<p><strong>ಮೈಸೂರು</strong>: ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಆನೆಗಳು ವಾಸ್ತವ್ಯ ಹೂಡಿರುವ ಸ್ಥಳಕ್ಕೆ ಗುರುವಾರ ರಾತ್ರಿ ಅನುಮತಿ ಪಡೆಯದೆ ತೆರಳಿ ಆನೆಗಳೊಂದಿಗೆ ಅಪಾಯಕಾರಿಯಾಗಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಕೃತಿ ವಿರುದ್ಧ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿದೆ.</p>.<p>‘ಅನುಮತಿ ಪಡೆಯದೆ ಆನೆಗಳ ಬಳಿ ತೆರಳಿರುವ ಬಗ್ಗೆ ಮೂರು ದಿನಗಳೊಳಗೆ ಹೇಳಿಕೆ ನೀಡಬೇಕು ಎಂದು ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವುದಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆಯ ಗಂಭೀರತೆ ಆಧರಿಸಿ ₹ 50 ಸಾವಿರದವರೆಗೆ ದಂಡ ಹಾಕುವ ಅಧಿಕಾರವಿದೆ’ ಎಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಐ.ಬಿ. ಪ್ರಭುಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ರಾತ್ರಿ 7ಕ್ಕೆ ಆನೆಗಳ ಬಳಿ ತೆರಳಿರುವುದು ಗೊತ್ತಾಗಿದೆ. ಆಕೆ ಕೋಡಿ ಸೋಮನಾಥೇಶ್ವರ ದೇವಾಲಯಕ್ಕೆ ತೆರಳುವುದಾಗಿ ತಿಳಿಸಿದ್ದು, ಅಲ್ಲಿ ಆನೆಗಳೊಂದಿಗೆ ಫೋಟೊ ತೆಗೆಸಿಕೊಂಡಿದ್ದಾರೆ’ ಎಂದು ವಿವರಿಸಿದರು.</p>.<p><strong>ವ್ಯಕ್ತಿ ಆತ್ಮಹತ್ಯೆ</strong></p>.<p><strong>ಮೈಸೂರು</strong>: ಇಲ್ಲಿನ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ಖಾಸಗಿ ಲಾಡ್ಜ್ನಲ್ಲಿ ಈಚೆಗೆ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಇಲವಾಲ ತಾಲ್ಲೂಕಿನ ಹುಯಿಲಾಳು ಗ್ರಾಮದ ನಿವಾಸಿ ಶಂಕರ್ (38) ಆತ್ಮಹತ್ಯೆ ಮಾಡಿಕೊಂಡವರು.</p>.<p>ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.</p>.<p>‘ಸಾಲಕ್ಕಾಗಿ ಕಾರನ್ನು ಗಿರವಿ ಇಟ್ಟಿದ್ದರು. ಸಾಲವನ್ನು ಸಕಾಲದಲ್ಲಿ ತೀರಿಸದೇ ಇದ್ದುದ್ದರಿಂದ, ಸಾಲ ನೀಡಿದ್ದ ಸ್ನೇಹಿತ ಅಭಿ ಸೇರಿದಂತೆ ಇತರರು ಗಲಾಟೆ ಮಾಡಿದ್ದರು. ಇದರಿಂದ ಮನನೊಂದ ಅವರು, ಖಾಸಗಿ ಲಾಡ್ಜ್ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಶಂಕರ್ ಪತ್ನಿ ದೂರು ನೀಡಿದ್ದಾರೆ.</p>.<p>ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಆನೆಗಳು ವಾಸ್ತವ್ಯ ಹೂಡಿರುವ ಸ್ಥಳಕ್ಕೆ ಗುರುವಾರ ರಾತ್ರಿ ಅನುಮತಿ ಪಡೆಯದೆ ತೆರಳಿ ಆನೆಗಳೊಂದಿಗೆ ಅಪಾಯಕಾರಿಯಾಗಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಕೃತಿ ವಿರುದ್ಧ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿದೆ.</p>.<p>‘ಅನುಮತಿ ಪಡೆಯದೆ ಆನೆಗಳ ಬಳಿ ತೆರಳಿರುವ ಬಗ್ಗೆ ಮೂರು ದಿನಗಳೊಳಗೆ ಹೇಳಿಕೆ ನೀಡಬೇಕು ಎಂದು ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವುದಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆಯ ಗಂಭೀರತೆ ಆಧರಿಸಿ ₹ 50 ಸಾವಿರದವರೆಗೆ ದಂಡ ಹಾಕುವ ಅಧಿಕಾರವಿದೆ’ ಎಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಐ.ಬಿ. ಪ್ರಭುಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ರಾತ್ರಿ 7ಕ್ಕೆ ಆನೆಗಳ ಬಳಿ ತೆರಳಿರುವುದು ಗೊತ್ತಾಗಿದೆ. ಆಕೆ ಕೋಡಿ ಸೋಮನಾಥೇಶ್ವರ ದೇವಾಲಯಕ್ಕೆ ತೆರಳುವುದಾಗಿ ತಿಳಿಸಿದ್ದು, ಅಲ್ಲಿ ಆನೆಗಳೊಂದಿಗೆ ಫೋಟೊ ತೆಗೆಸಿಕೊಂಡಿದ್ದಾರೆ’ ಎಂದು ವಿವರಿಸಿದರು.</p>.<p><strong>ವ್ಯಕ್ತಿ ಆತ್ಮಹತ್ಯೆ</strong></p>.<p><strong>ಮೈಸೂರು</strong>: ಇಲ್ಲಿನ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ಖಾಸಗಿ ಲಾಡ್ಜ್ನಲ್ಲಿ ಈಚೆಗೆ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಇಲವಾಲ ತಾಲ್ಲೂಕಿನ ಹುಯಿಲಾಳು ಗ್ರಾಮದ ನಿವಾಸಿ ಶಂಕರ್ (38) ಆತ್ಮಹತ್ಯೆ ಮಾಡಿಕೊಂಡವರು.</p>.<p>ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.</p>.<p>‘ಸಾಲಕ್ಕಾಗಿ ಕಾರನ್ನು ಗಿರವಿ ಇಟ್ಟಿದ್ದರು. ಸಾಲವನ್ನು ಸಕಾಲದಲ್ಲಿ ತೀರಿಸದೇ ಇದ್ದುದ್ದರಿಂದ, ಸಾಲ ನೀಡಿದ್ದ ಸ್ನೇಹಿತ ಅಭಿ ಸೇರಿದಂತೆ ಇತರರು ಗಲಾಟೆ ಮಾಡಿದ್ದರು. ಇದರಿಂದ ಮನನೊಂದ ಅವರು, ಖಾಸಗಿ ಲಾಡ್ಜ್ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಶಂಕರ್ ಪತ್ನಿ ದೂರು ನೀಡಿದ್ದಾರೆ.</p>.<p>ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>