<p><strong>ಹಂಪಾಪುರ:</strong> ಸಮೀಪದ ಕೆಲ ಗ್ರಾಮಗಳಲ್ಲಿ ಒಂಟಿ ಸಲಗವೊಂದು ಕಾಡಿನಿಂದ ನಾಡಿಗೆ ಬಂದಿದ್ದು ರೈತರ ಫಸಲನ್ನು ಹಾಳು ಮಾಡಿರುವುದು ಅರಣ್ಯ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದೆ.</p>.<p>ಶುಕ್ರವಾರ ಬೆಳಿಗ್ಗೆ ಚುಂಚರಾಯನಹುಂಡಿ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡ ಕಾಡಾನೆಯು ಮಧ್ಯಾಹ್ನದ ವೇಳೆಗೆ ಸಮೀಪದ ಕುರುಚಲು ಕಾಡುಳ್ಳ ಮಹೇಶ್ವರ ಬೆಟ್ಟದತ್ತ ತೆರಳಿದೆ. ಶುಕ್ರವಾರ ಚಿರತೆಯ ಕಾರ್ಯಾಚರಣೆ ಇದ್ದುದ್ದರಿಂದ ಆನೆ ಕಾಡಿಗಟ್ಟುವ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಆನೆಯ ಚಲನವಲನಗಳನ್ನು ಮಾತ್ರ ಗಮನಿಸಲಾಗುತ್ತಿತ್ತು.</p>.<p>ಶನಿವಾರ ಬೆಳಿಗ್ಗೆ ಬೆಟ್ಟದಬೀಡು ಗ್ರಾಮದಲ್ಲಿ ಆನೆ ಕಾಣಿಸಿಕೊಂಡಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಸಂಜೆ 5 ಗಂಟೆ ವರಗೆ ಸ್ಥಳದಲ್ಲೇ ಬೀಡು ಬಿಟ್ಟಿದ್ದರು. ನಂತರ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಆರಂಭಿಸಿದ್ದು, ಆನೆ ಬೆಟ್ಟದಬೀಡು ಗ್ರಾಮದಿಂದ ಮೈಸೂರು ತಾಲ್ಲೂಕಿನ ಕಲ್ಲಹಳ್ಳಿ ಕೆರೆಯತ್ತ ತಲುಪಿದೆ. ಇನ್ನೂ ಆನೆ ಕಾಡಿಗಟ್ಟುವ ಕಾರ್ಯಾಚರಣೆ ಮುಂದುವರಿದಿದೆ ಎಂದು ಸಾಮಾಜಿಕ ವಲಯ ಅರಣ್ಯಾಧಿಕಾರಿ ಮಧು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಸ್ಥಳದಲ್ಲಿ ಎಸಿಎಫ್ ಮರಮೇಶ್ವರ್, ನಂಜನಗೂಡು ಆರ್ಎಫ್ಒ ಲೋಕೇಶ್ ಮೂರ್ತಿ, ಸರಗೂರು ಆರ್ಎಫ್ಒ ಮೋಸಿಂ ಭಾಷ ಸೇರಿದಂತೆ 60ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.</p>.<p>ಕಳೆದ ಒಂದು ವಾರದ ಹಿಂದೆ ಕಾಡಿನಿಂದ ನಾಡಿಗೆ ಬಂದ ಎರಡು ಆನೆಗಳು ಮಾದಾಪುರ ಸಮೀಪ ಕೂಲಿ ಕಾರ್ಮಿಕ ಹನುಮಂತರಾಯ ಎಂಬುವವರನ್ನು ತುಳಿದು ಸಾಯಿಸಿದ್ದವು. ನಂತರ ದಸರಾ ಆನೆಗಳ ಮೂಲಕ ಕಾರ್ಯಾಚರಣೆ ಮಾಡಿ ಬಂಡೀಪುರ ಅರಣ್ಯಕ್ಕೆ<br />ಓಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಂಪಾಪುರ:</strong> ಸಮೀಪದ ಕೆಲ ಗ್ರಾಮಗಳಲ್ಲಿ ಒಂಟಿ ಸಲಗವೊಂದು ಕಾಡಿನಿಂದ ನಾಡಿಗೆ ಬಂದಿದ್ದು ರೈತರ ಫಸಲನ್ನು ಹಾಳು ಮಾಡಿರುವುದು ಅರಣ್ಯ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದೆ.</p>.<p>ಶುಕ್ರವಾರ ಬೆಳಿಗ್ಗೆ ಚುಂಚರಾಯನಹುಂಡಿ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡ ಕಾಡಾನೆಯು ಮಧ್ಯಾಹ್ನದ ವೇಳೆಗೆ ಸಮೀಪದ ಕುರುಚಲು ಕಾಡುಳ್ಳ ಮಹೇಶ್ವರ ಬೆಟ್ಟದತ್ತ ತೆರಳಿದೆ. ಶುಕ್ರವಾರ ಚಿರತೆಯ ಕಾರ್ಯಾಚರಣೆ ಇದ್ದುದ್ದರಿಂದ ಆನೆ ಕಾಡಿಗಟ್ಟುವ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಆನೆಯ ಚಲನವಲನಗಳನ್ನು ಮಾತ್ರ ಗಮನಿಸಲಾಗುತ್ತಿತ್ತು.</p>.<p>ಶನಿವಾರ ಬೆಳಿಗ್ಗೆ ಬೆಟ್ಟದಬೀಡು ಗ್ರಾಮದಲ್ಲಿ ಆನೆ ಕಾಣಿಸಿಕೊಂಡಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಸಂಜೆ 5 ಗಂಟೆ ವರಗೆ ಸ್ಥಳದಲ್ಲೇ ಬೀಡು ಬಿಟ್ಟಿದ್ದರು. ನಂತರ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಆರಂಭಿಸಿದ್ದು, ಆನೆ ಬೆಟ್ಟದಬೀಡು ಗ್ರಾಮದಿಂದ ಮೈಸೂರು ತಾಲ್ಲೂಕಿನ ಕಲ್ಲಹಳ್ಳಿ ಕೆರೆಯತ್ತ ತಲುಪಿದೆ. ಇನ್ನೂ ಆನೆ ಕಾಡಿಗಟ್ಟುವ ಕಾರ್ಯಾಚರಣೆ ಮುಂದುವರಿದಿದೆ ಎಂದು ಸಾಮಾಜಿಕ ವಲಯ ಅರಣ್ಯಾಧಿಕಾರಿ ಮಧು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಸ್ಥಳದಲ್ಲಿ ಎಸಿಎಫ್ ಮರಮೇಶ್ವರ್, ನಂಜನಗೂಡು ಆರ್ಎಫ್ಒ ಲೋಕೇಶ್ ಮೂರ್ತಿ, ಸರಗೂರು ಆರ್ಎಫ್ಒ ಮೋಸಿಂ ಭಾಷ ಸೇರಿದಂತೆ 60ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.</p>.<p>ಕಳೆದ ಒಂದು ವಾರದ ಹಿಂದೆ ಕಾಡಿನಿಂದ ನಾಡಿಗೆ ಬಂದ ಎರಡು ಆನೆಗಳು ಮಾದಾಪುರ ಸಮೀಪ ಕೂಲಿ ಕಾರ್ಮಿಕ ಹನುಮಂತರಾಯ ಎಂಬುವವರನ್ನು ತುಳಿದು ಸಾಯಿಸಿದ್ದವು. ನಂತರ ದಸರಾ ಆನೆಗಳ ಮೂಲಕ ಕಾರ್ಯಾಚರಣೆ ಮಾಡಿ ಬಂಡೀಪುರ ಅರಣ್ಯಕ್ಕೆ<br />ಓಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>