<p><strong>ಮೈಸೂರು:</strong> ‘ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಸಲ್ಲದು’ ಎಂದು ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಪಿ.ಅನುಷಾ ಹೇಳಿದರು.</p><p>ಇಲ್ಲಿನ ಸರಸ್ವತಿಪುರಂ ಜೆಎಸ್ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ರಸಾಯನವಿಜ್ಞಾನ ವಿಭಾಗದಿಂದ ಶುಕ್ರವಾರ ಹಮ್ಮಿಕೊಂಡಿದ್ದ ‘ಪರಿಸರ ವಿಜ್ಞಾನದಲ್ಲಿ ಸುಸ್ಥಿರ ಅಭಿವೃದ್ಧಿ’ ವಿಷಯದ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಪರಿಸರ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದ್ದು, ನಮ್ಮ ಜೀವನಶೈಲಿಯಲ್ಲಿ ಗುರುತರ ಪಾತ್ರ ವಹಿಸುತ್ತದೆ. ಹೀಗಾಗಿ, ನಿಸರ್ಗವನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಆಲೋಚಿಸಿದಾಗ ಸುಸ್ಥಿರ ಅಭಿವೃದ್ಧಿ ಸಾಧ್ಯ’ ಎಂದರು.</p><p>ಆಶಯ ಭಾಷಣ ಮಾಡಿದ ನಿವೃತ್ತ ಪ್ರಾಧ್ಯಾಪಕ ಎ.ಜಿ. ದೇವಿಪ್ರಸಾದ್, ‘ನೈಸರ್ಗಿಕ ಸಂಪತ್ತನ್ನು ವಿವೇಕಪೂರ್ವಕವಾಗಿ ಬಳಸಿಕೊಳ್ಳಬೇಕು. ಪ್ರಕೃತಿ ಮಾನವ ಕುಲಕ್ಕೆ ಅಪಾರ ಕೊಡುಗೆ ನೀಡಿದೆ. ಸಂಪನ್ಮೂಲಗಳು ನಾಶಗೊಳ್ಳದಂತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂಬುದನ್ನು ಮರೆಯಬಾರದು’ ಎಂದು ತಿಳಿಸಿದರು.</p><p>ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಮೊರಬದ ಮಲ್ಲಿಕಾರ್ಜುನ, ‘ಪರಿಸರ ಸಂರಕ್ಷಿಸದಿದ್ದರೆ ಮನುಷ್ಯ ಕುಲ ಕಂಟಕ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p><p>ಪ್ರಾಂಶುಪಾಲ ರೇಚಣ್ಣ, ರಸಾಯನವಿಜ್ಞಾನ ವಿಭಾಗದ ಮುಖ್ಯಸ್ಥೆ ಡಿ.ಎಂ. ಲೋಕೇಶ್ವರಿ ಉಪಸ್ಥಿತರಿದ್ದರು.</p><p>ದಿಶಾ ಡಿ. ರಾವ್ ಮತ್ತು ಅನಘಾ ಪ್ರಾರ್ಥಿಸಿದರು. ವೈ.ಆರ್. ನಿರೀಕ್ಷಾ ಸ್ವಾಗತಿಸಿದರು. ಎನ್.ಎಸ್. ಸುಶ್ಮಿತಾ ವಂದಿಸಿದರು. ಡಿ.ವೈ. ತೃಪ್ತಿ ನಿರೂಪಿಸಿದರು.</p><p>ನಂತರ ನಡೆದ ಮೂರು ಗೋಷ್ಠಿಗಳಲ್ಲಿ ಸಹಾಯಕ ಪ್ರಾಧ್ಯಾಪಕಿ ರೂಪಾಂಜಲಿ ಎಸ್., ಸಹ ಪ್ರಾಧ್ಯಾಪಕಿ ಲತಾಮಣಿ ಆರ್. ಹಾಗೂ ಸಹಾಯಕ ಪ್ರಾಧ್ಯಾಪಕ ವಾದಿರಾಜ್ ಕೆ.ಟಿ. ವಿಷಯ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಸಲ್ಲದು’ ಎಂದು ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಪಿ.ಅನುಷಾ ಹೇಳಿದರು.</p><p>ಇಲ್ಲಿನ ಸರಸ್ವತಿಪುರಂ ಜೆಎಸ್ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ರಸಾಯನವಿಜ್ಞಾನ ವಿಭಾಗದಿಂದ ಶುಕ್ರವಾರ ಹಮ್ಮಿಕೊಂಡಿದ್ದ ‘ಪರಿಸರ ವಿಜ್ಞಾನದಲ್ಲಿ ಸುಸ್ಥಿರ ಅಭಿವೃದ್ಧಿ’ ವಿಷಯದ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಪರಿಸರ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದ್ದು, ನಮ್ಮ ಜೀವನಶೈಲಿಯಲ್ಲಿ ಗುರುತರ ಪಾತ್ರ ವಹಿಸುತ್ತದೆ. ಹೀಗಾಗಿ, ನಿಸರ್ಗವನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಆಲೋಚಿಸಿದಾಗ ಸುಸ್ಥಿರ ಅಭಿವೃದ್ಧಿ ಸಾಧ್ಯ’ ಎಂದರು.</p><p>ಆಶಯ ಭಾಷಣ ಮಾಡಿದ ನಿವೃತ್ತ ಪ್ರಾಧ್ಯಾಪಕ ಎ.ಜಿ. ದೇವಿಪ್ರಸಾದ್, ‘ನೈಸರ್ಗಿಕ ಸಂಪತ್ತನ್ನು ವಿವೇಕಪೂರ್ವಕವಾಗಿ ಬಳಸಿಕೊಳ್ಳಬೇಕು. ಪ್ರಕೃತಿ ಮಾನವ ಕುಲಕ್ಕೆ ಅಪಾರ ಕೊಡುಗೆ ನೀಡಿದೆ. ಸಂಪನ್ಮೂಲಗಳು ನಾಶಗೊಳ್ಳದಂತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂಬುದನ್ನು ಮರೆಯಬಾರದು’ ಎಂದು ತಿಳಿಸಿದರು.</p><p>ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಮೊರಬದ ಮಲ್ಲಿಕಾರ್ಜುನ, ‘ಪರಿಸರ ಸಂರಕ್ಷಿಸದಿದ್ದರೆ ಮನುಷ್ಯ ಕುಲ ಕಂಟಕ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p><p>ಪ್ರಾಂಶುಪಾಲ ರೇಚಣ್ಣ, ರಸಾಯನವಿಜ್ಞಾನ ವಿಭಾಗದ ಮುಖ್ಯಸ್ಥೆ ಡಿ.ಎಂ. ಲೋಕೇಶ್ವರಿ ಉಪಸ್ಥಿತರಿದ್ದರು.</p><p>ದಿಶಾ ಡಿ. ರಾವ್ ಮತ್ತು ಅನಘಾ ಪ್ರಾರ್ಥಿಸಿದರು. ವೈ.ಆರ್. ನಿರೀಕ್ಷಾ ಸ್ವಾಗತಿಸಿದರು. ಎನ್.ಎಸ್. ಸುಶ್ಮಿತಾ ವಂದಿಸಿದರು. ಡಿ.ವೈ. ತೃಪ್ತಿ ನಿರೂಪಿಸಿದರು.</p><p>ನಂತರ ನಡೆದ ಮೂರು ಗೋಷ್ಠಿಗಳಲ್ಲಿ ಸಹಾಯಕ ಪ್ರಾಧ್ಯಾಪಕಿ ರೂಪಾಂಜಲಿ ಎಸ್., ಸಹ ಪ್ರಾಧ್ಯಾಪಕಿ ಲತಾಮಣಿ ಆರ್. ಹಾಗೂ ಸಹಾಯಕ ಪ್ರಾಧ್ಯಾಪಕ ವಾದಿರಾಜ್ ಕೆ.ಟಿ. ವಿಷಯ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>