<p><strong>ಮೈಸೂರು: </strong>‘ನವೋದ್ಯಮ ಸ್ಥಾಪನೆಗೆ ಪೂರಕ ವಾತಾವರಣ ದೇಶದಲ್ಲಿ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು ಉದ್ಯಮ ಸ್ಥಾಪಿಸಿ ಉದ್ಯೋಗ ಸೃಷ್ಟಿಗೆ ಮುಂದಾಗಬೇಕು’ ಎಂದು ಎಂಎಸ್ಎಂಇ ಅಭಿವೃದ್ಧಿ ಸಂಸ್ಥೆ ಉಪನಿರ್ದೇಶಕ ಆರ್.ಗೋಪಿನಾಥರಾವ್ ಹೇಳಿದರು.</p>.<p>ಎನ್ಐಇ ಕಾಲೇಜಿನ ಎನ್ಐಇ ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ಅಧ್ಯಯನ ವಿಭಾಗವು ‘ಕಿರು, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ (ಎಂಎಸ್ಎಂಇ) ಅಭಿವೃದ್ಧಿಯಲ್ಲಿ ಆಟೊಮೇಷನ್ ತಂತ್ರಜ್ಞಾನ ಹಾಗೂ ಅದರ ಪ್ರಸ್ತುತ ಬೆಳವಣಿಗೆಗಳು’ ಕುರಿತು ಆಯೋಜಿಸಿದ್ದ ಕಾರ್ಯಾಗಾರಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಎಂಎಸ್ಎಂಇ ಕ್ಷೇತ್ರವು ದೇಶದ 6.5 ಕೋಟಿ ಜನರಿಗೆ ಉದ್ಯೋಗ ನೀಡಿದೆ. ಸೇವಾ ವಲಯದ ನಂತರ ಅತಿ ಹೆಚ್ಚು ತೆರಿಗೆ ಈ ಕ್ಷೇತ್ರದಿಂದಲೇ ಸಂಗ್ರಹವಾಗುತ್ತಿದೆ. ಡಿಜಿಟಲ್ ಇಂಡಿಯಾ, ಮೇಕ್ ಇನ್ ಇಂಡಿಯಾ ಯೋಜನೆಗಳು ಉದ್ಯಮದ ವಿಸ್ತರಣೆಯನ್ನು ಮಾಡಿವೆ’</p>.<p>‘ಆರ್ಥಿಕತೆ ದ್ವಿಗುಣಸಲು ಕೇಂದ್ರವು ಎಂಎಸ್ಎಂಇ ಕ್ಷೇತ್ರವನ್ನು ಬಲಗೊಳಿಸುತ್ತಿದೆ. ಅದಕ್ಕಾಗಿ 17ಕ್ಕೂ ಹೆಚ್ಚು ಯೋಜನೆಗಳನ್ನು ಜಾರಿಗೊಳಿಸಿದೆ. ಡಿಜಿಟಲ್ ತಂತ್ರಜ್ಞಾನವು ಉದ್ದಿಮೆಗಳ ವ್ಯವಹಾರ ಸುಗಮಗೊಳಿಸಿದೆ’ ಎಂದರು.</p>.<p>‘ಶಿಕ್ಷಣ ಕ್ಷೇತ್ರ ಹಾಗೂ ಉದ್ಯಮಗಳ ನಡುವೆ ಕೊಡುಕೊಳ್ಳುವಿಕೆ ಇದ್ದರೆ ಮಾತ್ರ ಸುಧಾರಣೆ ಸಾಧ್ಯ. ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ನಡೆಯುವ ಸಂಶೋಧನೆಗಳು ಉದ್ಯಮಗಳ ಬೆಳವಣಿಗೆಗೆ ಸಹಕರಿಸುತ್ತವೆ’ ಎಂದು ಅಭಿಪ್ರಾಯಪಟ್ಟರು. </p>.<p>ಜನಟಿಕ್ಸ್ ಇಂಡಿಯಾ ಲಿಮಿಟೆಡ್ನ ಉಪ ವ್ಯವಸ್ಥಾಪಕ ಸುಬ್ರಹ್ಮಣ್ಯ ಭಟ್ ಮಾತನಾಡಿ, ‘ಮೂರು ದಶಕದ ಹಿಂದೆ ಆಟೊಮೇಶನ್ ತಂತ್ರಜ್ಞಾನ ಇರಲಿಲ್ಲ. ಕಳೆದ 15 ವರ್ಷಗಳಿಂದ ಈ ಕ್ಷೇತ್ರ ಬೆಳವಣಿಗೆ ಸಾಧಿಸಿದೆ. ಭಾರತವು ಉತ್ಪಾದನಾ ಕ್ಷೇತ್ರದಲ್ಲಿ ಇನ್ನೂ ಪಾರಮ್ಯ ಸಾಧಿಸಿಲ್ಲ. ಹೂಡಿಕೆ ಹಾಗೂ ಸಂಶೋಧನೆಗಳ ಅಭಾವ ಅದಕ್ಕೆ ಕಾರಣ’ ಎಂದು ವಿಶ್ಲೇಷಿಸಿದರು.</p>.<p>‘ತರಗತಿಯಲ್ಲಿ ನಡೆಯುವ ಪಾಠಗಳಿಗೂ ಕೈಗಾರಿಕೆಗಳಲ್ಲಿ ಆಗಿರುವ ಬದಲಾವಣೆಗಳಿಗೂ ಸಂಬಂಧವೇ ಇಲ್ಲವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕಾರ್ಯಾಗಾರದ ಸಂಯೋಜಕ ಡಾ.ಕೆ.ಆರ್.ಪ್ರಕಾಶ್, ‘ರೊಬಾಟಿಕ್ ತಂತ್ರಜ್ಞಾನಕ್ಕೆ ಉಜ್ವಲ ಭವಿಷ್ಯವಿದೆ. ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಹಾಗೂ ಕಂಪ್ಯೂಟರ್ ವಿಜ್ಞಾನದ ಅರಿವು ಬೇಕಾಗುತ್ತದೆ’ ಎಂದರು.</p>.<p>ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ.ಎಚ್.ಆರ್.ಶಿವಕುಮಾರ್, ಉಪ ಪ್ರಾಂಶುಪಾಲ ಡಾ.ಎಂ.ಎಸ್.ಗಣೇಶ್ ಪ್ರಸಾದ್, ಡಾ.ಶ್ರೀನಾಥ್ ಆರ್. ಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ನವೋದ್ಯಮ ಸ್ಥಾಪನೆಗೆ ಪೂರಕ ವಾತಾವರಣ ದೇಶದಲ್ಲಿ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು ಉದ್ಯಮ ಸ್ಥಾಪಿಸಿ ಉದ್ಯೋಗ ಸೃಷ್ಟಿಗೆ ಮುಂದಾಗಬೇಕು’ ಎಂದು ಎಂಎಸ್ಎಂಇ ಅಭಿವೃದ್ಧಿ ಸಂಸ್ಥೆ ಉಪನಿರ್ದೇಶಕ ಆರ್.ಗೋಪಿನಾಥರಾವ್ ಹೇಳಿದರು.</p>.<p>ಎನ್ಐಇ ಕಾಲೇಜಿನ ಎನ್ಐಇ ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ಅಧ್ಯಯನ ವಿಭಾಗವು ‘ಕಿರು, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ (ಎಂಎಸ್ಎಂಇ) ಅಭಿವೃದ್ಧಿಯಲ್ಲಿ ಆಟೊಮೇಷನ್ ತಂತ್ರಜ್ಞಾನ ಹಾಗೂ ಅದರ ಪ್ರಸ್ತುತ ಬೆಳವಣಿಗೆಗಳು’ ಕುರಿತು ಆಯೋಜಿಸಿದ್ದ ಕಾರ್ಯಾಗಾರಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಎಂಎಸ್ಎಂಇ ಕ್ಷೇತ್ರವು ದೇಶದ 6.5 ಕೋಟಿ ಜನರಿಗೆ ಉದ್ಯೋಗ ನೀಡಿದೆ. ಸೇವಾ ವಲಯದ ನಂತರ ಅತಿ ಹೆಚ್ಚು ತೆರಿಗೆ ಈ ಕ್ಷೇತ್ರದಿಂದಲೇ ಸಂಗ್ರಹವಾಗುತ್ತಿದೆ. ಡಿಜಿಟಲ್ ಇಂಡಿಯಾ, ಮೇಕ್ ಇನ್ ಇಂಡಿಯಾ ಯೋಜನೆಗಳು ಉದ್ಯಮದ ವಿಸ್ತರಣೆಯನ್ನು ಮಾಡಿವೆ’</p>.<p>‘ಆರ್ಥಿಕತೆ ದ್ವಿಗುಣಸಲು ಕೇಂದ್ರವು ಎಂಎಸ್ಎಂಇ ಕ್ಷೇತ್ರವನ್ನು ಬಲಗೊಳಿಸುತ್ತಿದೆ. ಅದಕ್ಕಾಗಿ 17ಕ್ಕೂ ಹೆಚ್ಚು ಯೋಜನೆಗಳನ್ನು ಜಾರಿಗೊಳಿಸಿದೆ. ಡಿಜಿಟಲ್ ತಂತ್ರಜ್ಞಾನವು ಉದ್ದಿಮೆಗಳ ವ್ಯವಹಾರ ಸುಗಮಗೊಳಿಸಿದೆ’ ಎಂದರು.</p>.<p>‘ಶಿಕ್ಷಣ ಕ್ಷೇತ್ರ ಹಾಗೂ ಉದ್ಯಮಗಳ ನಡುವೆ ಕೊಡುಕೊಳ್ಳುವಿಕೆ ಇದ್ದರೆ ಮಾತ್ರ ಸುಧಾರಣೆ ಸಾಧ್ಯ. ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ನಡೆಯುವ ಸಂಶೋಧನೆಗಳು ಉದ್ಯಮಗಳ ಬೆಳವಣಿಗೆಗೆ ಸಹಕರಿಸುತ್ತವೆ’ ಎಂದು ಅಭಿಪ್ರಾಯಪಟ್ಟರು. </p>.<p>ಜನಟಿಕ್ಸ್ ಇಂಡಿಯಾ ಲಿಮಿಟೆಡ್ನ ಉಪ ವ್ಯವಸ್ಥಾಪಕ ಸುಬ್ರಹ್ಮಣ್ಯ ಭಟ್ ಮಾತನಾಡಿ, ‘ಮೂರು ದಶಕದ ಹಿಂದೆ ಆಟೊಮೇಶನ್ ತಂತ್ರಜ್ಞಾನ ಇರಲಿಲ್ಲ. ಕಳೆದ 15 ವರ್ಷಗಳಿಂದ ಈ ಕ್ಷೇತ್ರ ಬೆಳವಣಿಗೆ ಸಾಧಿಸಿದೆ. ಭಾರತವು ಉತ್ಪಾದನಾ ಕ್ಷೇತ್ರದಲ್ಲಿ ಇನ್ನೂ ಪಾರಮ್ಯ ಸಾಧಿಸಿಲ್ಲ. ಹೂಡಿಕೆ ಹಾಗೂ ಸಂಶೋಧನೆಗಳ ಅಭಾವ ಅದಕ್ಕೆ ಕಾರಣ’ ಎಂದು ವಿಶ್ಲೇಷಿಸಿದರು.</p>.<p>‘ತರಗತಿಯಲ್ಲಿ ನಡೆಯುವ ಪಾಠಗಳಿಗೂ ಕೈಗಾರಿಕೆಗಳಲ್ಲಿ ಆಗಿರುವ ಬದಲಾವಣೆಗಳಿಗೂ ಸಂಬಂಧವೇ ಇಲ್ಲವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕಾರ್ಯಾಗಾರದ ಸಂಯೋಜಕ ಡಾ.ಕೆ.ಆರ್.ಪ್ರಕಾಶ್, ‘ರೊಬಾಟಿಕ್ ತಂತ್ರಜ್ಞಾನಕ್ಕೆ ಉಜ್ವಲ ಭವಿಷ್ಯವಿದೆ. ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಹಾಗೂ ಕಂಪ್ಯೂಟರ್ ವಿಜ್ಞಾನದ ಅರಿವು ಬೇಕಾಗುತ್ತದೆ’ ಎಂದರು.</p>.<p>ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ.ಎಚ್.ಆರ್.ಶಿವಕುಮಾರ್, ಉಪ ಪ್ರಾಂಶುಪಾಲ ಡಾ.ಎಂ.ಎಸ್.ಗಣೇಶ್ ಪ್ರಸಾದ್, ಡಾ.ಶ್ರೀನಾಥ್ ಆರ್. ಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>