<p><strong>ಜಯಪುರ: </strong>ಮೈಸೂರು ತಾಲ್ಲೂಕಿನ ಶ್ರೀರಾಂಪುರ ಗ್ರಾಮದ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ. ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗ ಭೀತಿ ಕಾಡುತ್ತಿದೆ.</p>.<p>ಪರಸಯ್ಯನಹುಂಡಿ ಹೊರ ವರ್ತುಲ ರಸ್ತೆ ಬದಿಯಲ್ಲೂ ಕಸದ ರಾಶಿ ಬಿದ್ದು, ಗಬ್ಬು ನಾರುತ್ತಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಬಸ್ ನಿಲ್ದಾಣ ಹತ್ತಿರದ ಮುಖ್ಯರಸ್ತೆಯಲ್ಲಿ ಕೊಳಚೆ ನೀರು ಸಂಗ್ರಹವಾಗಿ ವಾಸನೆ ಬೀರುತ್ತಿದೆ. ಇದರಿಂದ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.</p>.<p>ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು<br />ಪರದಾಡುವಂತಾಗಿದೆ.</p>.<p>‘ಹೊರ ವರ್ತುಲ ರಸ್ತೆಯ ವೃತ್ತದಲ್ಲಿರುವ ನಂದಿನಿ ಪಾರ್ಲರ್ ಪಕ್ಕದಲ್ಲಿ ಡಕ್ ನಿರ್ಮಿಸಲು ಗುಂಡಿ ತೆಗೆದು ವರ್ಷವಾಗಿದೆ. ಕಾಮಗಾರಿ ಅರ್ಧಕ್ಕೆ ನಿಂತಿದೆ. ಶೀಘ್ರ ಕಾಮಗಾರಿ ಪುನರಾರಂಭಿಸಿ ಸಮಸ್ಯೆ ಬಗೆಹರಿಸಬೇಕು’ ಎಂದು ಗ್ರಾಮದ ಕೆಂಪಣ್ಣ ಒತ್ತಾಯಿಸಿದರು.</p>.<p>‘ಕೆಲ ಬೀದಿಬದಿ ವ್ಯಾಪಾರಿಗಳು ಮತ್ತು ಮಾಂಸದ ಅಂಗಡಿಯವರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬೀಸಾಡುತ್ತಿದ್ದಾರೆ. ಮಾಂಸದ ತ್ಯಾಜ್ಯದಿಂದ ಬೀದಿನಾಯಿಗಳ ಕಾಟ ಹೆಚ್ಚಾಗಿದ್ದು, ಜನರ ಮೇಲೆಯೇ ದಾಳಿ ಮಾಡುತ್ತಿವೆ. ದಯಮಾಡಿ ರಸ್ತೆ ಬದಿಯಲ್ಲಿ ತ್ಯಾಜ್ಯ ಸುರಿಯದೇ ಗ್ರಾಮದ ಹೊರ ವಲಯದಲ್ಲಿ ಹಾಕಬೇಕು’ ಎಂದು ಅವರು<br />ಆಗ್ರಹಿಸಿದರು.</p>.<p>‘ಶ್ರೀರಾಂಪುರ ಗ್ರಾಮದ ವ್ಯಾಪ್ತಿಯಲ್ಲಿ ಅನೈರ್ಮಲ್ಯ ಮತ್ತು ಹದಗೆಟ್ಟ ರಸ್ತೆಗಳ ಬಗ್ಗೆ ಗಮನಕ್ಕೆ ಬಂದಿದ್ದು, ಸ್ವಚ್ಛತೆ ಕಾಪಾಡಲು ₹2 ಲಕ್ಷ ಅನುದಾನ ಮೀಸಲಿಡಲಾಗಿದೆ. ಈ ಸಂಬಂಧ ಪಿಡಿಒ ಜೊತೆ ಚರ್ಚಿಸಲಾಗುವುದು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣಕುಮಾರ್ ‘ಪ್ರಜಾವಾಣಿ’ಗೆ<br />ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಯಪುರ: </strong>ಮೈಸೂರು ತಾಲ್ಲೂಕಿನ ಶ್ರೀರಾಂಪುರ ಗ್ರಾಮದ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ. ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗ ಭೀತಿ ಕಾಡುತ್ತಿದೆ.</p>.<p>ಪರಸಯ್ಯನಹುಂಡಿ ಹೊರ ವರ್ತುಲ ರಸ್ತೆ ಬದಿಯಲ್ಲೂ ಕಸದ ರಾಶಿ ಬಿದ್ದು, ಗಬ್ಬು ನಾರುತ್ತಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಬಸ್ ನಿಲ್ದಾಣ ಹತ್ತಿರದ ಮುಖ್ಯರಸ್ತೆಯಲ್ಲಿ ಕೊಳಚೆ ನೀರು ಸಂಗ್ರಹವಾಗಿ ವಾಸನೆ ಬೀರುತ್ತಿದೆ. ಇದರಿಂದ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.</p>.<p>ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು<br />ಪರದಾಡುವಂತಾಗಿದೆ.</p>.<p>‘ಹೊರ ವರ್ತುಲ ರಸ್ತೆಯ ವೃತ್ತದಲ್ಲಿರುವ ನಂದಿನಿ ಪಾರ್ಲರ್ ಪಕ್ಕದಲ್ಲಿ ಡಕ್ ನಿರ್ಮಿಸಲು ಗುಂಡಿ ತೆಗೆದು ವರ್ಷವಾಗಿದೆ. ಕಾಮಗಾರಿ ಅರ್ಧಕ್ಕೆ ನಿಂತಿದೆ. ಶೀಘ್ರ ಕಾಮಗಾರಿ ಪುನರಾರಂಭಿಸಿ ಸಮಸ್ಯೆ ಬಗೆಹರಿಸಬೇಕು’ ಎಂದು ಗ್ರಾಮದ ಕೆಂಪಣ್ಣ ಒತ್ತಾಯಿಸಿದರು.</p>.<p>‘ಕೆಲ ಬೀದಿಬದಿ ವ್ಯಾಪಾರಿಗಳು ಮತ್ತು ಮಾಂಸದ ಅಂಗಡಿಯವರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬೀಸಾಡುತ್ತಿದ್ದಾರೆ. ಮಾಂಸದ ತ್ಯಾಜ್ಯದಿಂದ ಬೀದಿನಾಯಿಗಳ ಕಾಟ ಹೆಚ್ಚಾಗಿದ್ದು, ಜನರ ಮೇಲೆಯೇ ದಾಳಿ ಮಾಡುತ್ತಿವೆ. ದಯಮಾಡಿ ರಸ್ತೆ ಬದಿಯಲ್ಲಿ ತ್ಯಾಜ್ಯ ಸುರಿಯದೇ ಗ್ರಾಮದ ಹೊರ ವಲಯದಲ್ಲಿ ಹಾಕಬೇಕು’ ಎಂದು ಅವರು<br />ಆಗ್ರಹಿಸಿದರು.</p>.<p>‘ಶ್ರೀರಾಂಪುರ ಗ್ರಾಮದ ವ್ಯಾಪ್ತಿಯಲ್ಲಿ ಅನೈರ್ಮಲ್ಯ ಮತ್ತು ಹದಗೆಟ್ಟ ರಸ್ತೆಗಳ ಬಗ್ಗೆ ಗಮನಕ್ಕೆ ಬಂದಿದ್ದು, ಸ್ವಚ್ಛತೆ ಕಾಪಾಡಲು ₹2 ಲಕ್ಷ ಅನುದಾನ ಮೀಸಲಿಡಲಾಗಿದೆ. ಈ ಸಂಬಂಧ ಪಿಡಿಒ ಜೊತೆ ಚರ್ಚಿಸಲಾಗುವುದು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣಕುಮಾರ್ ‘ಪ್ರಜಾವಾಣಿ’ಗೆ<br />ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>