇಲ್ಲಿನ ಕೌಟಿಲ್ಯ ವಿದ್ಯಾಲಯದಲ್ಲಿ ಶಿಕ್ಷಣ ಪಡೆದಿದ್ದ ಅವರು, ಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನು 2018ರಲ್ಲಿ 4ನೇ ರ್ಯಾಂಕ್ನೊಂದಿಗೆ ತೇರ್ಗಡೆಯಾಗಿದ್ದರು. ಕಳೆದ ಮೂರು ವರ್ಷದಿಂದ ವಕೀಲರಾಗಿ ಬೆಂಗಳೂರಿನ ಸಿವಿಲ್ ನ್ಯಾಯಾಲಯದಲ್ಲಿ ಅಭ್ಯಾಸ ನಡೆಸಿದ್ದರು.</p>.<p>‘ಅಮ್ಮನ ಆಸೆ ಈಡೇರಿಸಿದ ತೃಪ್ತಿ ಇದೆ. ಅವರೀಗ ಇರಬೇಕಿತ್ತು. ಜನರ ಸೇವೆ ಮಾಡಲು ಒಳ್ಳೆಯ ಅವಕಾಶ ಸಿಕ್ಕಿದೆ. ಬಡವರು, ನ್ಯಾಯ ಕೇಳಿ ಬಂದವರಿಗೆ ನ್ಯಾಯ ಸಿಗಬೇಕು. ಇದಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವೆ’ ಎಂದು ವರ್ಣಿಕಾ ‘ಪ್ರಜಾವಾಣಿ’ ಜೊತೆ ಸಂತಸ ಹಂಚಿಕೊಂಡರು.</p>.<p>‘ನ್ಯಾಯಾಧೀಶರ ನೇಮಕಾತಿಯಲ್ಲಿ 3 ಹಂತದ ಪರೀಕ್ಷೆಗಳಿರುತ್ತವೆ. ಪ್ರಾಯೋಗಿಕ ಜ್ಞಾನದೊಂದಿಗೆ ಪ್ರಚಲಿತ ವಿದ್ಯಾಮಾನಗಳ ಅರಿವೂ ಇರಬೇಕು. 5 ಸಾವಿರ ಸ್ಪರ್ಧಾರ್ಥಿಗಳು ಪರೀಕ್ಷೆ ಬರೆಯುತ್ತಾರೆ. ಶ್ರಮ ಹಾಗೂ ಅಭ್ಯಾಸವಿದ್ದರೆ ತೇರ್ಗಡೆ ಆಗಬಹುದು’ ಎಂದು ತಿಳಿಸಿದರು. </p>.<p>‘ಚಿಕ್ಕಂದಿನಿಂದಲೂ ಚೆನ್ನಾಗಿ ಓದುತ್ತಿದ್ದಳು. ನ್ಯಾಯಾಂಗ ಕ್ಷೇತ್ರದಲ್ಲಿ ಸೇವೆ ಮಾಡಬೇಕೆಂಬುದು ಅವಳ ಆಸೆಯಾಗಿತ್ತು. ಶ್ರದ್ಧೆ, ಪರಿಶ್ರಮ ಅವಳನ್ನು ಗುರಿ ಮುಟ್ಟಿಸಿದೆ. ತಂದೆಯಾಗಿ ಹೆಮ್ಮೆ ಎನಿಸುತ್ತದೆ’ ಎಂದು ಆರ್.ರಘು ಕೌಟಿಲ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ನಗರದ ಚಾಮುಂಡಿ ವಿಹಾರ ಬಡಾವಣೆಯ ನಿವಾಸಿ ಆರ್.ವರ್ಣಿಕಾ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿದ್ದಾರೆ.</p>.<p>ಇವರು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಆರ್.ರಘು ಕೌಟಿಲ್ಯ ಅವರ ಪುತ್ರಿ.</p>.<p>ಹೈಕೋರ್ಟ್ನ ಸಿವಿಲ್ ನ್ಯಾಯಾಧೀಶರ ನೇಮಕಾತಿ ಪರೀಕ್ಷೆಯಲ್ಲಿ ವರ್ಣಿಕಾ ತೇರ್ಗಡೆಯಾಗಿದ್ದು, 2023ರ ನವೆಂಬರ್ನಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. ಶುಕ್ರವಾರ ಹೈಕೋರ್ಟ್ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದೆ.</p>.<p>ಇಲ್ಲಿನ ಕೌಟಿಲ್ಯ ವಿದ್ಯಾಲಯದಲ್ಲಿ ಶಿಕ್ಷಣ ಪಡೆದಿದ್ದ ಅವರು, ಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನು 2018ರಲ್ಲಿ 4ನೇ ರ್ಯಾಂಕ್ನೊಂದಿಗೆ ತೇರ್ಗಡೆಯಾಗಿದ್ದರು. ಕಳೆದ ಮೂರು ವರ್ಷದಿಂದ ವಕೀಲರಾಗಿ ಬೆಂಗಳೂರಿನ ಸಿವಿಲ್ ನ್ಯಾಯಾಲಯದಲ್ಲಿ ಅಭ್ಯಾಸ ನಡೆಸಿದ್ದರು.</p>.<p>‘ಅಮ್ಮನ ಆಸೆ ಈಡೇರಿಸಿದ ತೃಪ್ತಿ ಇದೆ. ಅವರೀಗ ಇರಬೇಕಿತ್ತು. ಜನರ ಸೇವೆ ಮಾಡಲು ಒಳ್ಳೆಯ ಅವಕಾಶ ಸಿಕ್ಕಿದೆ. ಬಡವರು, ನ್ಯಾಯ ಕೇಳಿ ಬಂದವರಿಗೆ ನ್ಯಾಯ ಸಿಗಬೇಕು. ಇದಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವೆ’ ಎಂದು ವರ್ಣಿಕಾ ‘ಪ್ರಜಾವಾಣಿ’ ಜೊತೆ ಸಂತಸ ಹಂಚಿಕೊಂಡರು.</p>.<p>‘ನ್ಯಾಯಾಧೀಶರ ನೇಮಕಾತಿಯಲ್ಲಿ 3 ಹಂತದ ಪರೀಕ್ಷೆಗಳಿರುತ್ತವೆ. ಪ್ರಾಯೋಗಿಕ ಜ್ಞಾನದೊಂದಿಗೆ ಪ್ರಚಲಿತ ವಿದ್ಯಾಮಾನಗಳ ಅರಿವೂ ಇರಬೇಕು. 5 ಸಾವಿರ ಸ್ಪರ್ಧಾರ್ಥಿಗಳು ಪರೀಕ್ಷೆ ಬರೆಯುತ್ತಾರೆ. ಶ್ರಮ ಹಾಗೂ ಅಭ್ಯಾಸವಿದ್ದರೆ ತೇರ್ಗಡೆ ಆಗಬಹುದು’ ಎಂದು ತಿಳಿಸಿದರು. </p>.<p>‘ಚಿಕ್ಕಂದಿನಿಂದಲೂ ಚೆನ್ನಾಗಿ ಓದುತ್ತಿದ್ದಳು. ನ್ಯಾಯಾಂಗ ಕ್ಷೇತ್ರದಲ್ಲಿ ಸೇವೆ ಮಾಡಬೇಕೆಂಬುದು ಅವಳ ಆಸೆಯಾಗಿತ್ತು. ಶ್ರದ್ಧೆ, ಪರಿಶ್ರಮ ಅವಳನ್ನು ಗುರಿ ಮುಟ್ಟಿಸಿದೆ. ತಂದೆಯಾಗಿ ಹೆಮ್ಮೆ ಎನಿಸುತ್ತದೆ’ ಎಂದು ಆರ್.ರಘು ಕೌಟಿಲ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>