<p><strong>ನಂಜನಗೂಡು</strong> : ಅಪ್ಪಟ ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ ಮನ್ನಣೆ, ಪ್ರೋತ್ಸಾಹಗಳ ಅಗತ್ಯವಿದೆ ಎಂದು ಬಿಜೆಪಿ ಮುಖಂಡ ಬಿ.ಹರ್ಷವರ್ಧನ್ ಹೇಳಿದರು.</p>.<p>ತಾಲ್ಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ಭಾನುವಾರ ವಿಸ್ಮಯ ಕ್ರೀಡಾ ಬಳಗ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಇಂದಿನ ವಿದ್ಯಾರ್ಥಿಗಳು ಕ್ರಿಕೆಟ್ ಆಟಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ, ಇದರಿಂದಾಗಿ ನಮ್ಮ ದೇಸಿ ಕ್ರೀಡೆಗಳು ನಶಿಸುತ್ತಿವೆ. ಅತಿಯಾದ ಮೊಬೈಲ್ ಫೋನ್ ಬಳಕೆಯಿಂದಾಗಿ ಯುವಕರಲ್ಲಿ ಬೊಜ್ಜಿನ ಖಾಯಿಲೆಗಳು ಹೆಚ್ಚುತ್ತಿವೆ. ಕಬಡ್ಡಿ ಆಟ ರಂಜನೆಯ ಜೊತೆಗೆ ದೇಹಕ್ಕೆ ಉತ್ತಮ ವ್ಯಾಯಾಮ ನೀಡುವ ಕ್ರೀಡೆಯಾಗಿದೆ ಎಂದರು.</p>.<p>ಹೆಮ್ಮರಗಾಲ ಗ್ರಾಮದ ಅಭಿವೃದ್ಧಿಗಾಗಿ ಬಿಜೆಪಿ ಆಡಳಿತದ ಅವದಿಯಲ್ಲಿ ₹2.5 ಕೋಟಿ ಅನುದಾನ ನೀಡಿ ಗ್ರಾಮವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗಿತ್ತು, ಯುವಕರು ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ, ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಹೇಳಿದರು.</p>.<p>ಮುಖಂಡರಾದ ಹೆಮ್ಮರಗಾಲ ಸೋಮಣ್ಣ, ಚಿಕ್ಕರಂಗನಾಯ್ಕ, ಶಿವಣ್ಣ, ವೆಂಕಟೇಶ್, ನಾಗರತ್ನ ಪುಟ್ಟರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong> : ಅಪ್ಪಟ ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ ಮನ್ನಣೆ, ಪ್ರೋತ್ಸಾಹಗಳ ಅಗತ್ಯವಿದೆ ಎಂದು ಬಿಜೆಪಿ ಮುಖಂಡ ಬಿ.ಹರ್ಷವರ್ಧನ್ ಹೇಳಿದರು.</p>.<p>ತಾಲ್ಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ಭಾನುವಾರ ವಿಸ್ಮಯ ಕ್ರೀಡಾ ಬಳಗ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಇಂದಿನ ವಿದ್ಯಾರ್ಥಿಗಳು ಕ್ರಿಕೆಟ್ ಆಟಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ, ಇದರಿಂದಾಗಿ ನಮ್ಮ ದೇಸಿ ಕ್ರೀಡೆಗಳು ನಶಿಸುತ್ತಿವೆ. ಅತಿಯಾದ ಮೊಬೈಲ್ ಫೋನ್ ಬಳಕೆಯಿಂದಾಗಿ ಯುವಕರಲ್ಲಿ ಬೊಜ್ಜಿನ ಖಾಯಿಲೆಗಳು ಹೆಚ್ಚುತ್ತಿವೆ. ಕಬಡ್ಡಿ ಆಟ ರಂಜನೆಯ ಜೊತೆಗೆ ದೇಹಕ್ಕೆ ಉತ್ತಮ ವ್ಯಾಯಾಮ ನೀಡುವ ಕ್ರೀಡೆಯಾಗಿದೆ ಎಂದರು.</p>.<p>ಹೆಮ್ಮರಗಾಲ ಗ್ರಾಮದ ಅಭಿವೃದ್ಧಿಗಾಗಿ ಬಿಜೆಪಿ ಆಡಳಿತದ ಅವದಿಯಲ್ಲಿ ₹2.5 ಕೋಟಿ ಅನುದಾನ ನೀಡಿ ಗ್ರಾಮವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗಿತ್ತು, ಯುವಕರು ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ, ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಹೇಳಿದರು.</p>.<p>ಮುಖಂಡರಾದ ಹೆಮ್ಮರಗಾಲ ಸೋಮಣ್ಣ, ಚಿಕ್ಕರಂಗನಾಯ್ಕ, ಶಿವಣ್ಣ, ವೆಂಕಟೇಶ್, ನಾಗರತ್ನ ಪುಟ್ಟರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>